AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ದಿನಕ್ಕೆ ಹೀನಾಯ ಸ್ಥಿತಿಯಲ್ಲಿ ‘ಗೇಮ್ ಚೇಂಜರ್’ ಗಳಿಕೆ; ನಿರ್ಮಾಪಕರಿಗೆ ಆಗೋ ನಷ್ಟವೆಷ್ಟು?

‘ಗೇಮ್ ಚೇಂಜರ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಿರೀಕ್ಷೆಗಿಂತ ಕಡಿಮೆ ಗಳಿಕೆ ಮಾಡುತ್ತಿದೆ. ಮೊದಲ ದಿನ 51 ಕೋಟಿ ರೂಪಾಯಿ ಗಳಿಸಿದ್ದ ಚಿತ್ರ, ನಂತರದ ದಿನಗಳಲ್ಲಿ ನಿರೀಕ್ಷಿತ ಗಳಿಕೆಯನ್ನು ಕಾಣಲಿಲ್ಲ. ರಾಮ್ ಚರಣ್ ಮತ್ತು ಕಿಯಾರಾ ಅಡ್ವಾಣಿ ಅಭಿನಯದ ಈ ಸಿನಿಮಾದ ನಿರ್ದೇಶನ ಶಂಕರ್ ಅವರದ್ದು. ದೊಡ್ಡ ಬಜೆಟ್‌ನ ಈ ಚಿತ್ರ ದೊಡ್ಡ ಪ್ರಮಾಣದ ನಷ್ಟವನ್ನು ಅನುಭವಿಸುವ ಸಾಧ್ಯತೆಯಿದೆ ಎಂದು ಊಹಿಸಲಾಗಿದೆ.

ಮೂರೇ ದಿನಕ್ಕೆ ಹೀನಾಯ ಸ್ಥಿತಿಯಲ್ಲಿ ‘ಗೇಮ್ ಚೇಂಜರ್’ ಗಳಿಕೆ; ನಿರ್ಮಾಪಕರಿಗೆ ಆಗೋ ನಷ್ಟವೆಷ್ಟು?
ಶಂಕರ್-ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Jan 13, 2025 | 11:04 AM

Share

‘ಗೇಮ್ ಚೇಂಜರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಲಿದೆ ಎಂದು ತಂಡದವರು ಅಂದುಕೊಂಡಿದ್ದರು. ಆದರೆ, ಅದು ಸುಳ್ಳಾಗಿದೆ. ಮೊದಲ ದಿನ 51 ಕೋಟಿ ರೂಪಾಯಿ ಗಳಿಸಿದ್ದ ಈ ಸಿನಿಮಾ ಆ ಬಳಿಕ ಅರ್ಧದಷ್ಟು ಗಳಿಸಲು ಸಾಧ್ಯವಾಗಿಲ್ಲ. ಇದೇ ರೀತಿ ಮುಂದುವರಿದರೆ ನಿರ್ಮಾಪಕರು ದೊಡ್ಡ ಮಟ್ಟದಲ್ಲಿ ನಷ್ಟು ಅನುಭವಿಸೋದು ಪಕ್ಕಾ ಎನ್ನಲಾಗುತ್ತಿದೆ.

‘ಗೇಮ್ ಚೇಂಜರ್’ ಸಿನಿಮಾದಲ್ಲಿ ರಾಮ್ ಚರಣ್, ಕಿಯಾರಾ ಅಡ್ವಾಣಿ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಶಂಕರ್ ಅವರ ನಿರ್ದೇಶನ ಇದೆ. ಆದರೆ, ಇವರ ನಿರ್ದೇಶನ ಕಳಪೆ ಎನಿಸಿಕೊಂಡಿದೆ. ಸಿನಿಮಾಗೆ ಸಿಕ್ಕ ಹೈಪ್​, ಮುಂಜಾನೆ ಆಯೋಜಿಸಲಾದ ವಿಶೇಷ ಶೋ ಎಲ್ಲಾ ಸೇರಿ ‘ಗೇಮ್ ಚೇಂಜರ್’ ಸಿನಿಮಾ ಮೊದಲ ದಿನ 51 ದಿನ ಕೋಟಿ ರೂಪಾಯಿ ಗಳಿಸಿತ್ತು.

ಶನಿವಾರ (ಜನವರಿ 11) ‘ಗೇಮ್ ಚೇಂಜರ್’ ಗಳಿಕೆ 21.6 ಕೋಟಿ ರೂಪಾಯಿಗೆ ಇಳಿಯಿತು. ಭಾನುವಾರ (ಜನವರಿ 17) ಕೋಟಿ ರೂಪಾಯಿ ಗಳಿಸಲಷ್ಟೇ ಸಿನಿಮಾ ಶಕ್ಯವಾಗಿದೆ. ಈ ಮೂಲಕ 89.6 ಕೋಟಿ ರೂಪಾಯಿ ಗಳಿಕೆ ಆಗಿದೆ. ಹಿಂದಿ ವಿಭಾಗದಿಂದ ಸಿನಿಮಾಗೆ ಸ್ವಲ್ಪ ಉತ್ತಮ ಗಳಿಕೆ ಆಗುತ್ತಿರುವುದರಿಂದ ಚಿತ್ರ ಕೊಂಚ ಉತ್ತಮ ಹಂತದಲ್ಲಿ ಇದೆ. ಭಾನುವಾರ (ಜನವರಿ 12) ‘ಢಾಕು ಮಹರಾಜ್’ ಸಿನಿಮಾ ರಿಲೀಸ್ ಆಗಿರುವುದರಿಂದ ಚಿತ್ರಕ್ಕೆ ಹಿನ್ನಡೆ ಆಗಿದೆ.

ಒಂದೊಮ್ಮೆ ಸಿನಿಮಾ ಒಟ್ಟಾರೆ 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದರೂ ನಿರ್ಮಾಪಕರಿಗೆ ಹೆಚ್ಚುವರಿಯಾಗಿ 250 ಕೋಟಿ ರೂಪಾಯಿ ನಷ್ಟ ಉಂಟಾಗಲಿದೆ. ‘ಗೇಮ್ ಚೇಂಜರ್’ ಚಿತ್ರವನ್ನು ದಿಲ್ ರಾಜು ನಿರ್ದೇಶನ ಮಾಡಿದ್ದರು. ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಾಣ ಮಾಡೋದು ದಿಲ್ ರಾಜು ಅವರ ಶೈಲಿಯಲ್ಲ. ಹೊಸತನವನ್ನು ಪ್ರಯತ್ನಿಸಲು ಹೋಗಿ ಈಗ ಅವರು ಎಡವಿದ್ದಾರೆ.

ಇದನ್ನೂ ಓದಿ: ‘ಗೇಮ್ ಚೇಂಜರ್’ಗೆ ಹೈಕೋರ್ಟ್​ನಿಂದ ಹೊಡೆತ, ಯೂ ಟರ್ನ್ ಹೊಡೆದ ತೆಲಂಗಾಣ ಸರ್ಕಾರ

‘ಗೇಮ್ ಚೇಂಜರ್’ ಚಿತ್ರ ಅದ್ದೂರಿಯಾಗಿ ಮೂಡಿ ಬಂದಿದೆ. ಈ ಸಿನಿಮಾಗೆ ಬರೋಬ್ಬರಿ 280 ದಿನ ಶೂಟ್ ಮಾಡಲಾಗಿದೆ. ಇಷ್ಟೊಂದು ದಿನ ಶೂಟ್ ಮಾಡಿದ್ದರಿಂದ ಸಿನಿಮಾದ ಬಜೆಟ್ ಹೆಚ್ಚಿದೆ. ನಿರ್ಮಾಪಕರು ದೊಡ್ಡ ನಷ್ಟ ಅನುಭವಿಸುವ ಸೂಚನೆ ಸಿಕ್ಕಿದೆ. ‘ಆಚಾರ್ಯ’ ಸಿನಿಮಾ ಸೋಲಿನಲ್ಲಿ ಇದ್ದ ರಾಮ್ ಚರಣ್ ಅವರಿಗೆ ಮತ್ತೊಂದು ಏಟು ಬಿದ್ದಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ