AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪಾಸಿಟಿವ್​ ಆಗಿದ್ದರೂ ಊರೆಲ್ಲ ಸುತ್ತಾಡಿದ ಬಿಗ್​ ಬಾಸ್​ ಸ್ಪರ್ಧಿ! ಕೇಸ್​ ಜಡಿದು ಬುದ್ಧಿ ಕಲಿಸಿದ ಅಧಿಕಾರಿಗಳು

ಕೆಲವೇ ದಿನಗಳ ಹಿಂದೆ ಗೌಹರ್​ ಖಾನ್ ಅವರಿಗೆ ಕೊರೊನಾ ವೈರಸ್​ ತಗುಲಿರುವುದು ದೃಢವಾಗಿತ್ತು. ಹಾಗಿದ್ದರೂ ಕೂಡ ಅವರು ನಿರ್ಲಕ್ಷ್ಯ ತೋರಿದ್ದಾರೆ. ಕ್ವಾರಂಟೈನ್​ ಆಗುವ ಬದಲು ಎಲ್ಲ ಕಡೆ ಸುತ್ತಾಡಿಕೊಂಡಿದ್ದಾರೆ.

ಕೊರೊನಾ ಪಾಸಿಟಿವ್​ ಆಗಿದ್ದರೂ ಊರೆಲ್ಲ ಸುತ್ತಾಡಿದ ಬಿಗ್​ ಬಾಸ್​ ಸ್ಪರ್ಧಿ! ಕೇಸ್​ ಜಡಿದು ಬುದ್ಧಿ ಕಲಿಸಿದ ಅಧಿಕಾರಿಗಳು
ಗೌಹರ್​ ಖಾನ್
ಮದನ್​ ಕುಮಾರ್​
|

Updated on:Mar 15, 2021 | 5:34 PM

Share

ದೇಶದೆಲ್ಲೆಡೆ ಕೊರೊನಾ ವೈರಸ್​ನ ಎರಡನೇ ಅಲೆ ಹಬ್ಬುತ್ತಿದೆ. ಮತ್ತೆ ಲಾಕ್​ಡೌನ್​ ಆಗಬಹುದಾದ ಆತಂಕ ನಿರ್ಮಾಣ ಆಗುತ್ತಿದೆ. ಹಾಗಿದ್ದರೂ ಅನೇಕರಿಗೆ ಇದರ ಬಗ್ಗೆ ಕಾಳಜಿ ಇದ್ದಂತಿಲ್ಲ. ಜನ ಸಾಮಾನ್ಯರು ಮಾತ್ರವಲ್ಲದೆ ಸೆಲೆಬ್ರಿಟಿಗಳು ಕೂಡ ಕಾನೂನು ಪಾಲಿಸುವಲ್ಲಿ ಎಡವುತ್ತಿದ್ದಾರೆ. ಅಂಥವರಿಗೆ ಪಾಠ ಕಲಿಸಲಾಗುತ್ತಿದೆ. ಬಾಲಿವುಡ್​ ನಟಿ ಗೌಹರ್​ ಖಾನ್​ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ ಮೂಲಕ ಇತರರಿಗೂ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

ಕೆಲವು ಹಿಂದಿ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿರುವ ಗೌಹರ್​ ಖಾನ್​ ಅವರು ಬಿಗ್​ ಬಾಸ್​ನಲ್ಲೂ ಸ್ಪರ್ಧಿಸಿದ್ದರು. ಕೆಲವೇ ದಿನಗಳ ಹಿಂದೆ ಅವರಿಗೆ ಕೊರೊನಾ ವೈರಸ್​ ತಗುಲಿರುವುದು ದೃಢವಾಗಿತ್ತು. ಹಾಗಿದ್ದರೂ ಕೂಡ ಅವರು ನಿರ್ಲಕ್ಷ್ಯ ತೋರಿದ್ದಾರೆ. ಕ್ವಾರಂಟೈನ್​ ಆಗುವ ಬದಲು ಎಲ್ಲ ಕಡೆ ಸುತ್ತಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಚಿತ್ರೀಕರಣದಲ್ಲೂ ಪಾಲ್ಗೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಇತರರ ಪ್ರಾಣಕ್ಕೂ ಅಪಾಯ ಇರುವುದರಿಂದ ಗೌಹರ್​ ಖಾನ್​ ವಿರುದ್ಧ ಬೃಹನ್​ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

ಕೊರೊನಾ ಪಾಸಿಟಿವ್​ ಆಗಿದ್ದರೂ ಕೂಡ ಗೌಹರ್​ ಮನೆಯಲ್ಲಿ ಇಲ್ಲ ಎಂಬ ಮಾಹಿತಿ ಕೇಳಿಬಂದ ಹಿನ್ನೆಲೆಯಲ್ಲಿ ಬಿಎಂಸಿ ಅಧಿಕಾರಿಗಳು ನಟಿಯ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದರು. ಅಲ್ಲಿ ಗೌಹರ್​ ಇಲ್ಲದಿರುವುದು ಖಚಿತ ಆಯಿತು. ನಂತರ ಅವರಿಗೆ ಕರೆ ಮಾಡಿದಾಗ ತಾವು ಮತ್ತೆ ಪರೀಕ್ಷೆ ಮಾಡಿಸಿದ್ದು, ಈಗ ನೆಗೆಟಿವ್​ ವರದಿ ಬಂದಿದೆ ಎಂದು ಗೌಹರ್​ ಉತ್ತರಿಸಿದರು. ಅವರ ಸಮಜಾಯಿಷಿಯನ್ನು ಅಧಿಕಾರಿಗಳು ಒಪ್ಪಿಕೊಂಡಿಲ್ಲ. ಕೂಡಲೇ ಮನೆಗೆ ಬರಬೇಕು ಎಂದು ಸೂಚನೆ ನೀಡಿರುವುದೂ ಅಲ್ಲದೆ, ಅವರ ವಿರುದ್ಧ ಪ್ರಕರಣ ದಾಖಲಿಸಿ ಕ್ವಾರಂಟೈನ್​ಗೆ ಒಳಪಡಿಸಿದ್ದಾರೆ.

ನಟಿಯ ವಿರುದ್ಧ ದಾಖಲಾಗಿರುವ ದೂರಿನ ಎಫ್​ಐಆರ್​ ಪ್ರತಿಯನ್ನು ಸೋಶಿಯಲ್​ ಮೀಡಿಯಾದಲ್ಲಿ ಬಿಎಂಸಿ ಹಂಚಿಕೊಂಡಿದೆ. ‘ನಗರದ ಸುರಕ್ಷತೆ ವಿಚಾರದಲ್ಲಿ ರಾಜಿ ಆಗುವುದಿಲ್ಲ. ಕೋವಿಡ್​ ನಿಯಮಗಳು ಎಲ್ಲರಿಗೂ ಅನ್ವಯ ಆಗುತ್ತವೆ. ಅದನ್ನು ಸಾರ್ವಜನಿಕರು ಪಾಲಿಸಬೇಕು ಮತ್ತು ವೈರಸ್​ ವಿರುದ್ಧ ಹೋರಾಡಲು ಸಹಾಯ ಮಾಡಬೇಕು’ ಎಂದು ಟ್ವೀಟ್​ ಮಾಡಲಾಗಿದೆ. ಎಲ್ಲ ಚಿತ್ರರಂಗದಲ್ಲೂ ಸಿನಿಮಾ ಚಟುವಟಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿವೆ. ಈ ನಡುವೆ ಕೋವಿಡ್​ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಅದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಸರ್ಕಾರದ ಕೊವಿಡ್​ ಮಾರ್ಗಸೂಚಿಗೆ ಕ್ಯಾರೇ ಅನ್ನದ ಜನ: ಸಾವಿರದ ಸನಿಹಕ್ಕೆ ತಲುಪಿದ ಕೊರೊನಾ ಕೇಸ್​!

Published On - 5:27 pm, Mon, 15 March 21

ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ಯಾವ ನೈತಿಕತೆಯೊಂದಿಗೆ ಯತ್ನಾಳ್ ಮಾತಾಡುತ್ತಾರೆ? ಶಿವರಾಜ್ ತಂಗಡಿಗಿ
ಯಾವ ನೈತಿಕತೆಯೊಂದಿಗೆ ಯತ್ನಾಳ್ ಮಾತಾಡುತ್ತಾರೆ? ಶಿವರಾಜ್ ತಂಗಡಿಗಿ