AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪಾಸಿಟಿವ್​ ಆಗಿದ್ದರೂ ಊರೆಲ್ಲ ಸುತ್ತಾಡಿದ ಬಿಗ್​ ಬಾಸ್​ ಸ್ಪರ್ಧಿ! ಕೇಸ್​ ಜಡಿದು ಬುದ್ಧಿ ಕಲಿಸಿದ ಅಧಿಕಾರಿಗಳು

ಕೆಲವೇ ದಿನಗಳ ಹಿಂದೆ ಗೌಹರ್​ ಖಾನ್ ಅವರಿಗೆ ಕೊರೊನಾ ವೈರಸ್​ ತಗುಲಿರುವುದು ದೃಢವಾಗಿತ್ತು. ಹಾಗಿದ್ದರೂ ಕೂಡ ಅವರು ನಿರ್ಲಕ್ಷ್ಯ ತೋರಿದ್ದಾರೆ. ಕ್ವಾರಂಟೈನ್​ ಆಗುವ ಬದಲು ಎಲ್ಲ ಕಡೆ ಸುತ್ತಾಡಿಕೊಂಡಿದ್ದಾರೆ.

ಕೊರೊನಾ ಪಾಸಿಟಿವ್​ ಆಗಿದ್ದರೂ ಊರೆಲ್ಲ ಸುತ್ತಾಡಿದ ಬಿಗ್​ ಬಾಸ್​ ಸ್ಪರ್ಧಿ! ಕೇಸ್​ ಜಡಿದು ಬುದ್ಧಿ ಕಲಿಸಿದ ಅಧಿಕಾರಿಗಳು
ಗೌಹರ್​ ಖಾನ್
ಮದನ್​ ಕುಮಾರ್​
|

Updated on:Mar 15, 2021 | 5:34 PM

Share

ದೇಶದೆಲ್ಲೆಡೆ ಕೊರೊನಾ ವೈರಸ್​ನ ಎರಡನೇ ಅಲೆ ಹಬ್ಬುತ್ತಿದೆ. ಮತ್ತೆ ಲಾಕ್​ಡೌನ್​ ಆಗಬಹುದಾದ ಆತಂಕ ನಿರ್ಮಾಣ ಆಗುತ್ತಿದೆ. ಹಾಗಿದ್ದರೂ ಅನೇಕರಿಗೆ ಇದರ ಬಗ್ಗೆ ಕಾಳಜಿ ಇದ್ದಂತಿಲ್ಲ. ಜನ ಸಾಮಾನ್ಯರು ಮಾತ್ರವಲ್ಲದೆ ಸೆಲೆಬ್ರಿಟಿಗಳು ಕೂಡ ಕಾನೂನು ಪಾಲಿಸುವಲ್ಲಿ ಎಡವುತ್ತಿದ್ದಾರೆ. ಅಂಥವರಿಗೆ ಪಾಠ ಕಲಿಸಲಾಗುತ್ತಿದೆ. ಬಾಲಿವುಡ್​ ನಟಿ ಗೌಹರ್​ ಖಾನ್​ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ ಮೂಲಕ ಇತರರಿಗೂ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

ಕೆಲವು ಹಿಂದಿ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿರುವ ಗೌಹರ್​ ಖಾನ್​ ಅವರು ಬಿಗ್​ ಬಾಸ್​ನಲ್ಲೂ ಸ್ಪರ್ಧಿಸಿದ್ದರು. ಕೆಲವೇ ದಿನಗಳ ಹಿಂದೆ ಅವರಿಗೆ ಕೊರೊನಾ ವೈರಸ್​ ತಗುಲಿರುವುದು ದೃಢವಾಗಿತ್ತು. ಹಾಗಿದ್ದರೂ ಕೂಡ ಅವರು ನಿರ್ಲಕ್ಷ್ಯ ತೋರಿದ್ದಾರೆ. ಕ್ವಾರಂಟೈನ್​ ಆಗುವ ಬದಲು ಎಲ್ಲ ಕಡೆ ಸುತ್ತಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಚಿತ್ರೀಕರಣದಲ್ಲೂ ಪಾಲ್ಗೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಇತರರ ಪ್ರಾಣಕ್ಕೂ ಅಪಾಯ ಇರುವುದರಿಂದ ಗೌಹರ್​ ಖಾನ್​ ವಿರುದ್ಧ ಬೃಹನ್​ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

ಕೊರೊನಾ ಪಾಸಿಟಿವ್​ ಆಗಿದ್ದರೂ ಕೂಡ ಗೌಹರ್​ ಮನೆಯಲ್ಲಿ ಇಲ್ಲ ಎಂಬ ಮಾಹಿತಿ ಕೇಳಿಬಂದ ಹಿನ್ನೆಲೆಯಲ್ಲಿ ಬಿಎಂಸಿ ಅಧಿಕಾರಿಗಳು ನಟಿಯ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದರು. ಅಲ್ಲಿ ಗೌಹರ್​ ಇಲ್ಲದಿರುವುದು ಖಚಿತ ಆಯಿತು. ನಂತರ ಅವರಿಗೆ ಕರೆ ಮಾಡಿದಾಗ ತಾವು ಮತ್ತೆ ಪರೀಕ್ಷೆ ಮಾಡಿಸಿದ್ದು, ಈಗ ನೆಗೆಟಿವ್​ ವರದಿ ಬಂದಿದೆ ಎಂದು ಗೌಹರ್​ ಉತ್ತರಿಸಿದರು. ಅವರ ಸಮಜಾಯಿಷಿಯನ್ನು ಅಧಿಕಾರಿಗಳು ಒಪ್ಪಿಕೊಂಡಿಲ್ಲ. ಕೂಡಲೇ ಮನೆಗೆ ಬರಬೇಕು ಎಂದು ಸೂಚನೆ ನೀಡಿರುವುದೂ ಅಲ್ಲದೆ, ಅವರ ವಿರುದ್ಧ ಪ್ರಕರಣ ದಾಖಲಿಸಿ ಕ್ವಾರಂಟೈನ್​ಗೆ ಒಳಪಡಿಸಿದ್ದಾರೆ.

ನಟಿಯ ವಿರುದ್ಧ ದಾಖಲಾಗಿರುವ ದೂರಿನ ಎಫ್​ಐಆರ್​ ಪ್ರತಿಯನ್ನು ಸೋಶಿಯಲ್​ ಮೀಡಿಯಾದಲ್ಲಿ ಬಿಎಂಸಿ ಹಂಚಿಕೊಂಡಿದೆ. ‘ನಗರದ ಸುರಕ್ಷತೆ ವಿಚಾರದಲ್ಲಿ ರಾಜಿ ಆಗುವುದಿಲ್ಲ. ಕೋವಿಡ್​ ನಿಯಮಗಳು ಎಲ್ಲರಿಗೂ ಅನ್ವಯ ಆಗುತ್ತವೆ. ಅದನ್ನು ಸಾರ್ವಜನಿಕರು ಪಾಲಿಸಬೇಕು ಮತ್ತು ವೈರಸ್​ ವಿರುದ್ಧ ಹೋರಾಡಲು ಸಹಾಯ ಮಾಡಬೇಕು’ ಎಂದು ಟ್ವೀಟ್​ ಮಾಡಲಾಗಿದೆ. ಎಲ್ಲ ಚಿತ್ರರಂಗದಲ್ಲೂ ಸಿನಿಮಾ ಚಟುವಟಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿವೆ. ಈ ನಡುವೆ ಕೋವಿಡ್​ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಅದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಸರ್ಕಾರದ ಕೊವಿಡ್​ ಮಾರ್ಗಸೂಚಿಗೆ ಕ್ಯಾರೇ ಅನ್ನದ ಜನ: ಸಾವಿರದ ಸನಿಹಕ್ಕೆ ತಲುಪಿದ ಕೊರೊನಾ ಕೇಸ್​!

Published On - 5:27 pm, Mon, 15 March 21

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು