AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೇಮ್ ಚೇಂಜರ್ ಚಿತ್ರದಿಂದ ಆದ ನಷ್ಟ ಎಷ್ಟು?  ವಿವರಿಸಿದ ದಿಲ್ ರಾಜು

Dil Raju: ರಾಮ್‌ ಚರಣ್ ಅಭಿನಯದ ‘ಗೇಮ್ ಚೇಂಜರ್’ ಚಿತ್ರವು ದಿಲ್ ರಾಜು ಅವರಿಗೆ ಭಾರಿ ನಷ್ಟವನ್ನು ತಂದಿದೆ. ಕಳಪೆ ಕಥೆ ಮತ್ತು ನೆಗೆಟಿವ್ ಟಾಕ್ ಇದಕ್ಕೆ ಕಾರಣ. ಆದರೆ, ಅವರೇ ನಿರ್ಮಿಸಿದ ‘ಸಂಕ್ರಾಂತಿಕಿ ವಸ್ತುನ್ನಾಮ್’ ಚಿತ್ರದ ಲಾಭದಿಂದ ಈ ನಷ್ಟವನ್ನು ಭರಿಸಿಕೊಂಡಿದ್ದಾರೆ.

ಗೇಮ್ ಚೇಂಜರ್ ಚಿತ್ರದಿಂದ ಆದ ನಷ್ಟ ಎಷ್ಟು?  ವಿವರಿಸಿದ ದಿಲ್ ರಾಜು
ರಾಮ್ ಚರಣ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Jul 01, 2025 | 10:05 AM

Share

ರಾಮ್ ಚರಣ್, ಕಿಯಾರಾ ಅಡ್ವಾಣಿ ನಟನೆಯ, ಶಂಕರ್ ನಿರ್ದೇಶನದ ‘ಗೇಮ್ ಚೇಂಜರ್’ ಚಿತ್ರವು ಅನುಭವಿಸಿದ ನಷ್ಟ ತುಂಬಾನೇ ದೊಡ್ಡದು. ಚಿತ್ರದ ನಿರ್ಮಾಪಕ ದಿಲ್ ರಾಜು ಅವರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿತು. ಈ ಸಿನಿಮಾ ಮೊದಲು ಘೋಷಣೆ ಆದಾಗ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಈ ಚಿತ್ರಕ್ಕೆ ಎರಡೂವರೆ ವರ್ಷಗಳ ಕಾಲ ವಿವಿಧ ಹಂತಗಳಲ್ಲಿ ಶೂಟ್ ಮಾಡಿದನ್ನು ನೀವು ಗಮನಿಸಿರಬಹುದು. ಆದರೆ, ಈ ಚಿತ್ರದಿಂದ ದೊಡ್ಡ ನಷ್ಟ ಆಗಿದೆ ಎಂದು ದಿಲ್ ರಾಜು ಒಪ್ಪಿಕೊಂಡಿದ್ದಾರೆ.

ದಿಲ್ ರಾಜು ಅವರು ‘ಗೇಮ್ ಚೇಂಜರ್’ ಚಿತ್ರಕ್ಕೆ ಸಾಕಷ್ಟು ಪ್ರಚಾರ ನೀಡಿದರು. ಆದಾಗ್ಯೂ ಸಿನಿಮಾದ ಮೇಕಿಂಗ್ ಹಾಗೂ ಕಳಪೆ ಕಥೆಯ ಕಾರಣಕ್ಕೆ ಗೆಲ್ಲಲಿಲ್ಲ. ನೆಗೆಟಿವ್ ಟಾಕ್ ಚಿತ್ರಕ್ಕೆ ದೊಡ್ಡ ನಷ್ಟವನ್ನು ಉಂಟು ಮಾಡಿತು. ಈ ಚಿತ್ರದಿಂದ ಅವರಿಗೆ 100 ಕೋಟಿ ರೂಪಾಯಿಗೂ ಅಧಿಕ ನಷ್ಟ ಉಂಟಾಗಿದೆ ಎನ್ನಲಾಗಿದೆ.

ದಿಲ್ ರಾಜು ಯಾವಾಗಲೂ ಎಚ್ಚರಿಕೆಯಿಂದ ಸಿನಿಮಾ ಮಾಡಲು ಫೇಮಸ್ ಆದವರು. ಆದರೆ, ಈ ಚಿತ್ರದಿಂದ ಅವರು ನಷ್ಟ ಅನುಭವಿಸಿದರು. ಈ ಚಿತ್ರದ ನೋಡಿದ ತಕ್ಷಣ ಸಿನಿಮಾ ಕೈ ಹಿಡಿಯೋದಿಲ್ಲ ಅನ್ನೋದು ಗೊತ್ತಾಯಿತು. ಹೀಗಾಗಿ, ಮಾನಸಿಕವಾಗಿ ಈ ನಷ್ಟ ಎದುರಿಸಲು ಅವರು ಸಿದ್ಧರಿದ್ದರು.

ಇದನ್ನೂ ಓದಿ
Image
‘ತನ್ನದೇ ಮೂತ್ರ ಕುಡಿಯುವ ವ್ಯಕ್ತಿ, ಪ್ರಚಾರಕ್ಕಾಗಿ ಇಷ್ಟು ಮಾಡಲ್ವಾ?’
Image
‘ಮನೆ ಬಾಡಿಗೆ ಏರಿದಂತೆ..’; ಬಿಗ್ ಬಾಸ್ ಸಂಭಾವನೆ ಬಗ್ಗೆ ಕಿಚ್ಚನ ನೇರ ಮಾತು
Image
‘ಒಳ ಉಡುಪು ಹಾಕಿದ್ದೀನಾ, ಇಲ್ಲವಾ ಎಂಬುದನ್ನು ನೀವು ನೋಡಿದ್ದೀರಾ?’;ಖುಷಿ
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

‘ಗೇಮ್ ಚೇಂಜರ್’ ಸಂಕ್ರಾಂತಿಗೆ ರಿಲೀಸ್ ಆಯಿತು. ವಿಶೇಷ ಎಂದರೆ ದಿಲ್ ರಾಜು ಬ್ಯಾನರ್​ನಲ್ಲೇ ಸಿದ್ಧವಾದ ‘ಸಂಕ್ರಾಂತಿಕಿ ವಸ್ತುನ್ನಾನು’ ಕೂಡ ಅದೇ ಸಮಯದಲ್ಲಿ ಬಿಡುಗಡೆ ಆಯಿತು. ಈ ಚಿತ್ರವನ್ನು ಜನರು ಇಷ್ಟಪಟ್ಟರು. ಸಿನಿಮಾ ಬ್ಲಾಕ್​ಬಸ್ಟರ್ ಹಿಟ್ ಆಯಿತು.

ದಿಲ್ ರಾಜು ಅವರು ‘ಸಂಕ್ರಾಂತಿಕಿ ವಸ್ತುನ್ನಾಮ್’ ಸಿನಿಮಾದಿಂದ ಬಂದ ಲಾಭವನ್ನು ಹಂಚಿಕೆದಾರರಿಗೆ ನೀಡಿದ್ದಾರೆ. ಅವರಿಗೆ ‘ಗೇಮ್ ಚೇಂಜರ್’ ಹಂಚಿಕೆ ಮಾಡಿ ನಷ್ಟ ಆಗಿತ್ತು. ಆ ನಷ್ಟವನ್ನು ದಿಲ್ ರಾಜು ಅವರು ಭರಿಸಿಕೊಟ್ಟರು. ಇದರಿಂದ ದಿಲ್ ರಾಜು ಅವರು ಎಲ್ಲರ ಮನ ಗೆದ್ದರು.

ಇದನ್ನೂ ಓದಿ: 7 ಗಂಟೆ ಇತ್ತು ‘ಗೇಮ್ ಚೇಂಜರ್’ ಸಿನಿಮಾ ಅವಧಿ; ಶಂಕರ್ ಕೆಟ್ಟ ನಿರ್ದೇಶಕ ಎಂದ ಎಡಿಟರ್ 

‘ಗೇಮ್ ಚೇಂಜರ್’ ಸಿನಿಮಾ ರಿಲೀಸ್ ವೇಳೆ ‘ಸಂಕ್ರಾಂತಿಕಿ ವಸ್ತುನ್ನಾಮ್’ ರಿಲೀಸ್ ಮಾಡಲು ರಾಮ್ ಚರಣ್ ಹಾಗೂ ಚಿರಂಜೀವಿ ಓಕೆ ಎಂದರು. ಈ ಕಾರಣಕ್ಕೆ ಅವರಿಗೆ ದಿಲ್ ರಾಜು ಧನ್ಯವಾದ ಹೇಳಿದರು.  ಹೀಗಾಗಿ, ಎಲ್ಲವೂ ಈಗ ಬ್ಯಾಲೆನ್ಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ