AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೊಂದು ಮದುವೆ; ರಾಜ್​ಕುಮಾರ್​ ಸ್ಮಾರಕದ ಎದುರೇ ಹಾರ ಬದಲಿಸಿಕೊಂಡ ಐದು ಜೋಡಿಗಳು

ಈ ಐದು ನವ ಜೋಡಿಗಳು ರಾಜ್​ಕುಮಾರ್​ ಸಮಾಧಿ ಎದುರು ಮದುವೆ ಆಗಬೇಕು ಎಂದುಕೊಂಡಿದ್ದರು. ಅದಕ್ಕೆ ಸಿದ್ಧತೆ ಕೂಡ ಆಗಿತ್ತು.

ಹೀಗೊಂದು ಮದುವೆ; ರಾಜ್​ಕುಮಾರ್​ ಸ್ಮಾರಕದ ಎದುರೇ ಹಾರ ಬದಲಿಸಿಕೊಂಡ ಐದು ಜೋಡಿಗಳು
ಹೀಗೊಂದು ಮದುವೆ; ರಾಜ್​ಕುಮಾರ್​ ಸ್ಮಾರಕದ ಎದುರೇ ಹಾರ ಬದಲಿಸಿಕೊಂಡ ಐದು ಜೋಡಿಗಳು
TV9 Web
| Edited By: |

Updated on: Jul 11, 2021 | 4:15 PM

Share

ಡಾ. ರಾಜ್​ಕುಮಾರ್​ ಅವರು ನಿಧನರಾಗಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ, ಅವರ ಅಭಿಮಾನಿ ಬಳಗ ಮಾತ್ರ ಕಡಿಮೆ ಆಗಿಲ್ಲ. ಅವರನ್ನು ಆರಾಧಿಸುವ ಲಕ್ಷಾಂತರ ಅಭಿಮಾನಿಗಳು ಇಂದಿಗೂ ಇದ್ದಾರೆ. ಇದು ಈಗ ಮತ್ತೊಮ್ಮೆ ಸಾಬೀತಾಗಿದೆ. ಐದು ಯುವ ಜೋಡಿಗಳು ರಾಜ್​ಕುಮಾರ್​ ಸಮಾಧಿ ಎದುರೇ ಹಾರ ಬದಲಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಮದುವೆ ವಿಚಾರದಲ್ಲಿ ಎಲ್ಲರೂ ನಾನಾ ರೀತಿಯ ಕನಸು ಕಂಡಿರುತ್ತಾರೆ. ಕೆಲವರಿಗೆ ಅದ್ದೂರಿಯಾಗಿ ಮದುವೆ ಆಗಬೇಕು ಎನ್ನುವ ಆಸೆ ಇರುತ್ತದೆ. ಇನ್ನೂ ಕೆಲವರಿಗೆ ಮದುವೆ ಸಿಂಪಲ್​ ಆಗಿ ನಡೆದರೆ ಸಾಕು. ಇನ್ನು, ನೀರಿನ ಮಧ್ಯೆ, ಬೆಟ್ಟದ ತುದಿಯಲ್ಲಿ ಮದುವೆ ಆಗಬೇಕು ಎಂದು ಕನಸು ಕಂಡವರೂ ಇದ್ದಾರೆ. ಆದರೆ, ಈ ಐದು ನವ ಜೋಡಿಗಳು ರಾಜ್​ಕುಮಾರ್​ ಸಮಾಧಿ ಎದುರು ಮದುವೆ ಆಗಬೇಕು ಎಂದುಕೊಂಡಿದ್ದರು. ಅದಕ್ಕೆ ಸಿದ್ಧತೆ ಕೂಡ ಆಗಿತ್ತು.

ಅದಾಗಲೇ ಕೊವಿಡ್ ಕಾಣಿಸಿಕೊಂಡಿತ್ತು. ಹೀಗಾಗಿ, ಈ ಐದೂ ಜೋಡಿಗಳು ಮನೆಯಲ್ಲೇ ಮದುವೆ ಆಗಬೇಕೆನ್ನುವ ನಿರ್ಧಾರಕ್ಕೆ ಬಂದರು. ಲಾಕ್ ಡೌನ್ ಸಮಯದಲ್ಲೇ ಸರಳವಾಗಿ ಮದುವೆಯಾದರು. ಈಗ ಅನ್ ಲಾಕ್ ಆದ ನಂತರದಲ್ಲಿ ಅಣ್ಣಾವ್ರ ಸ್ಮಾರಕಕ್ಕೆ ಈ ಐದು ಜೋಡಿಗಳು ಭೇಟಿ ನೀಡಿವೆ.

ವಧು, ವರರಂತೆಯೇ ಹೊಸ ಬಟ್ಟೆ, ಪೇಟ ಧರಿಸಿಕೊಂಡು ಅಣ್ಣಾವ್ರ ಸಮ್ಮುಖದಲ್ಲಿ ಈ ಜೋಡಿ ಹಾರ ಬದಲಿಸಿಕೊಂಡಿದೆ. ಸದ್ಯ, ಈ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಎಲ್ಲರೂ ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

2006ರ ಏಪ್ರಿಲ್​ 12ರಂದು ರಾಜ್​ಕುಮಾರ್​ ನಿಧನ ಹೊಂದಿದ್ದರು. ಈ ವೇಳೆ ಅಪಾರ ಅಭಿಮಾನಿಗಳು ಬೇಸರ ಹೊರ ಹಾಕಿದ್ದರು. ಪ್ರತಿ ವರ್ಷ ಅವರ ಪುಣ್ಯತಿಥಿ ಹಾಗೂ ಜನ್ಮದಿನದಂದು ಅಭಿಮಾನಿಗಳು ರಾಜ್​ಕುಮಾರ್​ ಹೆಸರಲ್ಲಿ ಅಭಿಮಾನಿಗಳು ಸಾಕಷ್ಟು ಸಮಾಜಸೇವೆಗಳನ್ನು ಮಾಡುತ್ತಾರೆ.

ಇದನ್ನೂ ಓದಿ: Dvitva: ಪುನೀತ್ ರಾಜ್​ಕುಮಾರ್​​-ಪವನ್​ ಕುಮಾರ್​ ಚಿತ್ರಕ್ಕೆ ‘ದ್ವಿತ್ವ’ ಶೀರ್ಷಿಕೆ; ಬಿಗ್​ ನ್ಯೂಸ್​ ನೀಡಿದ ಹೊಂಬಾಳೆ

ಡಾ. ರಾಜ್​ಕುಮಾರ್​ ಜತೆ ದಿಲೀಪ್​ ಕುಮಾರ್​ಗೆ ಇದ್ದ ಒಡನಾಟ ಎಂಥದ್ದು? ಫೋಟೋ ಸಹಿತ ವಿವರಿಸಿದ ಪುನೀತ್​

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ