AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೇಮ್ ಚೇಂಜರ್ ಚಿತ್ರದಿಂದ ಆದ ನಷ್ಟ ಎಷ್ಟು?  ವಿವರಿಸಿದ ದಿಲ್ ರಾಜು

Dil Raju: ರಾಮ್‌ ಚರಣ್ ಅಭಿನಯದ ‘ಗೇಮ್ ಚೇಂಜರ್’ ಚಿತ್ರವು ದಿಲ್ ರಾಜು ಅವರಿಗೆ ಭಾರಿ ನಷ್ಟವನ್ನು ತಂದಿದೆ. ಕಳಪೆ ಕಥೆ ಮತ್ತು ನೆಗೆಟಿವ್ ಟಾಕ್ ಇದಕ್ಕೆ ಕಾರಣ. ಆದರೆ, ಅವರೇ ನಿರ್ಮಿಸಿದ ‘ಸಂಕ್ರಾಂತಿಕಿ ವಸ್ತುನ್ನಾಮ್’ ಚಿತ್ರದ ಲಾಭದಿಂದ ಈ ನಷ್ಟವನ್ನು ಭರಿಸಿಕೊಂಡಿದ್ದಾರೆ.

ಗೇಮ್ ಚೇಂಜರ್ ಚಿತ್ರದಿಂದ ಆದ ನಷ್ಟ ಎಷ್ಟು?  ವಿವರಿಸಿದ ದಿಲ್ ರಾಜು
ರಾಮ್ ಚರಣ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 01, 2025 | 10:05 AM

Share

ರಾಮ್ ಚರಣ್, ಕಿಯಾರಾ ಅಡ್ವಾಣಿ ನಟನೆಯ, ಶಂಕರ್ ನಿರ್ದೇಶನದ ‘ಗೇಮ್ ಚೇಂಜರ್’ ಚಿತ್ರವು ಅನುಭವಿಸಿದ ನಷ್ಟ ತುಂಬಾನೇ ದೊಡ್ಡದು. ಚಿತ್ರದ ನಿರ್ಮಾಪಕ ದಿಲ್ ರಾಜು ಅವರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿತು. ಈ ಸಿನಿಮಾ ಮೊದಲು ಘೋಷಣೆ ಆದಾಗ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಈ ಚಿತ್ರಕ್ಕೆ ಎರಡೂವರೆ ವರ್ಷಗಳ ಕಾಲ ವಿವಿಧ ಹಂತಗಳಲ್ಲಿ ಶೂಟ್ ಮಾಡಿದನ್ನು ನೀವು ಗಮನಿಸಿರಬಹುದು. ಆದರೆ, ಈ ಚಿತ್ರದಿಂದ ದೊಡ್ಡ ನಷ್ಟ ಆಗಿದೆ ಎಂದು ದಿಲ್ ರಾಜು ಒಪ್ಪಿಕೊಂಡಿದ್ದಾರೆ.

ದಿಲ್ ರಾಜು ಅವರು ‘ಗೇಮ್ ಚೇಂಜರ್’ ಚಿತ್ರಕ್ಕೆ ಸಾಕಷ್ಟು ಪ್ರಚಾರ ನೀಡಿದರು. ಆದಾಗ್ಯೂ ಸಿನಿಮಾದ ಮೇಕಿಂಗ್ ಹಾಗೂ ಕಳಪೆ ಕಥೆಯ ಕಾರಣಕ್ಕೆ ಗೆಲ್ಲಲಿಲ್ಲ. ನೆಗೆಟಿವ್ ಟಾಕ್ ಚಿತ್ರಕ್ಕೆ ದೊಡ್ಡ ನಷ್ಟವನ್ನು ಉಂಟು ಮಾಡಿತು. ಈ ಚಿತ್ರದಿಂದ ಅವರಿಗೆ 100 ಕೋಟಿ ರೂಪಾಯಿಗೂ ಅಧಿಕ ನಷ್ಟ ಉಂಟಾಗಿದೆ ಎನ್ನಲಾಗಿದೆ.

ದಿಲ್ ರಾಜು ಯಾವಾಗಲೂ ಎಚ್ಚರಿಕೆಯಿಂದ ಸಿನಿಮಾ ಮಾಡಲು ಫೇಮಸ್ ಆದವರು. ಆದರೆ, ಈ ಚಿತ್ರದಿಂದ ಅವರು ನಷ್ಟ ಅನುಭವಿಸಿದರು. ಈ ಚಿತ್ರದ ನೋಡಿದ ತಕ್ಷಣ ಸಿನಿಮಾ ಕೈ ಹಿಡಿಯೋದಿಲ್ಲ ಅನ್ನೋದು ಗೊತ್ತಾಯಿತು. ಹೀಗಾಗಿ, ಮಾನಸಿಕವಾಗಿ ಈ ನಷ್ಟ ಎದುರಿಸಲು ಅವರು ಸಿದ್ಧರಿದ್ದರು.

ಇದನ್ನೂ ಓದಿ
Image
‘ತನ್ನದೇ ಮೂತ್ರ ಕುಡಿಯುವ ವ್ಯಕ್ತಿ, ಪ್ರಚಾರಕ್ಕಾಗಿ ಇಷ್ಟು ಮಾಡಲ್ವಾ?’
Image
‘ಮನೆ ಬಾಡಿಗೆ ಏರಿದಂತೆ..’; ಬಿಗ್ ಬಾಸ್ ಸಂಭಾವನೆ ಬಗ್ಗೆ ಕಿಚ್ಚನ ನೇರ ಮಾತು
Image
‘ಒಳ ಉಡುಪು ಹಾಕಿದ್ದೀನಾ, ಇಲ್ಲವಾ ಎಂಬುದನ್ನು ನೀವು ನೋಡಿದ್ದೀರಾ?’;ಖುಷಿ
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

‘ಗೇಮ್ ಚೇಂಜರ್’ ಸಂಕ್ರಾಂತಿಗೆ ರಿಲೀಸ್ ಆಯಿತು. ವಿಶೇಷ ಎಂದರೆ ದಿಲ್ ರಾಜು ಬ್ಯಾನರ್​ನಲ್ಲೇ ಸಿದ್ಧವಾದ ‘ಸಂಕ್ರಾಂತಿಕಿ ವಸ್ತುನ್ನಾನು’ ಕೂಡ ಅದೇ ಸಮಯದಲ್ಲಿ ಬಿಡುಗಡೆ ಆಯಿತು. ಈ ಚಿತ್ರವನ್ನು ಜನರು ಇಷ್ಟಪಟ್ಟರು. ಸಿನಿಮಾ ಬ್ಲಾಕ್​ಬಸ್ಟರ್ ಹಿಟ್ ಆಯಿತು.

ದಿಲ್ ರಾಜು ಅವರು ‘ಸಂಕ್ರಾಂತಿಕಿ ವಸ್ತುನ್ನಾಮ್’ ಸಿನಿಮಾದಿಂದ ಬಂದ ಲಾಭವನ್ನು ಹಂಚಿಕೆದಾರರಿಗೆ ನೀಡಿದ್ದಾರೆ. ಅವರಿಗೆ ‘ಗೇಮ್ ಚೇಂಜರ್’ ಹಂಚಿಕೆ ಮಾಡಿ ನಷ್ಟ ಆಗಿತ್ತು. ಆ ನಷ್ಟವನ್ನು ದಿಲ್ ರಾಜು ಅವರು ಭರಿಸಿಕೊಟ್ಟರು. ಇದರಿಂದ ದಿಲ್ ರಾಜು ಅವರು ಎಲ್ಲರ ಮನ ಗೆದ್ದರು.

ಇದನ್ನೂ ಓದಿ: 7 ಗಂಟೆ ಇತ್ತು ‘ಗೇಮ್ ಚೇಂಜರ್’ ಸಿನಿಮಾ ಅವಧಿ; ಶಂಕರ್ ಕೆಟ್ಟ ನಿರ್ದೇಶಕ ಎಂದ ಎಡಿಟರ್ 

‘ಗೇಮ್ ಚೇಂಜರ್’ ಸಿನಿಮಾ ರಿಲೀಸ್ ವೇಳೆ ‘ಸಂಕ್ರಾಂತಿಕಿ ವಸ್ತುನ್ನಾಮ್’ ರಿಲೀಸ್ ಮಾಡಲು ರಾಮ್ ಚರಣ್ ಹಾಗೂ ಚಿರಂಜೀವಿ ಓಕೆ ಎಂದರು. ಈ ಕಾರಣಕ್ಕೆ ಅವರಿಗೆ ದಿಲ್ ರಾಜು ಧನ್ಯವಾದ ಹೇಳಿದರು.  ಹೀಗಾಗಿ, ಎಲ್ಲವೂ ಈಗ ಬ್ಯಾಲೆನ್ಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು