AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ

ಬೇಸರದಿಂದ ಚಕ್ರವರ್ತಿ ಅವರನ್ನು ಪ್ರಶಾಂತ್​ ತಬ್ಬಿಕೊಂಡರು. ಆಗ ಚಕ್ರವರ್ತಿ ಕೂಡ ಬೇಸರಗೊಂಡರು. ಅದನ್ನು ಅಲ್ಲಿ ತೋರಿಸದೆ ಇದ್ದರೂ, ಗಾರ್ಡನ್​ ಏರಿಯಾಗೆ ಬಂದು ಗಳಗಳನೆ ಅತ್ತರು.

ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ
ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ
TV9 Web
| Edited By: |

Updated on:Jun 29, 2021 | 10:03 AM

Share

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್​ ತಮ್ಮ ಕಟು ಮಾತುಗಳ ಮೂಲಕವೇ ಹೆಚ್ಚು ಗುರುತಿಸಿಕೊಂಡಿದ್ದಾರೆ. ಜೂನ್​ 27ರ ಎಪಿಸೋಡ್​ನಲ್ಲಂತೂ ಚಕ್ರವರ್ತಿ ಚಂದ್ರಚೂಡ್​ ಮಾತಿಗೆ ಇಡೀ ಮನೆ ನಡುಗಿ ಹೋಗಿತ್ತು. ಈ ಬೆನ್ನಲ್ಲೇ ಮನೆಯಲ್ಲಿ ಕಣ್ಣೀರಧಾರೆ ಹರಿದಿದೆ.

ಬಿಗ್​ ಬಾಸ್​ ಸ್ಪರ್ಧಿಗಳಿಗೆ ಟಾಸ್ಕ್​ ಒಂದನ್ನು ನೀಡಲಾಗಿದೆ. ಈ ಟಾಸ್ಕ್ ಪ್ರಕಾರ ಮನೆಯ 11 ಜನ ಸ್ಪರ್ಧಿಗಳು ಪ್ರಶಾಂತ್​ ಅವರನ್ನು ಪ್ರ್ಯಾಂಕ್​ ಮಾಡಬೇಕು. ಮನೆಯಲ್ಲಿ ಪ್ರಶಾಂತ್​ ಅದೃಶ್ಯವಾಗಿದ್ದಾರೆ ಎಂಬಂತೆ ಎಲ್ಲರೂ ವರ್ತಿಸಬೇಕು ಎಂದು ಸುದೀಪ್​ ಸೂಚನೆ ನೀಡಿದರು. ಈ ಸೂಚನೆಯಂತೆ ಸ್ಪರ್ಧಿಗಳು ನಡೆದುಕೊಳ್ಳೋಕೆ ಆರಂಭಿಸಿದರು.

ಇದು ಪ್ರ್ಯಾಂಕ್​ ಎಂಬುದು ಪ್ರಶಾಂತ್​ ಗಮನಕ್ಕೆ ಬಂದಿದೆ. ಇದು ಶೀಘ್ರವೇ ಪೂರ್ಣಗೊಳ್ಳಬಹುದು ಎಂದು ಪ್ರಶಾಂತ್​ ಭಾವಿಸಿದ್ದರು. ಆದರೆ, ಮನೆಯವರು ಪ್ರಶಾಂತ್​ ಅವರನ್ನು ಮಾತನಾಡಿಸಿಲ್ಲ. ಇದು ಅವರಿಗೆ ಹರ್ಟ್​ ಆಗಿದೆ. ಶುಭಾ ಪೂಂಜಾ ಅವರ ಜತೆ ಮಾತನಾಡುತ್ತಾ ಪ್ರಶಾಂತ್​ ಕಣ್ಣೀರು ಹಾಕಿದರು. ‘ನಿನಗೆ ಇಷ್ಟೊಂದು ಪ್ರೀತಿ ಕೊಟ್ಟಿದ್ದೇನೆ. ಆದರೂ, ಮಾತನಾಡುವುದಿಲ್ಲವಾ’ ಎಂದು ಪ್ರಶ್ನೆ ಮಾಡಿದರು.

ಇನ್ನು, ಬೇಸರದಿಂದ ಚಕ್ರವರ್ತಿ ಅವರನ್ನು ಪ್ರಶಾಂತ್​ ತಬ್ಬಿಕೊಂಡರು. ಆಗ ಚಕ್ರವರ್ತಿ ಕೂಡ ಬೇಸರಗೊಂಡರು. ಅದನ್ನು ಅಲ್ಲಿ ತೋರಿಸದೆ ಇದ್ದರೂ, ಗಾರ್ಡನ್​ ಏರಿಯಾಗೆ ಬಂದು ಗಳಗಳನೆ ಅತ್ತರು. ಮನೆ ಮಂದಿಯೆಲ್ಲ ಚಕ್ರವರ್ತಿಯನ್ನು ಸಮಾಧಾನ ಮಾಡುವ ಪ್ರಯತ್ನ ಮಾಡಿದರು.

ಇನ್ನು, ದಿವ್ಯಾ ಉರುಡುಗಗೆ ಪ್ರಶಾಂತ್​ ಸಂಬರಗಿ ಪದೇಪದೇ ಚುಚ್ಚಿ ಮಾತನಾಡುತ್ತಿದ್ದರು. ಇದು ದಿವ್ಯಾಗೆ ತುಂಬಾನೇ ಹರ್ಟ್​ ಆಗಿದೆ. ಪ್ರಶಾಂತ್​ ಮಾತನ್ನು ಕೇಳುತ್ತಿದ್ದಂತೆಯೇ ದಿವ್ಯಾ ಕಣ್ಣಲ್ಲಿ ನೀರು ಬಂತು. ‘ಬಿಗ್​ ಬಾಸ್​ ನನ್ನ ಕೈಯಲ್ಲಿ ಇದು ಆಗಲ್ಲ’ ಎಂದು ಬೇಸರ ಹೊರ ಹಾಕಿದರು.

ಇನ್ನು, ನಿಧಿ ಊಟ ಮಾಡುವಾಗ ಮಂಜು ಯಾವುದೋ ವಿಚಾರ ಹೇಳಿದ್ದಾರೆ. ಅದು ನಿಧಿಗೆ ಬೇಸರ ಮೂಡಿಸಿದೆ. ಈ ವಿಚಾರದಲ್ಲಿ ಮಂಜುಗೆ ತಪ್ಪಿತಸ್ಥ ಭಾವನೆ ಕಾಡಿದೆ.  ಅವರು ಕೂಡ ಅತ್ತಿದ್ದಾರೆ. ಈ ವೇಳೆ ಮಂಜು ಅವರನ್ನು ನಿಧಿ, ಶುಭಾ ಸಮಾಧಾನ ಮಾಡಿದ್ದಾರೆ.

ಇದನ್ನೂ ಓದಿ: ಮಂಜು ವಿಚಾರಕ್ಕೆ ದಿವ್ಯಾ ಸುರೇಶ್​ ಕಣ್ಣೀರಿನಲ್ಲಿ ಕೈ ತೊಳೆಯುವಂತೆ ಮಾಡಿದ ಚಕ್ರವರ್ತಿ ಚಂದ್ರಚೂಡ್​

BBK8 Shruthi Controversy : ಲ್ಯಾಗ್ ಮಂಜ-ಚಕ್ರವರ್ತಿ ನಡುವಿನ ಬಿಗ್‌ ಫೈಟ್‌ನಲ್ಲಿ ಕೇಳಿ ಬಂತು ನಟಿ ಶೃತಿ ವಿಚಾರ

Published On - 9:58 am, Tue, 29 June 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ