AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಾಯತ್​ ಎಲೆಕ್ಷನ್​ಗೆ ಸ್ಪರ್ಧಿಸಿದ ಮಾಜಿ ಮಿಸ್​ ಇಂಡಿಯಾ ಫೈನಲಿಸ್ಟ್​; ಇವರ​ ನೋಡೋಕೆ ಜನವೋ ಜನ

ದೀಕ್ಷಾ ಈಗಾಗಲೇ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಕಪ್ಪು ಗ್ಲಾಸ್​ ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಇವರನ್ನು ನೋಡೋಕೆ ಜನಸಾಗರವೇ ಹರಿದು ಬರುತ್ತಿದೆ.

ಪಂಚಾಯತ್​ ಎಲೆಕ್ಷನ್​ಗೆ ಸ್ಪರ್ಧಿಸಿದ ಮಾಜಿ ಮಿಸ್​ ಇಂಡಿಯಾ ಫೈನಲಿಸ್ಟ್​; ಇವರ​ ನೋಡೋಕೆ ಜನವೋ ಜನ
ದೀಕ್ಷಾ ಸಿಂಗ್​
Follow us
ರಾಜೇಶ್ ದುಗ್ಗುಮನೆ
|

Updated on:Apr 04, 2021 | 6:41 PM

ಲಖನೌ: ಉತ್ತರ ಪ್ರದೇಶದಲ್ಲಿ ಪಂಚಾಯತ್​ ಚುನಾವಣೆಯ ಕಾವು ಹೆಚ್ಚಾಗಿದೆ. ಲಕ್ಷಾಂತರ ಸ್ಪರ್ಧಿಗಳು ಪಂಚಾಯತ್​ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಈ ಮಧ್ಯೆ 2015ರ ಫೆಮಿನಾ ಮಿಸ್​ ಇಂಡಿಯಾ ಫೈನಲಿಸ್ಟ್ ದೀಕ್ಷಾ ಸಿಂಗ್​ ಕೂಡ ಜಿಲ್ಲಾ ಪಂಚಾಯತ್​ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ. ಪ್ರಚಾರದ ವೇಳೆ ಇವರನ್ನು ನೋಡೋಕೆ ಜನ ಸಾಗರವೇ ಹರಿದು ಬರುತ್ತಿದೆ. ದೀಕ್ಷಾ ಅವರು ಉತ್ತರ ಪ್ರದೇಶದ ಭಾಕ್ಷಾದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇಂದು ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏಪ್ರಿಲ್​ 15ರಂದು ಚುನಾವಣೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

ಜೌನ್​ಪುರ್​ನ ಚಿತ್ತೋರಿ ಗ್ರಾಮದವರಾದ ದೀಕ್ಷಾ ಪ್ರಾಥಮಿಕ ಶಿಕ್ಷಣ ಪಡೆದಿದ್ದು ಇದೇ ಊರಿನಲ್ಲಿ. ಪಾಲಕರು ಮುಂಬೈಗೆ ಶಿಫ್ಟ್​ ಆದ ನಂತರ ಇವರು ಕೂಡ ಅಲ್ಲಿಗೆ ತೆರಳಿದರು. ಅಲ್ಲಿಯೇ ಶಿಕ್ಷಣ ಪಡೆದರು. ಅವರು ಸೆಕೆಂಡ್ ಪಿಯುಸಿಯಲ್ಲಿರುವಾಗ ಫೆಮಿನಾ ಮಿಸ್ ಇಂಡಿಯಾದಲ್ಲಿ ಭಾಗವಹಿಸಿದ್ದರು. 21 ಫೈನಲಿಸ್ಟ್​ಗಳಲ್ಲಿ ಇವರು ಕೂಡ ಒಬ್ಬರಾಗಿದ್ದರು. ನಂತರ ಸಾಕಷ್ಟು ಮಾಡೆಲಿಂಗ್​ ಸ್ಪರ್ಧೆಗಳಲ್ಲಿ ದಿಶಾ ಪಾಲ್ಗೊಂಡಿದ್ದರು. ಮ್ಯೂಸಿಕ್​ ವಿಡಿಯೋಗಳಲ್ಲೂ ಕಾಣಿಸಿಕೊಂಡರು.

ಗ್ರಾಮ ಪಂಚಾಯಿತಿ ಚುನಾವಣೆಗೆ ದೀಕ್ಷಾ ಸ್ಪರ್ಧೆ ಮಾಡುತ್ತಾರೆ ಎನ್ನುವ ವಿಚಾರ ಇತ್ತೀಚೆಗೆ ಭಾರೀ ಚರ್ಚೆ ಆಗಿತ್ತು. ಅವರ ತಂದೆ ಜಿತೇಂದ್ರ ಸಿಂಗ್ ಈ ಕ್ಷೇತ್ರದಿಂದ ಸ್ಪರ್ಧಿಸುವ ಕನಸು ಇಟ್ಟುಕೊಂಡಿದ್ದರು. ಆದರೆ, ಮಹಿಳಾ ಅಭ್ಯರ್ಥಿಗಳಿಗೆ ಈ ಸ್ಥಾನವನ್ನು ಕಾಯ್ದಿರಿಸಲಾಗಿದೆ. ಹೀಗಾಗಿ, ತಂದೆ ಆಸೆ ಈಡೇರಿಸಲು ಚುನಾವಣೆಗೆ ಇವರು ಸ್ಪರ್ಧೆ ಮಾಡುತ್ತಿದ್ದಾರೆ ಎನ್ನಲಾಗಿತ್ತು.

ಆದರೆ ದೀಕ್ಷಾ ಈ ವಿಚಾರ ನಿರಾಕರಿಸಿದ್ದಾರೆ. ನಾನು ಸ್ವ ಇಚ್ಛೆಯಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಹಲವು ವರ್ಷಗಳಿಂದ ಇಲ್ಲಿಯ ಜನರ ಜೀವನ ಸುಧಾರಿಸಿಲ್ಲ. ನಾನು ಹುಟ್ಟಿ ಬೆಳೆದ ಸ್ಥಳ ಕೂಡ ಅಭಿವೃದ್ಧಿ ಕಾಣುತ್ತಿಲ್ಲ. ನಾನು ಇಲ್ಲಿಗೆ ಬಂದಾಗೆಲ್ಲ ಈ ಭಾವನೆ ನಿರಂತರವಾಗಿ ಕಾಡಿತ್ತು. ಹೀಗಾಗಿ, ಚುನಾವಣೆಗೆ ನಿಲ್ಲುವ ನಿರ್ಧಾರಕ್ಕೆ ಬಂದೆ. ಈ ಮೂಲಕ ಹಳ್ಳಿ ಅಭಿವೃದ್ಧಿಪಡಿಸುವ ಕನಸು ಕಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ದೀಕ್ಷಾ ಈಗಾಗಲೇ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಕಪ್ಪು ಗ್ಲಾಸ್​ ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಇವರನ್ನು ನೋಡೋಕೆ ಜನಸಾಗರವೇ ಹರಿದು ಬರುತ್ತಿದೆ.

ಇದನ್ನೂ ಓದಿ: ಒಂದೇ ಶೋನಲ್ಲಿ ಪ್ರಥಮ್​, ಸಿಹಿಕಹಿ ಚಂದ್ರು, ಅಕುಲ್​ ಬಾಲಾಜಿ! ಕಿರುತೆರೆ ಪ್ರೇಕ್ಷಕರಿಗೆ ಮಸ್ತ್​​ ಮನರಂಜನೆ

Published On - 6:38 pm, Sun, 4 April 21

ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ