AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಒಂದು ಸೀರೆಗಾಗಿ ನಾನು ರಾಷ್ಟ್ರ ಪ್ರಶಸ್ತಿ ಪಡೆಯಬೇಕು: ಸ್ಪೆಷಲ್ ಕಾರಣ ತಿಳಿಸಿದ ಸಾಯಿ ಪಲ್ಲವಿ

ಸಾಯಿ ಪಲ್ಲವಿ ಅವರು ಪ್ರತಿಭಾವಂತ ನಟಿ ಎಂಬುದನ್ನು ಈಗಾಗಲೇ ಸಾಬೀತು ಮಾಡಿದ್ದಾರೆ. ಆದರೆ ರಾಷ್ಟ್ರ ಪ್ರಶಸ್ತಿ ಪಡೆಯುವ ಕನಸು ಇನ್ನೂ ಈಡೇರಿಲ್ಲ. ಆ ಬಗ್ಗೆ ಅವರು ಸಂದರ್ಶನವೊಂದಲ್ಲಿ ಮಾತಾಡಿದ್ದಾರೆ. ನ್ಯಾಷನಲ್ ಅವಾರ್ಡ್​ ಎಂಬುದು ತಮಗೆ ಯಾಕೆ ತುಂಬ ಮುಖ್ಯ ಎಂದು ಅವರು ವಿವರಿಸಿದ್ದಾರೆ.

ಆ ಒಂದು ಸೀರೆಗಾಗಿ ನಾನು ರಾಷ್ಟ್ರ ಪ್ರಶಸ್ತಿ ಪಡೆಯಬೇಕು: ಸ್ಪೆಷಲ್ ಕಾರಣ ತಿಳಿಸಿದ ಸಾಯಿ ಪಲ್ಲವಿ
Sai Pallavi
ಮದನ್​ ಕುಮಾರ್​
|

Updated on: Feb 17, 2025 | 2:32 PM

Share

ನಟಿ ಸಾಯಿ ಪಲ್ಲವಿ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಗಬೇಕು ಎಂಬ ಆಸೆ ಅಭಿಮಾನಿಗಳಿಗೆ ಇದೆ. ಸ್ವತಃ ಸಾಯಿ ಪಲ್ಲವಿ ಕೂಡ ಅದರ ಬಗ್ಗೆ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಅಚ್ಚರಿ ಏನೆಂದರೆ, ಒಂದು ವಿಶೇಷವಾದ ಸೀರೆಯ ಸಲುವಾಗಿ ತಾವು ನ್ಯಾಷನಲ್ ಅವಾರ್ಡ್ ಪಡೆಯಬೇಕು ಎಂದು ಸಾಯಿ ಪಲ್ಲವಿ ಅವರು ಹೇಳಿದ್ದಾರೆ. ಅಂದಹಾಗೆ, ಆ ಸೀರೆಯನ್ನು ಕೊಟ್ಟಿರುವುದು ಅವರ ಅಜ್ಜಿ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಆ ಬಗ್ಗೆ ಸಾಯಿ ಪಲ್ಲವಿ ಅವರು ಮಾತನಾಡಿದ್ದಾರೆ.

ಅಭಿಮಾನಿಗಳ ನಿರೀಕ್ಷೆಯಂತೆ ‘ಗಾರ್ಗಿ’ ಸಿನಿಮಾದಲ್ಲಿನ ನಟನೆಗೆ ಸಾಯಿ ಪಲ್ಲವಿ ಅವರಿಗೆ ರಾಷ್ಟ್ರ ಪ್ರಶಸ್ತಿ ಬರಬೇಕಿತ್ತು. ಆದರೆ ಅದು ಮಿಸ್ ಆಯಿತು. ಮುಂದೊಂದು ದಿನ ಖಂಡಿತವಾಗಿಯೂ ಅವರಿಗೆ ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ ಸಿಗಲಿದೆ ಎಂಬುದು ಫ್ಯಾನ್ಸ್ ನಂಬಿಕೆ. ಆ ದಿನ ಸಾಯಿ ಪಲ್ಲವಿ ಅವರು ಅಜ್ಜಿ ಕೊಟ್ಟ ಸೀರೆಯನ್ನು ಧರಿಸಲಿದ್ದಾರಂತೆ.

ಸಾಯಿ ಪಲ್ಲವಿ ಅವರಿಗೆ 21 ವರ್ಷ ವಯಸ್ಸಾಗಿದ್ದಾಗ ಅವರ ಅಜ್ಜಿ ಒಂದು ಸೀರೆಯನ್ನು ನೀಡಿದ್ದರು. ಮದುವೆಯ ದಿನ ಆ ಸೀರೆ ಧರಿಸಬೇಕು ಎಂದು ಅಜ್ಜಿ ಹೇಳಿದ್ದರು. ಆದರೆ ಒಂದು ವಿಶೇಷ ಸಂದರ್ಭದಲ್ಲಿ ಆ ಸೀರೆಯನ್ನು ಧರಿಸಲು ಸಾಯಿ ಪಲ್ಲವಿ ನಿರ್ಧರಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ಸ್ವೀಕರಿಸುವುದೇ ಆ ವಿಶೇಷ ಸಂದರ್ಭ. ಹಾಗಾಗಿ ಆ ದಿನ ಬರಲಿ ಎಂದು ಅವರು ಕಾಯುತ್ತಿದ್ದಾರೆ. ಪ್ರಶಸ್ತಿ ಪಡೆಯುವವರೆಗೂ ಆ ಒತ್ತಡ ತಮ್ಮ ಮೇಲೆ ಇದ್ದೇ ಇರುತ್ತದೆ ಎಂದು ಅವರು ಹೇಳಿದ್ದಾರೆ.

ಬೇರೆ ನಟಿಯರಂತೆ ಸಾಯಿ ಪಲ್ಲವಿ ಅವರು ಗ್ಲಾಮರ್ ನಂಬಿಕೊಂಡು ಬಂದಿಲ್ಲ. ನಟನೆಯ ಬಲದಿಂದ ಅವರು ಎಲ್ಲರ ಗಮನ ಸೆಳೆದಿದ್ದಾರೆ. ದೇಶಾದ್ಯಂತ ಅವರಿಗೆ ಖ್ಯಾತಿ ಇದೆ. ದಕ್ಷಿಣ ಭಾರತದ ಚಿತ್ರರಂಗ ಹಾಗೂ ಬಾಲಿವುಡ್​ನಲ್ಲಿ ಅವರು ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಈ ವರ್ಷ ಅವರು ನಟಿಸಿದ ತೆಲುಗಿನ ‘ತಂಡೇಲ್’ ಸಿನಿಮಾ ಸೂಪರ್​ ಹಿಟ್ ಆಗಿದೆ. ಈಗ ಅವರು ಬಾಲಿವುಡ್​ಗೂ ಕಾಲಿಡುತ್ತಿದ್ದಾರೆ.

ಇದನ್ನೂ ಓದಿ: ‘ತಾಂಡೇಲ್ ಗೆಲ್ಲುತ್ತೆ ಎಂದು ಈ ವ್ಯಕ್ತಿಗೆ ಮೊದಲೇ ಗೊತ್ತಿತ್ತು’: ಸಾಯಿ ಪಲ್ಲವಿ

ಆಮಿರ್​ ಖಾನ್ ಪುತ್ರ ಜುನೈದ್ ಖಾನ್ ನಟನೆಯ ‘ಏಕ್ ದಿನ್’ ಸಿನಿಮಾಗೆ ಸಾಯಿ ಪಲ್ಲವಿ ಅವರು ನಾಯಕಿ ಆಗಿದ್ದಾರೆ. ಹಿಂದಿಯಲ್ಲಿ ಅದು ಅವರ ಮೊದಲ ಸಿನಿಮಾ ಆಗಲಿದೆ. ಅದರ ಜೊತೆಗೆ ‘ರಾಮಾಯಣ’ ಸಿನಿಮಾದಲ್ಲಿ ರಣಬೀರ್​ ಕಪೂರ್ ಜೊತೆ ಸಾಯಿ ಪಲ್ಲವಿ ಅವರು ಅಭಿನಯಿಸುತ್ತಿದ್ದು, ಸೀತೆಯ ಪಾತ್ರವನ್ನು ಮಾಡುತ್ತಿದ್ದಾರೆ. ಈ ಸಿನಿಮಾದಿಂದ ಅವರ ವೃತ್ತಿಜೀವನಕ್ಕೆ ದೊಡ್ಡ ಹೈಪ್ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ