AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣ ಉಳಿಸಿಕೊಳ್ಳಲು ಅಫ್ಘಾನಿಸ್ತಾನದ ರಸ್ತೆಗಳಲ್ಲಿ ಭಯದಿಂದ ಓಡಿದ ನಿರ್ದೇಶಕಿ; ವಿಡಿಯೋ ವೈರಲ್​  

ಅಪ್ಘಾನಿಸ್ತಾನದ ಸಾಕಷ್ಟು ಪ್ರಾಂತ್ಯಗಳು ತಾಲೀಬಾನಿಗಳ ವಶವಾಗಿದೆ. ಸಾಕಷ್ಟು ಜನರು ಹತ್ಯೆಗೊಳಗಾಗಿದ್ದಾರೆ. ಮಹಿಳೆಯರು ಹಾಗೂ ಹೆಣ್ಣು ಮಕ್ಕಳನ್ನು ಕಂಡ ಕಂಡಲ್ಲಿ ಅತ್ಯಾಚಾರ ಮಾಡಲಾಗುತ್ತಿದೆ.

ಪ್ರಾಣ ಉಳಿಸಿಕೊಳ್ಳಲು ಅಫ್ಘಾನಿಸ್ತಾನದ ರಸ್ತೆಗಳಲ್ಲಿ ಭಯದಿಂದ ಓಡಿದ ನಿರ್ದೇಶಕಿ; ವಿಡಿಯೋ ವೈರಲ್​  
ಪ್ರಾಣ ಉಳಿಸಿಕೊಳ್ಳಲು ಅಫ್ಘಾನಿಸ್ತಾನದ ರಸ್ತೆಗಳಲ್ಲಿ ಭಯದಿಂದ ಓಡಿದ ನಿರ್ದೇಶಕಿ; ವಿಡಿಯೋ ವೈರಲ್​  
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 16, 2021 | 2:56 PM

ಅಮೆರಿಕ ಅಧ್ಯಕ್ಷ ಜೋ ಬೈಡನ್​ ಅವರು ಅಫ್ಘಾನಿಸ್ತಾನದಿಂದ ಸೇನೆ ಹಿಂಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಇದಾದ ಬೆನ್ನಲ್ಲೇ ಅಫ್ಘಾನಿಸ್ತಾನ ಅಲ್ಲೋಲ ಕಲ್ಲೋಲವಾಗಿದೆ. ಅಪ್ಘಾನಿಸ್ತಾನವನ್ನು ತಾಲೀಬಾನ್​ ಉಗ್ರರು ತಮ್ಮ ವಶಕ್ಕೆ ಪಡೆಯುತ್ತಿದ್ದಾರೆ. ಆಫ್ಘನ್​ ರಾಜಧಾನಿ ಕಾಬೂಲ್​ಅನ್ನು ವಶಕ್ಕೆ ಪಡೆಯುವ ಮೊದಲು ನಮ್ಮನ್ನು ರಕ್ಷಿಸಿ ಎಂದು ಅಲ್ಲಿನ ನಿರ್ದೇಶಕಿ ಪರಿಪರಿಯಾಗಿ ಮನವಿ ಮಾಡಿದ್ದಾರೆ. ಅಲ್ಲದೆ, ಸ್ವತಃ ಅವರೇ ರಸ್ತೆಗೆ ಇಳಿದು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ.

ಅಪ್ಘಾನಿಸ್ತಾನದ ಸಾಕಷ್ಟು ಪ್ರಾಂತ್ಯಗಳು ತಾಲೀಬಾನಿಗಳ ವಶವಾಗಿದೆ. ಸಾಕಷ್ಟು ಜನರು ಹತ್ಯೆಗೊಳಗಾಗಿದ್ದಾರೆ. ಮಹಿಳೆಯರು ಹಾಗೂ ಹೆಣ್ಣು ಮಕ್ಕಳನ್ನು ಕಂಡ ಕಂಡಲ್ಲಿ ಅತ್ಯಾಚಾರ ಮಾಡಲಾಗುತ್ತಿದೆ. ಅನೇಕ ಶಾಲೆಗಳು ನೆಲಸಮಗೊಂಡಿವೆ. ಈಗ ಅಪ್ಘಾನಿಸ್ತಾನದ ನಿರ್ದೇಶಕಿ ಸಹ್ರಾ ಕರೀಮಿ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದನ್ನು ಬರೆದುಕೊಂಡು ಸಹಾಯ ಕೇಳಿದ್ದಾರೆ. ‘ಚಲನಚಿತ್ರ ನಿರ್ಮಾತೃರರನ್ನು ತಾಲೀಬಾನ್​ನಿಂದ ರಕ್ಷಿಸಬೇಕು ಎಂದು ನಾನು ನೋವಿನಿಂದ ಕೇಳಿಕೊಳ್ಳುತ್ತಿದ್ದೇನೆ. ಕಳೆದ ಕೆಲವು ವಾರಗಳಲ್ಲಿ ಹಲವು ಪ್ರಾಂತ್ಯಗಳ ಮೇಲೆ ತಾಲೀಬಾನ್‌ ಉಗ್ರರು ನಿಯಂತ್ರಣ ಸಾಧಿಸಿದ್ದಾರೆ. ಅವರು ಇಲ್ಲಿ ಹತ್ಯಾಕಾಂಡ ಮಾಡುತ್ತಿದ್ದಾರೆ. ಅನೇಕ ಮಕ್ಕಳನ್ನು ಅವರು ಅಪಹರಿಸಿದ್ದಾರೆ. ಹುಡುಗಿಯರನ್ನು ಮಾರಿದ್ದಾರೆ’ ಎಂದು ಪತ್ರ ಆರಂಭಿಸಿದ್ದಾರೆ ಸಹ್ರಾ.

‘ಮಾಧ್ಯಮಗಳು, ಸರ್ಕಾರಗಳು ಮತ್ತು ವಿಶ್ವ ಮಾನವ ಹಕ್ಕುಗಳ ರಕ್ಷಣಾ ಸಂಘಟನೆಗಳು ಮೌನವಾಗಿವೆ. ತಾಲೀಬಾನ್ ಜೊತೆಗಿನ ಈ ಶಾಂತಿ ಒಪ್ಪಂದ ಎಂದಿಗೂ ಕಾನೂನುಬದ್ಧವಾಗಿರಲಿಲ್ಲ. ನಮ್ಮ ಜನರನ್ನು ತಾಲೀಬಾನ್ ಕ್ರೂರವಾಗಿ ನಡೆಸಿಕೊಳ್ಳುತ್ತಿದೆ. ತಾಲೀಬಾನ್​ಗಳು ಕಾಬೂಲ್​ಅನ್ನು ವಶಪಡಿಸಿಕೊಳ್ಳುವ ಮೊದಲು ದಯವಿಟ್ಟು ನಮಗೆ ಸಹಾಯ ಮಾಡಿ. ನಮಗೆ ಸ್ವಲ್ಪ ಸಮಯವಿದೆ, ಬಹುಶಃ ಒಂದು ದಿನ’ ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ. ಇನ್ನು, ರಸ್ತೆಗಿಳಿದು ವಿಡಿಯೋ ಕೂಡ ಮಾಡಿ ಹಾಕಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್​ ಆಗುತ್ತಿದೆ.

ಕಳೆದ ಕೆಲ ದಿನಗಳ ಹಿಂದೆ ತಾಲೀಬಾನಿಗಳು ಕಾಬೂಲ್​ ಪ್ರವೇಶಿಸಿ ಅಲ್ಲಿನ ಕಾಬೂಲ್​ ವಿಶ್ವವಿದ್ಯಾಲಯವನ್ನು ವಶಕ್ಕೆ ಪಡೆದಿದ್ದರು. ಆದರೆ, ಕಾಬೂಲ್​ಅನ್ನು ನಾವು ಎಂದಿಗೂ ವಶಕ್ಕೆ ಪಡೆಯುವುದಿಲ್ಲ. ಅಲ್ಲಿ ಜನರು ಸ್ವತಂತ್ರವಾಗಿ ಬದುಕುವುದಕ್ಕೆ ಅವಕಾಶವಿದೆ ಎಂದು ತಾಲೀಬಾನಿ ಸಂಘಟನೆ ಹೇಳಿತ್ತು.

ಇದನ್ನು ಓದಿ: ಅಫ್ಘಾನಿಸ್ತಾನದ ಪ್ರಮುಖ ನಗರಗಳಾದ ಲಷ್ಕರ್ ಗಹ್, ಕಂದಹಾರ್ ವಶಪಡಿಸಿಕೊಂಡ ತಾಲೀಬಾನ್

ಅಪ್ಘಾನಿಸ್ತಾನದಲ್ಲಿ ಯುದ್ಧ ಸನ್ನಿವೇಶ: ಸೈನ್ಯ ಹಿಂಪಡೆಯುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದ ಜೋ ಬೈಡನ್​

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ