AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಶ್ರ ಪ್ರತಿಕ್ರಿಯೆ ಮಧ್ಯೆಯೂ ಭರ್ಜರಿ ಗಳಿಕೆ; ‘ಗೇಮ್ ಚೇಂಜರ್’ ಮೊದಲ ದಿನದ ಕಲೆಕ್ಷನ್ ಇಷ್ಟೊಂದಾ?

ಶಂಕರ್ ಅವರು ‘ಗೇಮ್ ಚೇಂಜರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ರಾಮ್ ಚರಣ್, ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರ ಮಾಡಿದರೆ, ಎಸ್ಜೆ ಸೂರ್ಯ ವಿಲನ್ ಪಾತ್ರ ಮಾಡಿದ್ದಾರೆ. 450 ಕೋಟಿ ರೂಪಾಯಿ ಬಜೆಟ್ನಲ್ಲಿ ಸಿದ್ಧವಾದ ಈ ಚಿತ್ರ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂಬ ಕುತೂಹಲ ಮೂಡಿದೆ.

ಮಿಶ್ರ ಪ್ರತಿಕ್ರಿಯೆ ಮಧ್ಯೆಯೂ ಭರ್ಜರಿ ಗಳಿಕೆ; ‘ಗೇಮ್ ಚೇಂಜರ್’ ಮೊದಲ ದಿನದ ಕಲೆಕ್ಷನ್ ಇಷ್ಟೊಂದಾ?
ಗೇಮ್ ಚೇಂಜರ್
ರಾಜೇಶ್ ದುಗ್ಗುಮನೆ
|

Updated on: Jan 11, 2025 | 7:21 AM

Share

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಜನವರಿ 10ರಂದು ವಿಶ್ವಾದ್ಯಂತ ರಿಲೀಸ್ ಆಗಿದೆ. ಸಂಕ್ರಾಂತಿಗೆ ನಾಲ್ಕು ದಿನ ಇರುವಾಗಲೇ ಚಿತ್ರ ಬಿಡುಗಡೆ ಕಂಡಿದೆ. ಈ ಚಿತ್ರದ ಮೊದಲ ದಿನದ ಗಳಿಕೆ ಎಷ್ಟಾಗಲಿದೆ ಎಂಬ ಕುತೂಹಲ ಮೂಡಿತ್ತು. ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕ ಹೊರತಾಗಿಯೂ ಚಿತ್ರ ಉತ್ತಮ ಗಳಿಕೆ ಮಾಡಿದೆ. ಹಾಗಾದರೆ ಈ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

ಶಂಕರ್ ಅವರು ‘ಗೇಮ್​ ಚೇಂಜರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಮೊದಲು ‘ಇಂಡಿಯನ್ 2’ ಸೋಲಿಗೆ ಅವರು ಕಾರಣರಾಗಿದ್ದರಿಂದ ‘ಗೇಮ್ ಚೇಂಜರ್’ ಬಗ್ಗೆ ನಿರೀಕ್ಷೆ ಇರಲಿಲ್ಲ. ಈ ಸಿನಿಮಾ ಸೂಪರ್ ಎನಿಸಿಕೊಳ್ಳದಿದ್ದರೂ ಸಾಧಾರಣ ಎನಿಸಿಕೊಂಡಿದೆ. 450 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರ ಮೊದಲ ದಿನ 51 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಸಿನಿಮಾ ಬಜೆಟ್​ಗೆ ಹೋಲಿಕೆ ಮಾಡಿದರೆ ‘ಗೇಮ್ ಚೇಂಜರ್’ ಚಿತ್ರದ ಮೊದಲ ದಿನದ ಗಳಿಕೆ ಏನಂದರೆ ಏನೂ ಅಲ್ಲ. ಆದರೆ, ಸಿನಿಮಾಗೆ ಸಿಕ್ಕ ಮಿಶ್ರ ಪ್ರತಿಕ್ರಿಯೆ ಮಧ್ಯೆಯೂ ಚಿತ್ರ ಇಷ್ಟು ಉತ್ತಮ ಗಳಿಕೆ ಮಾಡಿರುವುದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸಿನಿಮಾ ಲಾಭ ಕಾಣಬೇಕು ಎಂದರೆ ಇನ್ನೂ ದೊಡ್ಡ ಮಟ್ಟದ ಕಲೆಕ್ಷನ್ ಮಾಡಲೇಬೇಕಾದ ಅನಿವಾರ್ಯತೆ ಇದೆ.

ಇದನ್ನೂ ಓದಿ: Game Changer Review: ಪ್ರೇಕ್ಷಕರಿಗೆ ಪಾಠ ಮಾಡಿ, ರಾಜಕೀಯಕ್ಕೆ ಚಾಟಿ ಬೀಸಿದ ಗೇಮ್ ಚೇಂಜರ್​

‘ಗೇಮ್ ಚೇಂಜರ್’ ಸಿನಿಮಾ ಮೊದಲ ದಿನ ತೆಲುಗು ವರ್ಷನ್​ನಲ್ಲಿ 42 ಕೋಟಿ ರೂಪಾಯಿ, ತಮಿಳಿನಿಂದ 2.1 ಕೋಟಿ ರೂಪಾಯಿ, ಹಿಂದಿಯಿಂದ 7 ಕೋಟಿ ರೂಪಾಯಿ, ಕನ್ನಡ ವರ್ಷನ್​ನಿಂದ 10 ಲಕ್ಷ ರೂಪಾಯಿ ಹಾಗೂ ಮಲಯಾಳಂನಿಂದ 5 ಲಕ್ಷ ರೂಪಾಯಿ ಚಿತ್ರಕ್ಕೆ ಸಿಕ್ಕಿದೆ. ಈ ಮೂಲಕ ಒಟ್ಟೂ ಗಳಿಕೆ 51.25 ಹಿಂದಿಯಲ್ಲಿ ಸಿನಿಮಾ ಇಷ್ಟೊಂದು ಕಲೆಕ್ಷನ್ ಮಾಡಲು ‘ಆರ್​ಆರ್​ಆರ್’ ಸಿನಿಮಾ ಕಾರಣ ಎಂದು ಹೇಳಲಾಗುತ್ತಿದೆ. ‘ಆರ್​ಆರ್​ಆರ್’ ಚಿತ್ರದಲ್ಲಿ ರಾಮ್ ಚರಣ್ ನಟಿಸಿದ್ದರು. ಅವರ ನಟನೆ ಗಮನ ಸೆಳೆದಿತ್ತು. ಈ ಕಾರಣಕ್ಕೆ ಅನೇಕರು ಈ ಚಿತ್ರವನ್ನು ಹಿಂದಿಯಲ್ಲಿ ವೀಕ್ಷಿಸಿದ್ದಾರೆ. ಈ ಚಿತ್ರದಲ್ಲಿ ರಾಮ್ ಚರಣ್, ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರ ಮಾಡಿದರೆ, ಎಸ್​ಜೆ ಸೂರ್ಯ ವಿಲನ್ ಪಾತ್ರ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ