AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs Case ‘ಮೀನು ಹಿಡಿದಿದ್ದಾರೆ, ತಿಮಿಂಗಿಲ ಹಿಡಿಯೋದು ಬಾಕಿ ಇದೆ’ ಎಂದ ಇಂದ್ರಜಿತ್ ಲಂಕೇಶ್

ಮೀನು ಹಿಡಿದಿದ್ದಾರೆ, ತಿಮಿಂಗಿಲ ಹಿಡಿಯೋದು ಬಾಕಿ ಇದೆ. ಸ್ಯಾಂಡಲ್​ವುಡ್​ನ ನಟಿಯರು ಡ್ರಗ್ ಪೆಡ್ಲರ್​ಗಳಷ್ಟೇ ಅಲ್ಲ, ಡ್ರಗ್ಸ್ ದಂಧೆಯಲ್ಲಿ ಇನ್ನೂ ಹಲವರು ಇದ್ದಾರೆ ಎಂದು ಸಿಸಿಬಿ ವಿಚಾರಣೆಗೆ ಬಂದಿದ್ದ ವೇಳೆ ಇಂದ್ರಜಿತ್ ಲಂಕೇಶ್ ಹೇಳಿಕೆ ನೀಡಿದ್ದಾರೆ.

Drugs Case ‘ಮೀನು ಹಿಡಿದಿದ್ದಾರೆ, ತಿಮಿಂಗಿಲ ಹಿಡಿಯೋದು ಬಾಕಿ ಇದೆ’ ಎಂದ ಇಂದ್ರಜಿತ್ ಲಂಕೇಶ್
ನಿರ್ದೇಶಕ ಇಂದ್ರಜಿತ್ ಲಂಕೇಶ್
ಆಯೇಷಾ ಬಾನು
| Edited By: |

Updated on:Jan 28, 2021 | 3:31 PM

Share

ಬೆಂಗಳೂರು: ‘ಮೀನು ಹಿಡಿದಿದ್ದಾರೆ, ತಿಮಿಂಗಿಲ ಹಿಡಿಯೋದು ಬಾಕಿ ಇದೆ’ ಎಂದು ಬೆಂಗಳೂರಿನಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಡ್ರಗ್ಸ್ ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇಂದ್ರಜಿತ್ ಲಂಕೇಶ್​ಗೆ ನಿನ್ನೆ ಸಿಸಿಬಿ ನೋಟೀಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಇಂದ್ರಜಿತ್ ಆಗಮಿಸಿದ್ದರು. ಆದ್ರೆ ಇಂದು ವಿಚಾರಣೆ ನಡೆದಿಲ್ಲ. ಬೇರೊಂದು ದಿನ ನಿಗದಿ ಮಾಡಿ ವಿಚಾರಣೆಗೆ ಬರುವಂತೆ ಸೂಚಿಸುತ್ತೇವೆಂದು ಸಿಸಿಬಿ ತಿಳಿಸಿದೆ.

ಈ ವೇಳೆ ಮಾತನಾಡಿದ ಇಂದ್ರಜಿತ್ ಲಂಕೇಶ್​ ಮೀನು ಹಿಡಿದಿದ್ದಾರೆ, ತಿಮಿಂಗಿಲ ಹಿಡಿಯೋದು ಬಾಕಿ ಇದೆ. ಸ್ಯಾಂಡಲ್​ವುಡ್​ನ ನಟಿಯರು ಡ್ರಗ್ ಪೆಡ್ಲರ್​ಗಳಷ್ಟೇ ಅಲ್ಲ, ಡ್ರಗ್ಸ್ ದಂಧೆಯಲ್ಲಿ ಇನ್ನೂ ಹಲವರು ಇದ್ದಾರೆ ಎಂದು ಹೇಳಿದ್ರು.

ಡಿಸಿಪಿ ಬಸವರಾಜ್ ನಿನ್ನೆ ಕರೆ ಮಾಡಿ ಕರೆದ್ರು. ನಾನು ಕಳೆದ 6 ತಿಂಗಳಿನಿಂದ ಪೊಲೀಸರಿಗೆ ಸಹಕಾರ ನೀಡಿದ್ದೇನೆ. ತನಿಖೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ ವಶಪಡಿಸಿಕೊಂಡಿದ್ದಾರೆ. ಸಣ್ಣ ಮೀನನ್ನ ಹಿಡಿದಿದ್ದಾರೆ ದೊಡ್ಡ ತಿಮಿಂಗಿಲ ಹಿಡಿಯೋದು ಬಾಕಿ ಇದೆ. ಪೊಲೀಸರು ತನಿಖೆ ಮಾಡ್ತಿದ್ದಾರೆ ಇನ್ನೂ ಚುರುಕುಗೊಳಿಸ್ತಾರೆ. ನನಗೂ ಹಲವು ವಿಷಯಗಳು ಬಂದಿವೆ. ಒಬ್ಬ ವ್ಯಕ್ತಿಯಾಗಿ, ನಿರ್ದೇಶಕನಾಗಿ ನಾನು ಮಾಹಿತಿಯನ್ನ ಕೊಡಬಹುದಷ್ಟೆ.

ಸ್ಯಾಂಡಲ್​ವುಡ್​ನ ನಟಿಯರು ಡ್ರಗ್ ಪೆಡ್ಲರ್​ಗಳಷ್ಟೇ ಅಲ್ಲ, ಡ್ರಗ್ಸ್ ದಂಧೆಯಲ್ಲಿ ಇನ್ನೂ ಹಲವರು ಇದ್ದಾರೆ. ಈ ಹಿಂದೆ ಪೊಲೀಸರ ಕೈಗೆ ಸಿಕ್ಕಿದ್ದವರು ಈಗ ಆರಾಮಾಗಿದ್ದಾರೆ. ರಾಜಕಾರಣಿಗಳು, ನಿರ್ದೇಶಕ, ನಿರ್ಮಾಪಕರ ಮಕ್ಕಳ ಹೆಸರು ಈ ಕೇಸ್​​ನಲ್ಲಿ ಕೇಳಿ ಬಂದಿದೆ. ಇದು ರಾಜಕೀಯ ವಿಚಾರವಲ್ಲ, ಸದನದಲ್ಲಿ ಚರ್ಚೆ ಆಗಬೇಕು. ವೈಯಕ್ತಿಕವಾಗಿ ನಾನು ಯಾರ ಮೇಲೂ ಆರೋಪ ಮಾಡ್ತಿಲ್ಲ ಎಂದು ನಗರ ಪೊಲೀಸ್​ ಆಯುಕ್ತರ ಕಚೇರಿಯಲ್ಲಿ ಇಂದ್ರಜಿತ್ ಲಂಕೇಶ್ ಹೇಳಿದ್ರು.

ಸರಿಯಾದ ರೀತಿಯಲ್ಲಿ ತನಿಖೆ ಆದರೆ ಹೆಣಗಳು ಕೂಡ ಎದ್ದು ಕೂರಲಿವೆ -ಇಂದ್ರಜಿತ್​ ಲಂಕೇಶ್​

Published On - 3:30 pm, Thu, 28 January 21

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!