AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಶ್ರ ಪ್ರತಿಕ್ರಿಯೆ ಮಧ್ಯೆಯೂ ಭರ್ಜರಿ ಗಳಿಕೆ; ‘ಗೇಮ್ ಚೇಂಜರ್’ ಮೊದಲ ದಿನದ ಕಲೆಕ್ಷನ್ ಇಷ್ಟೊಂದಾ?

ಶಂಕರ್ ಅವರು ‘ಗೇಮ್ ಚೇಂಜರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ರಾಮ್ ಚರಣ್, ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರ ಮಾಡಿದರೆ, ಎಸ್ಜೆ ಸೂರ್ಯ ವಿಲನ್ ಪಾತ್ರ ಮಾಡಿದ್ದಾರೆ. 450 ಕೋಟಿ ರೂಪಾಯಿ ಬಜೆಟ್ನಲ್ಲಿ ಸಿದ್ಧವಾದ ಈ ಚಿತ್ರ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂಬ ಕುತೂಹಲ ಮೂಡಿದೆ.

ಮಿಶ್ರ ಪ್ರತಿಕ್ರಿಯೆ ಮಧ್ಯೆಯೂ ಭರ್ಜರಿ ಗಳಿಕೆ; ‘ಗೇಮ್ ಚೇಂಜರ್’ ಮೊದಲ ದಿನದ ಕಲೆಕ್ಷನ್ ಇಷ್ಟೊಂದಾ?
ಗೇಮ್ ಚೇಂಜರ್
ರಾಜೇಶ್ ದುಗ್ಗುಮನೆ
|

Updated on: Jan 11, 2025 | 7:21 AM

Share

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಜನವರಿ 10ರಂದು ವಿಶ್ವಾದ್ಯಂತ ರಿಲೀಸ್ ಆಗಿದೆ. ಸಂಕ್ರಾಂತಿಗೆ ನಾಲ್ಕು ದಿನ ಇರುವಾಗಲೇ ಚಿತ್ರ ಬಿಡುಗಡೆ ಕಂಡಿದೆ. ಈ ಚಿತ್ರದ ಮೊದಲ ದಿನದ ಗಳಿಕೆ ಎಷ್ಟಾಗಲಿದೆ ಎಂಬ ಕುತೂಹಲ ಮೂಡಿತ್ತು. ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕ ಹೊರತಾಗಿಯೂ ಚಿತ್ರ ಉತ್ತಮ ಗಳಿಕೆ ಮಾಡಿದೆ. ಹಾಗಾದರೆ ಈ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

ಶಂಕರ್ ಅವರು ‘ಗೇಮ್​ ಚೇಂಜರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಮೊದಲು ‘ಇಂಡಿಯನ್ 2’ ಸೋಲಿಗೆ ಅವರು ಕಾರಣರಾಗಿದ್ದರಿಂದ ‘ಗೇಮ್ ಚೇಂಜರ್’ ಬಗ್ಗೆ ನಿರೀಕ್ಷೆ ಇರಲಿಲ್ಲ. ಈ ಸಿನಿಮಾ ಸೂಪರ್ ಎನಿಸಿಕೊಳ್ಳದಿದ್ದರೂ ಸಾಧಾರಣ ಎನಿಸಿಕೊಂಡಿದೆ. 450 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರ ಮೊದಲ ದಿನ 51 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಸಿನಿಮಾ ಬಜೆಟ್​ಗೆ ಹೋಲಿಕೆ ಮಾಡಿದರೆ ‘ಗೇಮ್ ಚೇಂಜರ್’ ಚಿತ್ರದ ಮೊದಲ ದಿನದ ಗಳಿಕೆ ಏನಂದರೆ ಏನೂ ಅಲ್ಲ. ಆದರೆ, ಸಿನಿಮಾಗೆ ಸಿಕ್ಕ ಮಿಶ್ರ ಪ್ರತಿಕ್ರಿಯೆ ಮಧ್ಯೆಯೂ ಚಿತ್ರ ಇಷ್ಟು ಉತ್ತಮ ಗಳಿಕೆ ಮಾಡಿರುವುದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸಿನಿಮಾ ಲಾಭ ಕಾಣಬೇಕು ಎಂದರೆ ಇನ್ನೂ ದೊಡ್ಡ ಮಟ್ಟದ ಕಲೆಕ್ಷನ್ ಮಾಡಲೇಬೇಕಾದ ಅನಿವಾರ್ಯತೆ ಇದೆ.

ಇದನ್ನೂ ಓದಿ: Game Changer Review: ಪ್ರೇಕ್ಷಕರಿಗೆ ಪಾಠ ಮಾಡಿ, ರಾಜಕೀಯಕ್ಕೆ ಚಾಟಿ ಬೀಸಿದ ಗೇಮ್ ಚೇಂಜರ್​

‘ಗೇಮ್ ಚೇಂಜರ್’ ಸಿನಿಮಾ ಮೊದಲ ದಿನ ತೆಲುಗು ವರ್ಷನ್​ನಲ್ಲಿ 42 ಕೋಟಿ ರೂಪಾಯಿ, ತಮಿಳಿನಿಂದ 2.1 ಕೋಟಿ ರೂಪಾಯಿ, ಹಿಂದಿಯಿಂದ 7 ಕೋಟಿ ರೂಪಾಯಿ, ಕನ್ನಡ ವರ್ಷನ್​ನಿಂದ 10 ಲಕ್ಷ ರೂಪಾಯಿ ಹಾಗೂ ಮಲಯಾಳಂನಿಂದ 5 ಲಕ್ಷ ರೂಪಾಯಿ ಚಿತ್ರಕ್ಕೆ ಸಿಕ್ಕಿದೆ. ಈ ಮೂಲಕ ಒಟ್ಟೂ ಗಳಿಕೆ 51.25 ಹಿಂದಿಯಲ್ಲಿ ಸಿನಿಮಾ ಇಷ್ಟೊಂದು ಕಲೆಕ್ಷನ್ ಮಾಡಲು ‘ಆರ್​ಆರ್​ಆರ್’ ಸಿನಿಮಾ ಕಾರಣ ಎಂದು ಹೇಳಲಾಗುತ್ತಿದೆ. ‘ಆರ್​ಆರ್​ಆರ್’ ಚಿತ್ರದಲ್ಲಿ ರಾಮ್ ಚರಣ್ ನಟಿಸಿದ್ದರು. ಅವರ ನಟನೆ ಗಮನ ಸೆಳೆದಿತ್ತು. ಈ ಕಾರಣಕ್ಕೆ ಅನೇಕರು ಈ ಚಿತ್ರವನ್ನು ಹಿಂದಿಯಲ್ಲಿ ವೀಕ್ಷಿಸಿದ್ದಾರೆ. ಈ ಚಿತ್ರದಲ್ಲಿ ರಾಮ್ ಚರಣ್, ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರ ಮಾಡಿದರೆ, ಎಸ್​ಜೆ ಸೂರ್ಯ ವಿಲನ್ ಪಾತ್ರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?