AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆದಿದೆ. ಮುಂಜಾನೆ 5ಗಂಟೆಗೆ ಗುಂಡಿನ ದಾಳಿ ಸಂಭವಿಸಿದೆ.

Salman Khan: ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ
ಸಲ್ಮಾನ್ ಖಾನ್
ನಯನಾ ರಾಜೀವ್
|

Updated on:Apr 14, 2024 | 8:24 AM

Share

ಬಾಲಿವುಡ್ ನಟ ಸಲ್ಮಾನ್​ ಖಾನ್(Salman Khan) ಮನೆ ಮುಂದೆ ಗುಂಡಿನ ದಾಳಿ ನಡೆದಿದೆ. ಮುಂಜಾನೆ 5ಗಂಟೆಗೆ ಗುಂಡಿನ ದಾಳಿ ಸಂಭವಿಸಿದೆ. ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ. ಬೆಳಗಿನ ಜಾವ ಇಬ್ಬರು ಅಪರಿಚಿತರು ಈ ಈ ಗುಂಡಿನ ದಾಳಿ ನಡೆಸಿದ್ದಾರೆ.

ಇಬ್ಬರು ಶೂಟರ್‌ಗಳು ಬೈಕ್‌ನಲ್ಲಿ ಬಂದು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸದ್ಯಕ್ಕೆ ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಈ ಗುಂಡಿನ ದಾಳಿಯ ನಂತರ ಮುಂಬೈ ಕ್ರೈಂ ಬ್ರಾಂಚ್ ಜೊತೆಗೆ ಬಾಂದ್ರಾ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದೆ. ಅಲ್ಲದೆ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಡಿಸಿಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಓದಿ: ಸಲ್ಮಾನ್ ಖಾನ್ ಹೊಸ ಚಿತ್ರಕ್ಕೆ ‘ಸಿಖಂದರ್’ ಶೀರ್ಷಿಕೆ; 2025ರ ಈದ್​ಗೆ ರಿಲೀಸ್

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರು ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಅನೇಕ ಬಾರಿ ಬೆದರಿಕೆ ಹಾಕಿದ್ದರು. ಇತ್ತೀಚೆಗೆ, ಲಾರೆನ್ಸ್ ಬಿಷ್ಣೋಯ್ ಕೆನಡಾದಲ್ಲಿರುವ ನಟ-ಗಾಯಕ ಗಿಪ್ಪಿ ಗ್ರೆವಾಲ್ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದರು.

2023 ರಲ್ಲಿ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಸಲ್ಮಾನ್ ಕಚೇರಿಗೆ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತು. ಲಾರೆನ್ಸ್ ಬಿಷ್ಣೋಯ್ ಬೆದರಿಕೆಯ ನಂತರ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಿಸಿದ್ದರು. ಸದ್ಯ ಸಲ್ಮಾನ್ ಗೆ ವೈ ಪ್ಲಸ್ ಭದ್ರತೆ ನೀಡಲಾಗಿದೆ.

ಈಗ ನಾನು ಗೂಂಡಾ ಅಲ್ಲ, ಆದರೆ ಸಲ್ಮಾನ್ ಖಾನ್ ಅವರನ್ನು ಕೊಂದು ಗೂಂಡಾ ಆಗುತ್ತೇನೆ. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಭದ್ರತೆ ತೆಗೆದರೆ ಸಲ್ಮಾನ್ ಖಾನ್ ಅವರನ್ನು ಕೊಲ್ಲುತ್ತೇನೆ ಎಂದು ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ ಹೇಳಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:15 am, Sun, 14 April 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ