AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ನಿಂದನೆ ಮಾಡಿದ ಖ್ಯಾತ ಕಿರುತೆರೆ ನಟಿ ಮುನ್​ಮುನ್​ ದತ್ತ ವಿರುದ್ಧ ಎಫ್​ಐಆರ್​ ದಾಖಲು

Munmun Dutta: ‘ತಾರಕ್​ ಮೆಹ್ತಾ ಕಾ ಉಲ್ಟಾ ಚಸ್ಮಾ’ಧಾರಾವಾಹಿಯ ಬಬಿತಾ ಪಾತ್ರದ ಮೂಲಕ ಮುನ್​ಮುನ್​ ದತ್ತ ಹೆಚ್ಚು ಫೇಮಸ್​.​ ಕೆಲವೇ ದಿನಗಳ ಹಿಂದೆ ಅವರ ಒಂದು ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿತ್ತು.

ಜಾತಿ ನಿಂದನೆ ಮಾಡಿದ ಖ್ಯಾತ ಕಿರುತೆರೆ ನಟಿ ಮುನ್​ಮುನ್​ ದತ್ತ ವಿರುದ್ಧ ಎಫ್​ಐಆರ್​ ದಾಖಲು
ಮುನ್​ಮುನ್​ ದತ್ತ
ಮದನ್​ ಕುಮಾರ್​
| Edited By: |

Updated on: May 29, 2021 | 3:30 PM

Share

ಹಿಂದಿ ಕಿರುತೆರೆಯ ಖ್ಯಾತ ನಟಿ ಮುನ್​ಮುನ್​ ದತ್ತ ವಿರುದ್ಧ ಮುಂಬೈನಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಕಾಯ್ದೆ 1989ರ ಅಡಿಯಲ್ಲಿ ಕೇಸ್​ ದಾಖಲಾಗಿದೆ. ಅಖಿಲ ಭಾರತೀಯ ಬಲಾಯಿ ಮಹಾಸಂಘ ಅಧ್ಯಕ್ಷ ಮನೋಜ್​ ಅವರು ಮುನ್​ಮುನ್​ ದತ್ತ ವಿರುದ್ಧ ದೂರು ನೀಡಿದ್ದರು. ನಟಿಯ ವಿರುದ್ಧ ಅನೇಕ ಕಡೆಗಳಲ್ಲಿ ದೂರು ಸಲ್ಲಿಕೆ ಆಗಿರುವುದರಿಂದ ಮಧ್ಯಪ್ರದೇಶ ಮತ್ತು ಹರಿಯಾಣದಲ್ಲೂ ಎಫ್​ಐಆರ್​ ದಾಖಲು ಮಾಡಲಾಗಿದೆ. ಈ ಮೂಲಕ ಮುನ್​ಮುನ್​ ದತ್ತ ಪೇಚಿಗೆ ಸಿಲುಕಿದಂತಾಗಿದೆ.

‘ತಾರಕ್​ ಮೆಹ್ತಾ ಕಾ ಉಲ್ಟಾ ಚಸ್ಮಾ’ಧಾರಾವಾಹಿಯ ಬಬಿತಾ ಪಾತ್ರದ ಮೂಲಕ ಮುನ್​ಮುನ್​ ದತ್ತ ಹೆಚ್ಚು ಫೇಮಸ್​.​ ಕೆಲವೇ ದಿನಗಳ ಹಿಂದೆ ಅವರ ಒಂದು ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿತ್ತು. ಆ ವಿಡಿಯೋದಲ್ಲಿ ಮುನ್​ಮುನ್​ ದತ್​ ಅವರು ಜಾತಿ ನಿಂದನೆಯ ಪದವನ್ನು ಬಳಕೆ ಮಾಡಿದ್ದರು. ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ಅವರ ವಿರುದ್ಧ ಜನರು ಆಕ್ರೋಶ ವ್ಯಕ್ತ ಪಡಿಸಿದ್ದರು.

ಯೂಟ್ಯೂಬ್​ ವಿಡಿಯೋದಲ್ಲಿ ತಮ್ಮ ಮೇಕಪ್ ಬಗ್ಗೆ ಮುನ್​ಮುನ್​ ದತ್ತ ಮಾಹಿತಿ ನೀಡುತ್ತಿದ್ದರು. ‘ಯೂಟ್ಯೂಬ್​ನಲ್ಲಿ ಎಲ್ಲರ ಎದುರಿಗೆ ಬರುತ್ತಿದ್ದೇನೆ. ಚೆನ್ನಾಗಿ ಕಾಣಬೇಕು ಅಂತ ಸ್ವಲ್ಪ ಮೇಕಪ್​ ಮಾಡಿಕೊಂಡಿದ್ದೇನೆ. ಆ ಜಾತಿಯವರ ರೀತಿ ಕಾಣಲು ನನಗೆ ಇಷ್ಟ ಇಲ್ಲ’ಎಂದು ಒಂದು ನಿರ್ದಿಷ್ಟ ಜಾತಿಯ ಹೆಸರು ಹೇಳಿದ್ದರು. ಅವರು ಆ ಜಾತಿ ಹೆಸರು ಬಳಸಿದ್ದರಿಂದಲೇ ವಿವಾದ ಭುಗಿಲೆದ್ದಿತ್ತು. ಸೋಶಿಯಲ್​ ಮೀಡಿಯಾದಲ್ಲಿ ಮುನ್​ಮುನ್​ ದತ್ತ ಅವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದರು.

ತಮ್ಮ ಹೇಳಿಕೆಯಿಂದ ವಿವಾದ ಆಗುತ್ತಿದೆ ಎಂಬುದು ತಿಳಿಯುತ್ತಿದ್ದಂತೆಯೇ ಮುನ್​ಮುನ್​ ದತ್ತ ಸೋಶಿಯಲ್​ ಮೀಡಿಯಾದಲ್ಲಿ ಕ್ಷಮೆ ಕೇಳಿದ್ದರು. ‘ಯಾರಿಗೂ ನೋವು ಮಾಡಬೇಕು ಎಂಬ ಉದ್ದೇಶದಿಂದ ನಾನು ಆ ಪದ ಬಳಸಿರಲಿಲ್ಲ. ನನ್ನ ಭಾಷೆಯ ಮಿತಿಯಿಂದಾಗಿ ಆ ಪದದ ಸರಿಯಾದ ಅರ್ಥ ನನಗೆ ತಿಳಿದಿರಲಿಲ್ಲ. ಎಲ್ಲರ ಜಾತಿ, ಧರ್ಮ, ಜನಾಂಗದ ಬಗ್ಗೆ ನಾನು ಗೌರವ ಹೊಂದಿದ್ದೇನೆ. ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ’ಎಂದು ಅವರು​ ಟ್ವಿಟರ್​ನಲ್ಲಿ ಬರೆದುಕೊಂಡಿದ್ದರು.

ನಟಿಯ ಈ ಬಣ್ಣದ ಮಾತುಗಳಿಂದ ಯಾರೂ ರಾಜಿ ಆಗಿಲ್ಲ. ಮಾಡಿದ ತಪ್ಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಎಫ್​ಐಆರ್​ ದಾಖಲಾಗುವವರೆಗೂ ಜನರು ಹೋರಾಟ ಮಾಡಿದ್ದಾರೆ. ಒಟ್ಟಾರೆ ಈ ವಿವಾದ ಮುನ್​ಮುನ್​ ದತ್ತ ಅವರ ವೃತ್ತಿಜೀವನದಲ್ಲೊಂದು ಕಪ್ಪು ಚುಕ್ಕಿ ಆದಂತಾಗಿದೆ.

ಇದನ್ನೂ ಓದಿ:

ಜಾತಿ ನಿಂದನೆ ಆರೋಪ: ಪತಿಯ ಬಂಧನ ಖಂಡಿಸಿ ಧರಣಿಗೆ ಕೂತ ಮಹಿಳೆ ಪೊಲೀಸರ ವಶಕ್ಕೆ

ಜಾತಿ ನಿಂದನೆ ಆರೋಪ: ಕ್ರಿಕೆಟಿಗ ಯುವರಾಜ್​ ಸಿಂಗ್​ ವಿರುದ್ಧ 8 ತಿಂಗಳ ನಂತರ ದಾಖಲಾಯ್ತು FIR

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ