AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾರಣದಿಂದ ದೂರವಾಗಿ ಭಾರತೀಯ ಸಿನಿಮಾ ಕ್ಷೇತ್ರದ ಉತ್ತುಂಗಕ್ಕೇರಿದ ನಟ ಅನಂತ್​​ ನಾಗ್: ಇಲ್ಲಿವೆ ಕೆಲ ಇಂಟರೆಸ್ಟಿಂಗ್​​ ವಿಚಾರಗಳು

ಸಿನಿಮಾ ಕ್ಷೇತ್ರದಲ್ಲಿನ ಅತ್ಯುತ್ತಮ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡಿಗ ಅನಂತ್ ನಾಗ್, ಈ ಹಿಂದೆ ರಾಜಕಾರಣಿ ಆಗಿದ್ದವರು. ಆದರೆ 2004ರಲ್ಲಿ ರಾಜಕೀಯದಿಂದ ದೂರ ನಡೆದಿದ್ದ ಅವರೀಗ ಭಾರತ ಸಿನಿಮಾ ಕ್ಷೇತ್ರದ ಉತ್ತುಂಗಕ್ಕೆ ಏರಿದ್ದಾರೆ.  ಹಿರಿಯ ನಟನ ಕುರಿತ ಒಂದಿಷ್ಟು ಇಂಟರೆಸ್ಟಿಂಗ್​​ ವಿಚಾರಗಳು ಇಲ್ಲಿವೆ.

ರಾಜಕಾರಣದಿಂದ ದೂರವಾಗಿ ಭಾರತೀಯ ಸಿನಿಮಾ ಕ್ಷೇತ್ರದ ಉತ್ತುಂಗಕ್ಕೇರಿದ ನಟ ಅನಂತ್​​ ನಾಗ್: ಇಲ್ಲಿವೆ ಕೆಲ ಇಂಟರೆಸ್ಟಿಂಗ್​​ ವಿಚಾರಗಳು
ಅನಂತ್ ನಾಗ್Image Credit source: Tv9 Kannada
ಪ್ರಸನ್ನ ಹೆಗಡೆ
|

Updated on:Sep 16, 2026 | 9:00 PM

Share

ಅನೇಕ ಸಿನಿಮಾ ಕಲಾವಿದರು ರಾಜಕೀಯ ಕ್ಷೇತ್ರ ತುಳಿದಿರುವ ಇತಿಹಾಸ ಭಾರತದಲ್ಲಿದೆ. ಅದರಲ್ಲೂ ದಕ್ಷಿಣ ಭಾರತದ ಸಿನಿ ತಾರೆಯರು ಈ ವಿಚಾರದಲ್ಲಿ ತುಸು ಮುಂದಿದ್ದಾರೆ. ಇಂತವರ ಸಾಲಿಗೆ ಸೇರಿದವರು ಕನ್ನಡದ ಹಿರಿಯ ನಟ ಅನಂತ್​​ ಕುಮಾರ್ ಕೂಡ. ಹೌದು, ತಮ್ಮ ನಟನೆಯಿಂದಲೇ ಪ್ರೇಕ್ಷಕರನ್ನು ಹಿಡಿದಿಡಬಲ್ಲ ಮಾಂತ್ರಿಕ ನಟ ಅನಂತ್​​ ನಾಗ್​ ಈ ಹಿಂದೆ ಒಬ್ಬ ರಾಜಕಾರಣಿ. ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿದ್ದವರು. ಆದರೆ ಕಳೆದ 22 ವರ್ಷಗಳಿಂದ ಚುನಾವಣಾ ರಾಜಕಾರಣದಿಂದ ಇವರು ದೂರವೇ ಉಳಿದಿದ್ದು, ತಮ್ಮನ್ನು ಸಂಪೂರ್ಣವಾಗಿ ಸಿನಿಮಾಗೆ ಸಮರ್ಪಿಸಿಕೊಂಡಿದ್ದಾರೆ. ಇದರ ಪ್ರತಿಫಲ ಎಂಬಂತೆ ಭಾರತದ ಸಿನಿಮಾ ಕ್ಷೇತ್ರದಲ್ಲಿನ ಅತ್ಯುತ್ತಮ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅವರೀಗ ಭಾಜನರಾಗಿದ್ದಾರೆ.

ಆಕಸ್ಮಿಕವಾಗಿ ರಾಜಕೀಯಕ್ಕೆ ಎಂಟ್ರಿ, ರಾಮಕೃಷ್ಣ ಹೆಗಡೆಯೇ ಪ್ರೇರಣೆ

ಅನಂತ್ ನಾಗ್ ಅವರು ರಾಜಕೀಯಕ್ಕೆ ಬಂದದ್ದು ಆಕಸ್ಮಿಕವಾಗಿ. 1980ರ ದಶಕದಿಂದಲೂ ಜನತಾ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು ರಾಮಕೃಷ್ಣ ಹೆಗಡೆಯಿಂದ ಪ್ರೇರಣೆ ಪಡೆದಿದ್ದರು. 1983ರ ವಿಧಾನಸಭಾ ಚುನಾವಣೆ ವೇಳೆ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿ ರಾಜಕೀಯ ಅಖಾಡಕ್ಕೆ ಧುಮುಕಿದ ಅನಂತ್​​ ನಾಗ್​​, ಅದೇ ವರ್ಷ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಜ್ಞಾನಪೀಠ ಪ್ರಶಸ್ತಿ ವಿಜೇತ ಶಿವರಾಮ ಕಾರಂತರ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು. 1988 ರಿಂದ 1994 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ನಾಮನಿರ್ದೇಶಿತ ಸದಸ್ಯರಾಗಿ ಸೇವೆ ಸಲ್ಲಿಸಿದ ಇವರು, ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಿಂದ ಜನತಾ ಪಕ್ಷದ ಅಭ್ಯರ್ಥಿಯಾಗಿ 1994ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸುವ ಮೂಲಕ ವಿಧಾನಸಭೆ ಪ್ರವೇಶಿಸಿದ್ದರು. ಜೆ.ಎಚ್. ಪಟೇಲ್ ಅವರ ಸಂಪುಟದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಹಾಗೂ ನಗರಾಭಿವೃದ್ಧಿ ಸಚಿವರಾಗಿ (1996–1999) ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ: ‘ದಾದಾ ಸಾಹೇಬ್ ಫಾಲ್ಕೆ ಸುದ್ದಿ ಕೇಳಿ ಅನಂತ್ ನಾಗ್ ನಕ್ಕಿ ಮಲಗಿದ್ರು’; ಗಾಯತ್ರಿ ಅನಂತ್ ನಾಗ್

ರಾಜಕಾರಣಬಿಟ್ಟ ಬಳಿಕ ಹಲವು ಹಿಟ್​​ ಚಿತ್ರಗಳಲ್ಲಿ ನಟನೆ

2004ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದಿಂದ ಜೆಡಿಎಸ್​​ ಅಭ್ಯರ್ಥಿಯಾಗಿ ಸ್ಪರ್ಥಿಸಿದ್ದ ಅನಂತ್​ ನಾಗ್​​, ಮೂರನೇ ಸ್ಥಾನ ಪಡೆದು ಸೋಲುಂಡಿದ್ದರು.  ಬಳಿಕ ರಾಜಕಾರಣದಿಂದ ದೂರವಾದ ಅವರು ಮತ್ತೆ ಸಿನಿಮಾಗಳಿಗೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದರು.  ನೆನಪಿರಲಿ (2005), ಮುಂಗಾರು ಮಳೆ (2006), ಗಾಳಿಪಟ (2008), ಪಂಚರಂಗಿ (2010), ಪರಮಾತ್ಮ (2011), ಮೈನಾ, ಗೂಗ್ಲಿ, ಕಡ್ಡಿಪುಡಿ (2013), ಗಜಕೇಸರಿ (2014), ರಾಜಕುಮಾರ (2017), ಸ.ಹಿ.ಪ್ರಾ. ಶಾಲೆ ಕಾಸರಗೋಡು, ಕೆಜಿಎಫ್​​-1 (2018), ಗಾಳಿಪಟ-2 (2022) ಸೇರಿ ಹಲವು ಹಿಟ್​​ ಚಿತ್ರಗಳಲ್ಲಿ ನಟಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. ​​​

Published On - 8:42 pm, Wed, 16 September 26

Follow Us
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ