AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನ್ನಿ ಡಿಯೋಲ್​ಗೆ ಭರ್ಜರಿ ಗೆಲುವು; ಅಕ್ಷಯ್ ಕುಮಾರ್ ಎದುರು ತೊಡೆ ತಟ್ಟಿದ ನಟ

ಈ ವರ್ಷ ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ ಗೆದ್ದ ಸಿನಿಮಾಗಳ ಸಂಖ್ಯೆ ತುಂಬಾನೇ ಕಡಿಮೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಮೊದಲ ದಿನ 55 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಇದಾದ ಬಳಿಕ ಭರ್ಜರಿ ಓಪನಿಂಗ್ ಪಡೆದ ಸಿನಿಮಾ ಎನ್ನುವ ಖ್ಯಾತಿ ‘ಗದರ್ 2’ ಚಿತ್ರಕ್ಕೆ ಸಿಕ್ಕಿದೆ.

ಸನ್ನಿ ಡಿಯೋಲ್​ಗೆ ಭರ್ಜರಿ ಗೆಲುವು; ಅಕ್ಷಯ್ ಕುಮಾರ್ ಎದುರು ತೊಡೆ ತಟ್ಟಿದ ನಟ
ಸನ್ನಿ ಡಿಯೋಲ್-ಅಕ್ಷಯ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Aug 12, 2023 | 12:24 PM

Share

ನಟ ಸನ್ನಿ ಡಿಯೋಲ್ ನಟನೆಯ ‘ಗದರ್ 2’ ಸಿನಿಮಾ (Gadar 2 Movie) ಮತ್ತು ಅಕ್ಷಯ್ ಕುಮಾರ್ ಹಾಗೂ ಪಂಕಜ್ ತ್ರಿಪಾಠಿ ಅಭಿನಯದ ‘ಒಎಂಜಿ 2’ ಚಿತ್ರ ಆಗಸ್ಟ್ 11ರಂದು ರಿಲೀಸ್ ಆಗಿದೆ. ಎರಡು ದೊಡ್ಡ ಬಜೆಟ್ ಚಿತ್ರಗಳು ಒಟ್ಟಿಗೆ ರಿಲೀಸ್ ಆಗಿರುವುದರಿಂದ ಕ್ಲ್ಯಾಶ್​ ಏರ್ಪಟ್ಟಿತ್ತು. ಈ ಎರಡೂ ಚಿತ್ರಗಳು ಸೀಕ್ವೆಲ್ ಅನ್ನೋದು ವಿಶೇಷ. ಈ ಪೈಕಿ ‘ಗದರ್ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿದೆ. ಈ ಚಿತ್ರ ಮೊದಲ ದಿನ 40 ಕೋಟಿ ರೂಪಾಯಿ ಬಾಚಿಕೊಂಡಿದೆ. ‘ಒಎಂಜಿ 2’ ಚಿತ್ರ ಕೇವಲ 9 ಕೋಟಿ ರೂಪಾಯಿಗೆ ತೃಪ್ತಿಪಟ್ಟುಕೊಂಡಿದೆ.

ಈ ವರ್ಷ ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ ಗೆದ್ದ ಸಿನಿಮಾಗಳ ಸಂಖ್ಯೆ ತುಂಬಾನೇ ಕಡಿಮೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಮೊದಲ ದಿನ 55 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಇದಾದ ಬಳಿಕ ಭರ್ಜರಿ ಓಪನಿಂಗ್ ಪಡೆದ ಸಿನಿಮಾ ಎನ್ನುವ ಖ್ಯಾತಿ ‘ಗದರ್ 2’ ಚಿತ್ರಕ್ಕೆ ಸಿಕ್ಕಿದೆ. ಸನ್ನಿ ಡಿಯೋಲ್ ಅವರು ಈ ಚಿತ್ರದಿಂದ ಭರ್ಜರಿ ಗೆಲುವು ಕಂಡಿದ್ದಾರೆ. ಅನಿಲ್ ಶರ್ಮಾ ಅವರು ‘ಗದರ್ 2’ ಚಿತ್ರಕ್ಕೆ ಆ್ಯಕ್ಷನ್ ಹೇಳಿದ್ದಾರೆ. 2001ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆದ ‘ಗದರ್’ ಚಿತ್ರದ ಸೀಕ್ವೆಲ್ ಇದಾಗಿದೆ.

ತರಣ್ ಆದರ್ಶ್ ಮಾಡಿರೋ ಟ್ವೀಟ್..

ಅಕ್ಷಯ್ ಕುಮಾರ್ ನಟನೆಯ ‘ಒಎಂಜಿ 2’ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆ ಪಡೆದಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಕೇವಲ 9 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಲೈಂಗಿಕ ಶಿಕ್ಷಣದ ಕುರಿತು ಸಿನಿಮಾ ಇದೆ. ಗಳಿಕೆ ವಿಚಾರದಲ್ಲಿ ಎರಡೂ ಚಿತ್ರಗಳ ಮಧ್ಯೆ ಅಜಗಜಾಂತರ ವ್ಯತ್ಯಾಸ ಇದೆ.

ಇದನ್ನೂ ಓದಿ:  ಆಲ್​ಟೈಮ್ ಸೂಪರ್ ಹಿಟ್ ‘ಗದರ್’ ಸಿನಿಮಾಕ್ಕೆ ಸ್ಪೂರ್ತಿ ಈ ಸೈನಿಕ: ಪ್ರೇಮಕ್ಕಾಗಿ ಮಾಡಿದ್ದ ಅದ್ವಿತೀಯ ಸಾಹಸ

‘ಒಎಂಜಿ 2’ ಚಿತ್ರಕ್ಕೆ ಇಂದು (ಆಗಸ್ಟ್ 12) ಹಾಗೂ ನಾಳೆ (ಆಗಸ್ಟ್​ 13) ಒಳ್ಳೆಯ ರೀತಿಯಲ್ಲಿ ಗಳಿಕೆ ಮಾಡಲೇಬೇಕಾದ ಅನಿವಾರ್ಯತೆ ಇದೆ. ಇತ್ತೀಚೆಗೆ ರಿಲೀಸ್ ಆದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರ ಕೂಡ ಮೆಚ್ಚುಗೆ ಪಡೆದಿದ್ದು ರೇಸ್​​ನಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!