AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಖಳ ನಟ ಫಿಶ್ ವೆಂಕಟ್ ನಿಧನ; ಸಹಾಯಕ್ಕೆ ಬರಲಿಲ್ಲ ಪವನ್ ಕಲ್ಯಾಣ್ ಆರ್ಥಿಕ ಬೆಂಬಲ

Fish Venkat: ತೆಲುಗು ಚಿತ್ರರಂಗದ ಹಾಸ್ಯ ನಟ ಫಿಶ್ ವೆಂಕಟ್ (ಮಂಗಳಂಪಲ್ಲಿ ವೆಂಕಟೇಶ್) ಮೂತ್ರಪಿಂಡದ ತೊಂದರೆಯಿಂದ 54ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಆರ್ಥಿಕ ತೊಂದರೆಯಿಂದ ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಅವರು ಕೊನೆಯುಸಿರೆಳೆದರು. ಪವನ್ ಕಲ್ಯಾಣ್ ಅವರು ಆರ್ಥಿಕ ನೆರವು ನೀಡಿದ್ದರೂ ಅದು ವ್ಯರ್ಥವಾಗಿದೆ.

ಖ್ಯಾತ ಖಳ ನಟ ಫಿಶ್ ವೆಂಕಟ್ ನಿಧನ; ಸಹಾಯಕ್ಕೆ ಬರಲಿಲ್ಲ ಪವನ್ ಕಲ್ಯಾಣ್ ಆರ್ಥಿಕ ಬೆಂಬಲ
ಪವನ್-ಫಿಶ್ ವೆಂಕಟ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 19, 2025 | 10:33 AM

Share

ತೆಲುಗು ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿ ಗಮನ ಸೆಳೆದ ನಟ ಫಿಶ್ ವೆಂಕಟ್ ಶುಕ್ರವಾರ (ಜುಲೈ 18) ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಕೆಲವು ಸಮಯದಿಂದ ಮೂತ್ರಪಿಂಡ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದರು. ಅವರ ಎರಡೂ ಮೂತ್ರಪಿಂಡಗಳು ಹಾನಿಗೊಳಗಾಗಿದ್ದರಿಂದ, ಅವರ ಕುಟುಂಬ ಸದಸ್ಯರು ಕೆಲವು ದಿನಗಳ ಹಿಂದೆ ಡಯಾಲಿಸಿಸ್‌ಗಾಗಿ ಬೋಡುಪ್ಪಲ್‌ನ ಆಸ್ಪತ್ರೆಗೆ ದಾಖಲಿಸಿದರು. ವೈದ್ಯರು ಎರಡೂ ಮೂತ್ರಪಿಂಡಗಳನ್ನು ಕಸಿ ಮಾಡಲು ಹೇಳಿದ್ದರು. ಅವರ ಆರ್ಥಿಕವಾಗಿ ಸಬಲರಾಗಿಲ್ಲ. ಹೀಗಾಗಿ, ವೈದ್ಯಕೀಯ ಸೇವೆಗಳನ್ನು ಪಡೆಯಲು ಸಾಧ್ಯವಾಗಿಲ್ಲ. ದಾನಿಗಳಿಂದ ಸಹಾಯಕ್ಕಾಗಿ ಮನವಿ ಮಾಡಿದ ಕೆಲವೇ ದಿನಗಳಲ್ಲಿ ಫಿಶ್ ವೆಂಕಟ್ ಸಾವನ್ನಪ್ಪಿದ್ದರಿಂದ ಕುಟುಂಬ ಸದಸ್ಯರು ಕಣ್ಣೀರು ಹಾಕುತ್ತಿದ್ದಾರೆ. ಪವನ್ ಕಲ್ಯಾಣ್ (Pawan Kalyan) ಅವರು ಈ ಮೊದಲು ನಟನಿಗೆ ಸಹಾಯ ಮಾಡಿದ್ದರು.

ಫಿಶ್ ವೆಂಕಟ್ ಅವರ ನಿಜವಾದ ಹೆಸರು ಮಂಗಳಂಪಲ್ಲಿ ವೆಂಕಟೇಶ್. ಮುಶೀರಾಬಾದ್ ಮಾರುಕಟ್ಟೆಯಲ್ಲಿ ಮೀನು ವ್ಯಾಪಾರ ಮಾಡುವ ಮೂಲಕ ಅವರು ಫಿಶ್ ವೆಂಕಟ್ ಎಂದು ಗುರುತಿಸಿಕೊಂಡರು. ಅವರು ಮುಶೀರಾಬಾದ್‌ನಲ್ಲಿ ವಾಸಿಸುತ್ತಿದ್ದಾರೆ. ನಟ ಶ್ರೀಹರಿ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು. ನಿರ್ದೇಶಕ ವಿ.ವಿ. ವಿನಾಯಕ್ ಅವರನ್ನು ನಟನಾಗಿ ಪರಿಚಯಿಸಿದರು. ಫಿಶ್ ವೆಂಕಟ್ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯನಟ ಮತ್ತು ಪಾತ್ರ ಕಲಾವಿದನಾಗಿ ಚಲನಚಿತ್ರ ಪ್ರಿಯರನ್ನು ರಂಜಿಸಿದ್ದಾರೆ. ಅವರು ಆದಿ, ದಿಲ್, ಬನ್ನಿ, ಅತ್ತಾರಿಂಟಿಕಿ ದಾರೇದಿ, ಡಿಜೆ ಟಿಲ್ಲು ಮುಂತಾದ ಅನೇಕ ಹಿಟ್ ಚಿತ್ರಗಳಲ್ಲಿ ನಟಿಸಿ ಉತ್ತಮ ಮನ್ನಣೆ ಗಳಿಸಿದ್ದಾರೆ. ಅವರು ಎರಡು ತಮಿಳು ಸಿನಿಮಾ ಮಾಡಿದ್ದಾರೆ. ಕನ್ನಡದಲ್ಲಿ ಯಾವುದೇ ಸಿನಿಮಾ ಮಾಡಿಲ್ಲ.

ಇದನ್ನೂ ಓದಿ: ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾಗೆ ಶುರುವಾಗಿದೆ ಕರ್ನಾಟಕದ ಭಯ

ಇದನ್ನೂ ಓದಿ
Image
ರಿಯಾಲಿಟಿ ಶೋ ಸಂಭಾವನೆಯಲ್ಲಿ ಸಲ್ಮಾನ್ ಖಾನ್ ಹಿಂದಿಕ್ಕಿದ ಅಮಿತಾಭ್ ಬಚ್ಚನ್
Image
ಕಿರೀಟಿ ನಟನೆಯ ‘ಜೂನಿಯರ್’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು?
Image
‘ಎಕ್ಕ’ ಸಿನಿಮಾ ಗಳಿಕೆ; ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿದ ಯುವ
Image
ಬರ್ತ್​ಡೇ ಗರ್ಲ್ ಪ್ರಿಯಾಂಕಾ ಚೋಪ್ರಾ ಎಷ್ಟು ಶ್ರೀಮಂತೆ ಗೊತ್ತಾ?

ಪವನ್ ಕಲ್ಯಾಣ್ ಅವರ ಆರ್ಥಿಕ ನೆರವು:

ಫಿಶ್ ವೆಂಕಟ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ತಿಳಿದಿದ್ದ ಪವನ್ ಕಲ್ಯಾಣ್, ಈ ಹಿಂದೆ ಸುಮಾರು ಎರಡು ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡಿದ್ದರು. ಫಿಶ್ ವೆಂಕಟ್ ಅವರು ಆರ್ಥಿಕ ತೊಂದರೆ ಮತ್ತು ಆರೋಗ್ಯ ಸಮಸ್ಯೆಗಳಿಂದ ಸಾವನ್ನಪ್ಪಿದ್ದು, ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ತಿಳಿದುಬಂದಿದೆ. ಫಿಶ್ ವೆಂಕಟ್ ಅವರ ನಿಧನವು ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದು ಹಲವರು ಹೇಳುತ್ತಿದ್ದಾರೆ. ಈಗ, ಅವರ ನಿಧನದ ಸುದ್ದಿ ತಿಳಿದ ಅಭಿಮಾನಿಗಳು ಮತ್ತು ಸಹ ನಟರು ಅವರ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:15 am, Sat, 19 July 25

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ