ಸನ್ನಿ ಡಿಯೋಲ್​ಗೆ ಭರ್ಜರಿ ಗೆಲುವು; ಅಕ್ಷಯ್ ಕುಮಾರ್ ಎದುರು ತೊಡೆ ತಟ್ಟಿದ ನಟ

ಈ ವರ್ಷ ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ ಗೆದ್ದ ಸಿನಿಮಾಗಳ ಸಂಖ್ಯೆ ತುಂಬಾನೇ ಕಡಿಮೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಮೊದಲ ದಿನ 55 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಇದಾದ ಬಳಿಕ ಭರ್ಜರಿ ಓಪನಿಂಗ್ ಪಡೆದ ಸಿನಿಮಾ ಎನ್ನುವ ಖ್ಯಾತಿ ‘ಗದರ್ 2’ ಚಿತ್ರಕ್ಕೆ ಸಿಕ್ಕಿದೆ.

ಸನ್ನಿ ಡಿಯೋಲ್​ಗೆ ಭರ್ಜರಿ ಗೆಲುವು; ಅಕ್ಷಯ್ ಕುಮಾರ್ ಎದುರು ತೊಡೆ ತಟ್ಟಿದ ನಟ
ಸನ್ನಿ ಡಿಯೋಲ್-ಅಕ್ಷಯ್ ಕುಮಾರ್
Follow us
|

Updated on: Aug 12, 2023 | 12:24 PM

ನಟ ಸನ್ನಿ ಡಿಯೋಲ್ ನಟನೆಯ ‘ಗದರ್ 2’ ಸಿನಿಮಾ (Gadar 2 Movie) ಮತ್ತು ಅಕ್ಷಯ್ ಕುಮಾರ್ ಹಾಗೂ ಪಂಕಜ್ ತ್ರಿಪಾಠಿ ಅಭಿನಯದ ‘ಒಎಂಜಿ 2’ ಚಿತ್ರ ಆಗಸ್ಟ್ 11ರಂದು ರಿಲೀಸ್ ಆಗಿದೆ. ಎರಡು ದೊಡ್ಡ ಬಜೆಟ್ ಚಿತ್ರಗಳು ಒಟ್ಟಿಗೆ ರಿಲೀಸ್ ಆಗಿರುವುದರಿಂದ ಕ್ಲ್ಯಾಶ್​ ಏರ್ಪಟ್ಟಿತ್ತು. ಈ ಎರಡೂ ಚಿತ್ರಗಳು ಸೀಕ್ವೆಲ್ ಅನ್ನೋದು ವಿಶೇಷ. ಈ ಪೈಕಿ ‘ಗದರ್ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿದೆ. ಈ ಚಿತ್ರ ಮೊದಲ ದಿನ 40 ಕೋಟಿ ರೂಪಾಯಿ ಬಾಚಿಕೊಂಡಿದೆ. ‘ಒಎಂಜಿ 2’ ಚಿತ್ರ ಕೇವಲ 9 ಕೋಟಿ ರೂಪಾಯಿಗೆ ತೃಪ್ತಿಪಟ್ಟುಕೊಂಡಿದೆ.

ಈ ವರ್ಷ ಬಾಲಿವುಡ್ ಬಾಕ್ಸ್ ಆಫೀಸ್​ನಲ್ಲಿ ಗೆದ್ದ ಸಿನಿಮಾಗಳ ಸಂಖ್ಯೆ ತುಂಬಾನೇ ಕಡಿಮೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಮೊದಲ ದಿನ 55 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಇದಾದ ಬಳಿಕ ಭರ್ಜರಿ ಓಪನಿಂಗ್ ಪಡೆದ ಸಿನಿಮಾ ಎನ್ನುವ ಖ್ಯಾತಿ ‘ಗದರ್ 2’ ಚಿತ್ರಕ್ಕೆ ಸಿಕ್ಕಿದೆ. ಸನ್ನಿ ಡಿಯೋಲ್ ಅವರು ಈ ಚಿತ್ರದಿಂದ ಭರ್ಜರಿ ಗೆಲುವು ಕಂಡಿದ್ದಾರೆ. ಅನಿಲ್ ಶರ್ಮಾ ಅವರು ‘ಗದರ್ 2’ ಚಿತ್ರಕ್ಕೆ ಆ್ಯಕ್ಷನ್ ಹೇಳಿದ್ದಾರೆ. 2001ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆದ ‘ಗದರ್’ ಚಿತ್ರದ ಸೀಕ್ವೆಲ್ ಇದಾಗಿದೆ.

ತರಣ್ ಆದರ್ಶ್ ಮಾಡಿರೋ ಟ್ವೀಟ್..

ಅಕ್ಷಯ್ ಕುಮಾರ್ ನಟನೆಯ ‘ಒಎಂಜಿ 2’ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆ ಪಡೆದಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಕೇವಲ 9 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಲೈಂಗಿಕ ಶಿಕ್ಷಣದ ಕುರಿತು ಸಿನಿಮಾ ಇದೆ. ಗಳಿಕೆ ವಿಚಾರದಲ್ಲಿ ಎರಡೂ ಚಿತ್ರಗಳ ಮಧ್ಯೆ ಅಜಗಜಾಂತರ ವ್ಯತ್ಯಾಸ ಇದೆ.

ಇದನ್ನೂ ಓದಿ:  ಆಲ್​ಟೈಮ್ ಸೂಪರ್ ಹಿಟ್ ‘ಗದರ್’ ಸಿನಿಮಾಕ್ಕೆ ಸ್ಪೂರ್ತಿ ಈ ಸೈನಿಕ: ಪ್ರೇಮಕ್ಕಾಗಿ ಮಾಡಿದ್ದ ಅದ್ವಿತೀಯ ಸಾಹಸ

‘ಒಎಂಜಿ 2’ ಚಿತ್ರಕ್ಕೆ ಇಂದು (ಆಗಸ್ಟ್ 12) ಹಾಗೂ ನಾಳೆ (ಆಗಸ್ಟ್​ 13) ಒಳ್ಳೆಯ ರೀತಿಯಲ್ಲಿ ಗಳಿಕೆ ಮಾಡಲೇಬೇಕಾದ ಅನಿವಾರ್ಯತೆ ಇದೆ. ಇತ್ತೀಚೆಗೆ ರಿಲೀಸ್ ಆದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರ ಕೂಡ ಮೆಚ್ಚುಗೆ ಪಡೆದಿದ್ದು ರೇಸ್​​ನಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ