AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cinema Halls: ಮಲ್ಟಿಪ್ಲೆಕ್ಸ್​​ನಲ್ಲಿ ತಿಂಡಿ, ಪಾನೀಯದ ಬೆಲೆ ಇಳಿಕೆ; ಶೇಕಡ 18 ರಿಂದ 5 ಪರ್ಸೆಂಟ್​​ಗೆ ಜಿಎಸ್​ಟಿ ಕಡಿತ

Food and Beverage: ಶೇಕಡ 5ಕ್ಕೆ ಜಿಎಸ್​ಟಿ ಇಳಿಕೆ ಆಗಿರುವುದರಿಂದ ಮಲ್ಟಿಪ್ಲೆಕ್ಸ್​ಗಳಲ್ಲಿ ಪಾಪ್​ ಕಾರ್ನ್​, ಕೂಲ್​ ಡಿಂಗ್ಸ್​ ಮುಂತಾದ ಪದಾರ್ಥಗಳ ಬೆಲೆ ತಗ್ಗಲಿದೆ. ಎಲ್ಲ ವರ್ಗದ ಪ್ರೇಕ್ಷಕರಿಗೆ ಇದರಿಂದ ಅನುಕೂಲ ಆಗಲಿದೆ.

Cinema Halls: ಮಲ್ಟಿಪ್ಲೆಕ್ಸ್​​ನಲ್ಲಿ ತಿಂಡಿ, ಪಾನೀಯದ ಬೆಲೆ ಇಳಿಕೆ; ಶೇಕಡ 18 ರಿಂದ 5 ಪರ್ಸೆಂಟ್​​ಗೆ ಜಿಎಸ್​ಟಿ ಕಡಿತ
ಮಲ್ಟಿಪ್ಲೆಕ್ಸ್​, ಪಾಪ್​ ಕಾರ್ನ್
ಮದನ್​ ಕುಮಾರ್​
|

Updated on: Jul 12, 2023 | 3:35 PM

Share

ಸಿನಿಮಾ ನೋಡಲು ಜನರು ಥಿಯೇಟರ್​​ಗೆ ಬರುತ್ತಿಲ್ಲ ಎಂಬ ಕೊರಗು ಚಿತ್ರರಂಗದಲ್ಲಿದೆ. ಅದಕ್ಕೆ ಅನೇಕ ಕಾರಣಗಳನ್ನು ಪಟ್ಟಿ ಮಾಡಲಾಗುತ್ತದೆ. ಮಲ್ಟಿಪ್ಲೆಕ್ಸ್​ಗಳಲ್ಲಿ (Multiplex) ಇರುವ ದುಬಾರಿ ಬೆಲೆ ಕೂಡ ಇದಕ್ಕೆ ಒಂದ ಪ್ರಮುಖ ಕಾರಣ. ಆದರೆ ಈಗ ಒಂದು ಗುಡ್​ ನ್ಯೂಸ್​ ಕೇಳಿಬಂದಿದೆ. ಇನ್ಮುಂದೆ ಸಿನಿಮಾ ಹಾಲ್​ಗಳಲ್ಲಿ ತಿಂಡಿ-ತಿನಿಸು ಮತ್ತು ಪಾನೀಯಗಳ (Food and Beverage) ಬೆಲೆ ತಗ್ಗಲಿದೆ. ಈ ಪದಾರ್ಥಗಳ ಮೇಲಿನ ಜಿಎಸ್​ಟಿ (GST) ಕಡಿತ ಮಾಡಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ಮಲ್ಟಿಪ್ಲೆಕ್ಸ್​ಗಳಲ್ಲಿನ ವ್ಯಾಪಾರ ವೃದ್ಧಿ ಆಗಲಿದೆ. ಸಿನಿಮಾ ನೋಡಲು ಬರುವ ಪ್ರೇಕ್ಷಕರಿಗೆ ಹೊರೆ ಕಡಿಮೆ ಆಗಲಿದೆ. ಜಿಎಸ್​ಟಿ (ಸರಕು ಮತ್ತು ಸೇವಾ ತೆರಿಗೆ) ಮಂಡಳಿಯ ಐವತ್ತನೇ ಸಭೆಯಲ್ಲಿ ಕೇಂದ್ರ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ಅನೇಕ ವಸ್ತುಗಳ ತೆರಿಗೆಯಲ್ಲಿ ಗಣನೀಯ ಇಳಿಕೆ ಮಾಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಜುಲೈ 11ರಂದು ಸಭೆ ನಡೆಯಿತು. ಬಳಿಕ ಈ ನಿರ್ಧಾರ ಪ್ರಕಟಿಸಲಾಗಿದೆ.

ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಲ್ಲಿ ತಿಂಡಿ ಮತ್ತು ಪಾನೀಯದ ಬೆಲೆ ದುಬಾರಿ ಎಂಬ ದೂರು ಮೊದಲಿನಿಂದಲೂ ಕೇಳಿಬರುತ್ತಲೇ ಇತ್ತು. ಅದಕ್ಕೆ ಶೇಕಡ 18ರಷ್ಟು ಜಿಎಸ್​ಟಿ ಕೂಡ ಸೇರಿದ್ದರಿಂದ ಇನ್ನಷ್ಟು ದುಬಾರಿ ಆಗಿತ್ತು. ಈಗ ಶೇಕಡ 5ಕ್ಕೆ ಜಿಎಸ್​ಟಿ ಇಳಿಕೆ ಆಗಿರುವುದರಿಂದ ಪಾಪ್​ ಕಾರ್ನ್​, ಕೂಲ್​ ಡಿಂಗ್ಸ್​ ಮುಂತಾದ ಪದಾರ್ಥಗಳ ಬೆಲೆ ತಗ್ಗಲಿದೆ. ಎಲ್ಲ ವರ್ಗದ ಪ್ರೇಕ್ಷಕರಿಗೆ ಇದರಿಂದ ಅನುಕೂಲ ಆಗಲಿದೆ. ತೆರಿಗೆ ಪ್ರಮಾಣದಲ್ಲಿ ಇಳಿಕೆ ಆಗಿರುವುದನ್ನು ಮಲ್ಟಿಪ್ಲೆಕ್ಸ್​ಗಳು ಸ್ವಾಗತಿಸಿವೆ.

ಇದನ್ನೂ ಓದಿ: ಐಶಾರಾಮಿ ಮಲ್ಟಿಪ್ಲೆಕ್ಸ್​ ನಿರ್ಮಿಸಿದ ಅಲ್ಲು ಅರ್ಜುನ್: ಹೆಸರೇನು? ಎಲ್ಲಿದೆ? ಮೊದಲ ಸಿನಿಮಾ ಯಾವುದು?

ಕೊವಿಡ್​ ಬಂದ ಬಳಿಕ ಲಾಕ್​ಡೌನ್​ನಿಂದ ಮಲ್ಟಿಪ್ಲೆಕ್ಸ್​ಗಳ ಬಿಸ್ನೆಸ್​ ಕುಸಿದಿತ್ತು. ಹಾಗಾಗಿ ಜನರನ್ನು ಸೆಳೆಯಲು ಕೆಲವು ಸಿನಿಮಾಗಳ ಟಿಕೆಟ್​ ಬೆಲೆ ತಗ್ಗಿಸಲಾಗಿತ್ತು. ಆದರೂ ಕೂಡ ಮೊದಲಿನ ರೀತಿಯಲ್ಲಿ ಜನರು ಸಿನಿಮಾ ನೋಡಲು ಬರುತ್ತಿಲ್ಲ ಎಂಬ ಮಾತಿದೆ. ಈಗ ತಿಂಡಿ, ಪಾನೀಯಗಳ ಮೇಲಿನ ಜಿಎಸ್​ಟಿ ಕಡಿಮೆ ಮಾಡಿರುವುದರಿಂದ ಇನ್ಮುಂದೆ ಹೆಚ್ಚಿನ ಜನರು ಮಲ್ಟಿಪ್ಲೆಕ್ಸ್​ಗೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಪಿವಿಆರ್​ ಹೊಸ ಮಲ್ಟಿಪ್ಲೆಕ್ಸ್​ ಆವರಣದಲ್ಲಿ ಕನ್ನಡ ನಟರ ಫೋಟೋ ಇಲ್ಲ; ಸುದೀಪ್​ ಪ್ರತಿಕ್ರಿಯೆ ಏನು?

ಒಂದು ಅಂದಾಜಿನ ಪ್ರಕಾರ ಮಲ್ಟಿಪ್ಲೆಕ್ಸ್​ಗಳ ವ್ಯವಹಾರದ ಶೇಕಡ 35ರಷ್ಟು ಆದಾಯ ಬರುವುದೇ ತಿಂಡಿ ಮತ್ತು ಪಾನೀಯಗಳ ಮಾರಾಟದಿಂದ. ಆದರೆ ದುಬಾರಿ ಬೆಲೆ ಎಂಬ ಕಾರಣಕ್ಕೆ ಬಹುತೇಕ ಪ್ರೇಕ್ಷಕರು ಹಿಂದೇಟು ಹಾಕುತ್ತಿದ್ದರು. ಈಗ ತೆರಿಗೆ ಕಡಿತ ಆಗಿರುವುದರಿಂದ ಮಲ್ಟಿಪ್ಲೆಕ್ಸ್​ನಲ್ಲಿ ಬಿಸ್ನೆಸ್​ ಹೆಚ್ಚುವ ಸೂಚನೆ ಸಿಕ್ಕಿದೆ. 2023ರ ದ್ವಿತೀಯಾರ್ಥದಲ್ಲಿ ಅನೇಕ ದೊಡ್ಡ ಬಜೆಟ್​ ಸಿನಿಮಾಗಳು ಬಿಡುಗಡೆ ಆಗುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು