ಗದ್ದರ್ ಪ್ರಶಸ್ತಿ: ರಶ್ಮಿಕಾ ಬೌನ್ಸರ್ ಕಿರಿಕ್, ರಾಜಮೌಳಿ ತಂದೆಗೆ ಅವಮಾನ

Gaddar film Awards: ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು, ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ನೀಡಲಾಯ್ತು. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಇನ್ನೂ ಕೆಲವು ಗಣ್ಯರುಗಳು ಅತ್ಯುತ್ತಮ ನಟ, ನಟಿ ಮತ್ತು ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ವಿತರಣೆ ಮಾಡಲಾಯ್ತು. ಕಾರ್ಯಕ್ರಮ ಚೆನ್ನಾಗಿ ನಡೆಯಿತಾದರೂ ಎರಡು ಪ್ರಮುಖ ವಿಷಯಗಳು ತುಸು ತಡವಾಗಿ ವರದಿ ಆಗಿವೆ. ಕಾರ್ಯಕ್ರದ ವೇಳೆ ರಶ್ಮಿಕಾ ಮಂದಣ್ಣ ಅವರ ಬೌನ್ಸರ್ ಕಿರಿಕ್ ಮಾಡಿಕೊಂಡಿದ್ದಾರೆ ಹಾಗೂ ರಾಜಮೌಳಿ ಅವರ ತಂದೆ ಖ್ಯಾತ ಕತೆಗಾರ ವಿಯೇಂದ್ರ ಪ್ರಸಾದ್ ಅವರಿಗೆ ಅಪಮಾನ ನಡೆದಿದೆ ಎಂದು ಕೆಲ ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಗದ್ದರ್ ಪ್ರಶಸ್ತಿ: ರಶ್ಮಿಕಾ ಬೌನ್ಸರ್ ಕಿರಿಕ್, ರಾಜಮೌಳಿ ತಂದೆಗೆ ಅವಮಾನ
Rashmika Vijayendra

Updated on: Mar 20, 2026 | 3:28 PM

ತೆಲಂಗಾಣ ಸರ್ಕಾರವು ನಿನ್ನೆಯಷ್ಟೆ (ಮಾರ್ಚ್ 19) ‘ಗದ್ದರ್ ಚಲನಚಿತ್ರ ಪ್ರಶಸ್ತಿ’ (Gaddar) ಎರಡನೇ ಆವೃತ್ತಿಯ ಪ್ರದಾನ ಸಮಾರಂಭವನ್ನು ಆಯೋಜಿಸಿತ್ತು. ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು, ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ನೀಡಲಾಯ್ತು. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಇನ್ನೂ ಕೆಲವು ಗಣ್ಯರುಗಳು ಅತ್ಯುತ್ತಮ ನಟ, ನಟಿ ಮತ್ತು ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ವಿತರಣೆ ಮಾಡಲಾಯ್ತು. ಕಾರ್ಯಕ್ರಮ ಚೆನ್ನಾಗಿ ನಡೆಯಿತಾದರೂ ಎರಡು ಪ್ರಮುಖ ವಿಷಯಗಳು ತುಸು ತಡವಾಗಿ ವರದಿ ಆಗಿವೆ. ಕಾರ್ಯಕ್ರದ ವೇಳೆ ರಶ್ಮಿಕಾ ಮಂದಣ್ಣ ಅವರ ಬೌನ್ಸರ್ ಕಿರಿಕ್ ಮಾಡಿಕೊಂಡಿದ್ದಾರೆ ಹಾಗೂ ರಾಜಮೌಳಿ ಅವರ ತಂದೆ ಖ್ಯಾತ ಕತೆಗಾರ ವಿಯೇಂದ್ರ ಪ್ರಸಾದ್ ಅವರಿಗೆ ಅಪಮಾನ ನಡೆದಿದೆ ಎಂದು ಕೆಲ ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ನಟಿ ರಶ್ಮಿಕಾ ಮಂದಣ್ಣ ಅವರ ವೈಯಕ್ತಿಕ ಬೌನ್ಸರ್ ಒಬ್ಬರು ತೆಲಂಗಾಣದ ಫಿಲ್ಮ್ ಡೆವಲಪ್‌ಮೆಂಟ್ ಕಾರ್ಪೊರೇಷನ್ (FDC) ಅಧ್ಯಕ್ಷ ದಿಲ್ ರಾಜು ಅವರ ಆಪ್ತ ಸಹಾಯಕರೊಂದಿಗೆ ಜಗಳ ಮಾಡಿದ್ದಾರೆಂದು ವರದಿಯಾಗಿದೆ. ಕಾರ್ಯಕ್ರಮದಲ್ಲಿ ರಶ್ಮಿಕಾ ಮತ್ತು ದಿಲ್ ರಾಜು ಅಕ್ಕ-ಪಕ್ಕ ಕೂತಿದ್ದರು. ಆದರೆ ದಿಲ್ ರಾಜು ಅವರ ಆಪ್ತರನ್ನು ಅಭಿಮಾನಿಯೆಂದು ತಪ್ಪಾಗಿ ಭಾವಿಸಿ ರಶ್ಮಿಕಾರ ಬೌನ್ಸರ್ ಕಿರಿಕ್ ಮಾಡಿದ್ದಾರೆ ಎನ್ನಲಾಗಿದ್ದು, ಬೌನ್ಸರ್ ಹೊಸದಾಗಿ ಕೆಲಸಕ್ಕೆ ಸೇರಿದ್ದರಿಂದ ಅಲ್ಲಿನ ಗಣ್ಯರ ಬಗ್ಗೆ ಅವರಿಗೆ ಅಷ್ಟಾಗಿ ತಿಳಿದಿರಲಿಲ್ಲ ಎನ್ನಲಾಗಿದೆ. ಮಾಧ್ಯಮದವರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸುವವರೆಗೂ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ:ಮಗಳಾಗಿ ಬಂದೆ, ಸೊಸೆಯಾಗಿದ್ದೀನಿ: ಪ್ರಶಸ್ತಿ ಸ್ವೀಕರಿಸಿ ಭಾವುಕರಾದ ರಶ್ಮಿಕಾ

ಖ್ಯಾತ ಚಿತ್ರಕಥೆಗಾರರೂ ಆಗಿರುವ ಹಾಗೂ ರಾಜಮೌಳಿ ಅವರ ತಂದೆಯೂ ಆಗಿರುವ ಸಂಸದ ವಿಜಯೇಂದ್ರ ಪ್ರಸಾದ್ ಅವರು ಸಹ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆದರೆ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯ ಎಡವಟ್ಟಿನಿಂದಾಗಿ ಸಮಾರಂಭದಿಂದ ಅರ್ಧಕ್ಕೇ ಹೊರನಡೆದರು. ಕಾರ್ಯಕ್ರಮದ ಜವಾಬ್ದಾರಿ ಹೊತ್ತಿದ್ದ ಮುಂಬೈ ಮೂಲದ ಕಂಪನಿಗೆ ದಕ್ಷಿಣ ಭಾರತದ ಸೆಲೆಬ್ರಿಟಿಗಳ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಅವರು ವಿಜಯೇಂದ್ರ ಪ್ರಸಾದ್ ಅವರನ್ನು ನಟ ಆರ್ ನಾರಾಯಣ ಮೂರ್ತಿ ಎಂದು ತಪ್ಪಾಗಿ ಭಾವಿಸಿ, ಅದೇ ಹೆಸರಿನಿಂದ ಕರೆದರು. ಇದರಿಂದ ಬೇಸರಗೊಂಡ ವಿಜಯೇಂದ್ರ ಪ್ರಸಾದ್ ಅವರು ವೇದಿಕೆಯಿಂದ ಕೋಪದಿಂದಲೇ ನಿರ್ಗಮಿಸಿದರು ಎನ್ನಲಾಗಿದೆ.

‘ಎನ್‌.ಟಿ.ಆರ್ ಜೀವಮಾನ ಸಾಧನೆ’ಯನ್ನು ಮೆಗಾಸ್ಟಾರ್ ಚಿರಂಜೀವಿ ಅವರಿಗೆ ನೀಡಲಾಯ್ತು. ಪ್ರಶಸ್ತಿ ಸ್ವೀಕರಿಸಿದ ಚಿರಂಜೀವಿ ಅವರು, ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರವನ್ನು ಶ್ಲಾಘಿಸಿದರು. ಚಲನಚಿತ್ರ ರಂಗಕ್ಕೆ ಸರ್ಕಾರ ನೀಡುತ್ತಿರುವ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕಲಾವಿದರನ್ನು ಪ್ರೋತ್ಸಾಹಿಸುವ ವಿಷಯದಲ್ಲಿ ಆಂಧ್ರಪ್ರದೇಶ ಸರ್ಕಾರವು ತೆಲಂಗಾಣವನ್ನು ನೋಡಿ ಕಲಿಯಬೇಕು ಎಂದು ಸಹ ಅಭಿಪ್ರಾಯಪಟ್ಟರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us