AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಶ್ರ ಪ್ರತಿಕ್ರಿಯೆ ಮಧ್ಯೆಯೂ ಭರ್ಜರಿ ಗಳಿಕೆ; ‘ಗೇಮ್ ಚೇಂಜರ್’ ಮೊದಲ ದಿನದ ಕಲೆಕ್ಷನ್ ಇಷ್ಟೊಂದಾ?

ಶಂಕರ್ ಅವರು ‘ಗೇಮ್ ಚೇಂಜರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ರಾಮ್ ಚರಣ್, ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರ ಮಾಡಿದರೆ, ಎಸ್ಜೆ ಸೂರ್ಯ ವಿಲನ್ ಪಾತ್ರ ಮಾಡಿದ್ದಾರೆ. 450 ಕೋಟಿ ರೂಪಾಯಿ ಬಜೆಟ್ನಲ್ಲಿ ಸಿದ್ಧವಾದ ಈ ಚಿತ್ರ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂಬ ಕುತೂಹಲ ಮೂಡಿದೆ.

ಮಿಶ್ರ ಪ್ರತಿಕ್ರಿಯೆ ಮಧ್ಯೆಯೂ ಭರ್ಜರಿ ಗಳಿಕೆ; ‘ಗೇಮ್ ಚೇಂಜರ್’ ಮೊದಲ ದಿನದ ಕಲೆಕ್ಷನ್ ಇಷ್ಟೊಂದಾ?
ಗೇಮ್ ಚೇಂಜರ್
ರಾಜೇಶ್ ದುಗ್ಗುಮನೆ
|

Updated on: Jan 11, 2025 | 7:21 AM

Share

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಜನವರಿ 10ರಂದು ವಿಶ್ವಾದ್ಯಂತ ರಿಲೀಸ್ ಆಗಿದೆ. ಸಂಕ್ರಾಂತಿಗೆ ನಾಲ್ಕು ದಿನ ಇರುವಾಗಲೇ ಚಿತ್ರ ಬಿಡುಗಡೆ ಕಂಡಿದೆ. ಈ ಚಿತ್ರದ ಮೊದಲ ದಿನದ ಗಳಿಕೆ ಎಷ್ಟಾಗಲಿದೆ ಎಂಬ ಕುತೂಹಲ ಮೂಡಿತ್ತು. ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕ ಹೊರತಾಗಿಯೂ ಚಿತ್ರ ಉತ್ತಮ ಗಳಿಕೆ ಮಾಡಿದೆ. ಹಾಗಾದರೆ ಈ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

ಶಂಕರ್ ಅವರು ‘ಗೇಮ್​ ಚೇಂಜರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಮೊದಲು ‘ಇಂಡಿಯನ್ 2’ ಸೋಲಿಗೆ ಅವರು ಕಾರಣರಾಗಿದ್ದರಿಂದ ‘ಗೇಮ್ ಚೇಂಜರ್’ ಬಗ್ಗೆ ನಿರೀಕ್ಷೆ ಇರಲಿಲ್ಲ. ಈ ಸಿನಿಮಾ ಸೂಪರ್ ಎನಿಸಿಕೊಳ್ಳದಿದ್ದರೂ ಸಾಧಾರಣ ಎನಿಸಿಕೊಂಡಿದೆ. 450 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರ ಮೊದಲ ದಿನ 51 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಸಿನಿಮಾ ಬಜೆಟ್​ಗೆ ಹೋಲಿಕೆ ಮಾಡಿದರೆ ‘ಗೇಮ್ ಚೇಂಜರ್’ ಚಿತ್ರದ ಮೊದಲ ದಿನದ ಗಳಿಕೆ ಏನಂದರೆ ಏನೂ ಅಲ್ಲ. ಆದರೆ, ಸಿನಿಮಾಗೆ ಸಿಕ್ಕ ಮಿಶ್ರ ಪ್ರತಿಕ್ರಿಯೆ ಮಧ್ಯೆಯೂ ಚಿತ್ರ ಇಷ್ಟು ಉತ್ತಮ ಗಳಿಕೆ ಮಾಡಿರುವುದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸಿನಿಮಾ ಲಾಭ ಕಾಣಬೇಕು ಎಂದರೆ ಇನ್ನೂ ದೊಡ್ಡ ಮಟ್ಟದ ಕಲೆಕ್ಷನ್ ಮಾಡಲೇಬೇಕಾದ ಅನಿವಾರ್ಯತೆ ಇದೆ.

ಇದನ್ನೂ ಓದಿ: Game Changer Review: ಪ್ರೇಕ್ಷಕರಿಗೆ ಪಾಠ ಮಾಡಿ, ರಾಜಕೀಯಕ್ಕೆ ಚಾಟಿ ಬೀಸಿದ ಗೇಮ್ ಚೇಂಜರ್​

‘ಗೇಮ್ ಚೇಂಜರ್’ ಸಿನಿಮಾ ಮೊದಲ ದಿನ ತೆಲುಗು ವರ್ಷನ್​ನಲ್ಲಿ 42 ಕೋಟಿ ರೂಪಾಯಿ, ತಮಿಳಿನಿಂದ 2.1 ಕೋಟಿ ರೂಪಾಯಿ, ಹಿಂದಿಯಿಂದ 7 ಕೋಟಿ ರೂಪಾಯಿ, ಕನ್ನಡ ವರ್ಷನ್​ನಿಂದ 10 ಲಕ್ಷ ರೂಪಾಯಿ ಹಾಗೂ ಮಲಯಾಳಂನಿಂದ 5 ಲಕ್ಷ ರೂಪಾಯಿ ಚಿತ್ರಕ್ಕೆ ಸಿಕ್ಕಿದೆ. ಈ ಮೂಲಕ ಒಟ್ಟೂ ಗಳಿಕೆ 51.25 ಹಿಂದಿಯಲ್ಲಿ ಸಿನಿಮಾ ಇಷ್ಟೊಂದು ಕಲೆಕ್ಷನ್ ಮಾಡಲು ‘ಆರ್​ಆರ್​ಆರ್’ ಸಿನಿಮಾ ಕಾರಣ ಎಂದು ಹೇಳಲಾಗುತ್ತಿದೆ. ‘ಆರ್​ಆರ್​ಆರ್’ ಚಿತ್ರದಲ್ಲಿ ರಾಮ್ ಚರಣ್ ನಟಿಸಿದ್ದರು. ಅವರ ನಟನೆ ಗಮನ ಸೆಳೆದಿತ್ತು. ಈ ಕಾರಣಕ್ಕೆ ಅನೇಕರು ಈ ಚಿತ್ರವನ್ನು ಹಿಂದಿಯಲ್ಲಿ ವೀಕ್ಷಿಸಿದ್ದಾರೆ. ಈ ಚಿತ್ರದಲ್ಲಿ ರಾಮ್ ಚರಣ್, ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರ ಮಾಡಿದರೆ, ಎಸ್​ಜೆ ಸೂರ್ಯ ವಿಲನ್ ಪಾತ್ರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!