Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs Case ‘ಮೀನು ಹಿಡಿದಿದ್ದಾರೆ, ತಿಮಿಂಗಿಲ ಹಿಡಿಯೋದು ಬಾಕಿ ಇದೆ’ ಎಂದ ಇಂದ್ರಜಿತ್ ಲಂಕೇಶ್

ಮೀನು ಹಿಡಿದಿದ್ದಾರೆ, ತಿಮಿಂಗಿಲ ಹಿಡಿಯೋದು ಬಾಕಿ ಇದೆ. ಸ್ಯಾಂಡಲ್​ವುಡ್​ನ ನಟಿಯರು ಡ್ರಗ್ ಪೆಡ್ಲರ್​ಗಳಷ್ಟೇ ಅಲ್ಲ, ಡ್ರಗ್ಸ್ ದಂಧೆಯಲ್ಲಿ ಇನ್ನೂ ಹಲವರು ಇದ್ದಾರೆ ಎಂದು ಸಿಸಿಬಿ ವಿಚಾರಣೆಗೆ ಬಂದಿದ್ದ ವೇಳೆ ಇಂದ್ರಜಿತ್ ಲಂಕೇಶ್ ಹೇಳಿಕೆ ನೀಡಿದ್ದಾರೆ.

Drugs Case ‘ಮೀನು ಹಿಡಿದಿದ್ದಾರೆ, ತಿಮಿಂಗಿಲ ಹಿಡಿಯೋದು ಬಾಕಿ ಇದೆ’ ಎಂದ ಇಂದ್ರಜಿತ್ ಲಂಕೇಶ್
ನಿರ್ದೇಶಕ ಇಂದ್ರಜಿತ್ ಲಂಕೇಶ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jan 28, 2021 | 3:31 PM

ಬೆಂಗಳೂರು: ‘ಮೀನು ಹಿಡಿದಿದ್ದಾರೆ, ತಿಮಿಂಗಿಲ ಹಿಡಿಯೋದು ಬಾಕಿ ಇದೆ’ ಎಂದು ಬೆಂಗಳೂರಿನಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಡ್ರಗ್ಸ್ ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇಂದ್ರಜಿತ್ ಲಂಕೇಶ್​ಗೆ ನಿನ್ನೆ ಸಿಸಿಬಿ ನೋಟೀಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಇಂದ್ರಜಿತ್ ಆಗಮಿಸಿದ್ದರು. ಆದ್ರೆ ಇಂದು ವಿಚಾರಣೆ ನಡೆದಿಲ್ಲ. ಬೇರೊಂದು ದಿನ ನಿಗದಿ ಮಾಡಿ ವಿಚಾರಣೆಗೆ ಬರುವಂತೆ ಸೂಚಿಸುತ್ತೇವೆಂದು ಸಿಸಿಬಿ ತಿಳಿಸಿದೆ.

ಈ ವೇಳೆ ಮಾತನಾಡಿದ ಇಂದ್ರಜಿತ್ ಲಂಕೇಶ್​ ಮೀನು ಹಿಡಿದಿದ್ದಾರೆ, ತಿಮಿಂಗಿಲ ಹಿಡಿಯೋದು ಬಾಕಿ ಇದೆ. ಸ್ಯಾಂಡಲ್​ವುಡ್​ನ ನಟಿಯರು ಡ್ರಗ್ ಪೆಡ್ಲರ್​ಗಳಷ್ಟೇ ಅಲ್ಲ, ಡ್ರಗ್ಸ್ ದಂಧೆಯಲ್ಲಿ ಇನ್ನೂ ಹಲವರು ಇದ್ದಾರೆ ಎಂದು ಹೇಳಿದ್ರು.

ಡಿಸಿಪಿ ಬಸವರಾಜ್ ನಿನ್ನೆ ಕರೆ ಮಾಡಿ ಕರೆದ್ರು. ನಾನು ಕಳೆದ 6 ತಿಂಗಳಿನಿಂದ ಪೊಲೀಸರಿಗೆ ಸಹಕಾರ ನೀಡಿದ್ದೇನೆ. ತನಿಖೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ ವಶಪಡಿಸಿಕೊಂಡಿದ್ದಾರೆ. ಸಣ್ಣ ಮೀನನ್ನ ಹಿಡಿದಿದ್ದಾರೆ ದೊಡ್ಡ ತಿಮಿಂಗಿಲ ಹಿಡಿಯೋದು ಬಾಕಿ ಇದೆ. ಪೊಲೀಸರು ತನಿಖೆ ಮಾಡ್ತಿದ್ದಾರೆ ಇನ್ನೂ ಚುರುಕುಗೊಳಿಸ್ತಾರೆ. ನನಗೂ ಹಲವು ವಿಷಯಗಳು ಬಂದಿವೆ. ಒಬ್ಬ ವ್ಯಕ್ತಿಯಾಗಿ, ನಿರ್ದೇಶಕನಾಗಿ ನಾನು ಮಾಹಿತಿಯನ್ನ ಕೊಡಬಹುದಷ್ಟೆ.

ಸ್ಯಾಂಡಲ್​ವುಡ್​ನ ನಟಿಯರು ಡ್ರಗ್ ಪೆಡ್ಲರ್​ಗಳಷ್ಟೇ ಅಲ್ಲ, ಡ್ರಗ್ಸ್ ದಂಧೆಯಲ್ಲಿ ಇನ್ನೂ ಹಲವರು ಇದ್ದಾರೆ. ಈ ಹಿಂದೆ ಪೊಲೀಸರ ಕೈಗೆ ಸಿಕ್ಕಿದ್ದವರು ಈಗ ಆರಾಮಾಗಿದ್ದಾರೆ. ರಾಜಕಾರಣಿಗಳು, ನಿರ್ದೇಶಕ, ನಿರ್ಮಾಪಕರ ಮಕ್ಕಳ ಹೆಸರು ಈ ಕೇಸ್​​ನಲ್ಲಿ ಕೇಳಿ ಬಂದಿದೆ. ಇದು ರಾಜಕೀಯ ವಿಚಾರವಲ್ಲ, ಸದನದಲ್ಲಿ ಚರ್ಚೆ ಆಗಬೇಕು. ವೈಯಕ್ತಿಕವಾಗಿ ನಾನು ಯಾರ ಮೇಲೂ ಆರೋಪ ಮಾಡ್ತಿಲ್ಲ ಎಂದು ನಗರ ಪೊಲೀಸ್​ ಆಯುಕ್ತರ ಕಚೇರಿಯಲ್ಲಿ ಇಂದ್ರಜಿತ್ ಲಂಕೇಶ್ ಹೇಳಿದ್ರು.

ಸರಿಯಾದ ರೀತಿಯಲ್ಲಿ ತನಿಖೆ ಆದರೆ ಹೆಣಗಳು ಕೂಡ ಎದ್ದು ಕೂರಲಿವೆ -ಇಂದ್ರಜಿತ್​ ಲಂಕೇಶ್​

Published On - 3:30 pm, Thu, 28 January 21

Daily Horoscope: ಸಿಂಹ ರಾಶಿಯವರಿಗೆ ಇಂದು ಧನಯೋಗ ಮತ್ತು ಆರ್ಥಿಕ ಪ್ರಗತಿ
Daily Horoscope: ಸಿಂಹ ರಾಶಿಯವರಿಗೆ ಇಂದು ಧನಯೋಗ ಮತ್ತು ಆರ್ಥಿಕ ಪ್ರಗತಿ
ಫ್ರೀಡ್​​ಮ್ಯಾನ್ ಪೋಡ್​ಕ್ಯಾಸ್ಟ್​​​: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು
ಫ್ರೀಡ್​​ಮ್ಯಾನ್ ಪೋಡ್​ಕ್ಯಾಸ್ಟ್​​​: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!
ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ
ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ
ಒಂದೇ ಓವರ್​ನಲ್ಲಿ 6 ಸಿಕ್ಸ್​: ಏಕದಿನ ಕ್ರಿಕೆಟ್​ನ ಮೊದಲ ವಿಶ್ವ ದಾಖಲೆ
ಒಂದೇ ಓವರ್​ನಲ್ಲಿ 6 ಸಿಕ್ಸ್​: ಏಕದಿನ ಕ್ರಿಕೆಟ್​ನ ಮೊದಲ ವಿಶ್ವ ದಾಖಲೆ