AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಮೆ ಕೇಳಿ, ರಾಮ್ ಚರಣ್ ಜೊತೆ ಹಿಟ್ ಸಿನಿಮಾ ಮಾಡುವೆ ಎಂದ ನಿರ್ಮಾಪಕ

Game Changer Producer: ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೀನಾಯ ಸೋಲು ಕಂಡಿತು. ಆದರೆ ಸಿನಿಮಾದ ನಿರ್ಮಾಪಕರು ಒಬ್ಬರಾದ ಮೇಲೆ ಒಬ್ಬರಂತೆ ಈ ಬಗ್ಗೆ ಸಂದರ್ಶನಗಳಲ್ಲಿ ಋಣಾತ್ಮಕವಾಗಿ ಮಾತನಾಡುತ್ತಾ ಬರುತ್ತಿದ್ದಾರೆ. ಇದೀಗ ರಾಮ್ ಚರಣ್ ಅಭಿಮಾನಿಗಳು ತಿರುಗಿ ಬಿದ್ದಿದ್ದು, ಕೂಡಲೇ ನಿರ್ಮಾಪಕರು ಕ್ಷಮೆ ಕೇಳಿದ್ದಾರೆ.

ಕ್ಷಮೆ ಕೇಳಿ, ರಾಮ್ ಚರಣ್ ಜೊತೆ ಹಿಟ್ ಸಿನಿಮಾ ಮಾಡುವೆ ಎಂದ ನಿರ್ಮಾಪಕ
Game Changer1
ಮಂಜುನಾಥ ಸಿ.
|

Updated on:Jul 02, 2025 | 12:36 PM

Share

ರಾಮ್ ಚರಣ್ (Ram Charan) ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಫ್ಲಾಪ್ ಆಗಿದ್ದು ಪದೇ ಪದೇ ಚರ್ಚೆಗೆ ಗ್ರಾಸವಾಗುತ್ತಲೇ ಇದೆ. ದಿಲ್ ರಾಜು ಮತ್ತು ಅವರ ಸಹೋದರ ಸಿರೀಶ್ ರೆಡ್ಡಿ ಅವರುಗಳು ಸಿನಿಮಾ ನಿರ್ಮಾಣ ಮಾಡಿದ್ದರು, ಶಂಕರ್ ನಿರ್ದೇಶಿಸಿದ್ದ ಈ ಸಿನಿಮಾ ದೊಡ್ಡ ಫ್ಲಾಪ್ ಆಯ್ತು. ಅದೇ ಸಮಯದಲ್ಲಿ ವೆಂಕಟೇಶ್ ನಟನೆಯ ‘ಸಂಕ್ರಾಂತಿಕಿ ವಸ್ತುನ್ನಾಮ್’ ಸಿನಿಮಾ ಬಿಡುಗಡೆ ಮಾಡಿ ನಷ್ಟವನ್ನು ಸರಿದೂಗಿಸಿಕೊಂಡರು ದಿಲ್ ರಾಜು ಮತ್ತು ಸಿರೀಶ್. ಆದರೆ ‘ಗೇಮ್ ಚೇಂಜರ್’ ಸೋಲಿನ ಬಗ್ಗೆ ದಿಲ್ ರಾಜು ಮತ್ತು ಸಿರೀಶ್ ಪದೆ ಪದೇ ಮಾತನಾಡುತ್ತಲೇ ಇದ್ದಾರೆ.

ಇತ್ತೀಚೆಗಿನ ಸಂದರ್ಶನವೊಂದರಲ್ಲಿ ಮಾತನಾಡಿದ್ದ ನಿರ್ಮಾಪಕ ಸಿರೀಶ್, ‘ಗೇಮ್ ಚೇಂಜರ್ ಸೋತ ಬಳಿಕ ರಾಮ್ ಚರಣ್ ನನಗಾಗಲಿ, ದಿಲ್ ರಾಜುಗಾಗಲಿ ಕರೆ ಮಾಡಿ ಮಾತನಾಡಿಸುವ ಗೋಜಿಗೆ ಸಹ ಹೋಗಿಲ್ಲ’ ಎಂದು ಋಣಾತ್ಮಕವಾಗಿ ಮಾತನಾಡಿದ್ದರು. ಆದರೆ ಇದು ರಾಮ್ ಚರಣ್ ಅಭಿಮಾನಿಗಳನ್ನು ಕೆರಳಿಸಿದ್ದು, ಅಭಿಮಾನಿಗಳು ಬಹಿರಂಗ ಪತ್ರದ ಮೂಲಕ ಸಿನಿಮಾದ ನಿರ್ಮಾಪಕರಿಗೆ ಎಚ್ಚರಿಕೆ ನೀಡಿದ್ದಾರೆ.

ರಾಮ್ ಚರಣ್ ಅಭಿಮಾನಿಗಳ ಎಚ್ಚರಿಕೆ ಬೆನ್ನಲ್ಲೆ ನಿರ್ಮಾಪಕ ಸಿರೀಶ್ ರೆಡ್ಡಿ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆ ಕೇಳಿದ್ದಾರೆ. ‘ನಾನು ಸಂದರ್ಶನದಲ್ಲಿ ಆಡಿದ ಮಾತುಗಳು ಸಾಮಾಜಿಕ ಜಾಲತಾಣದ ಮೂಲಕ ಅಪಾರ್ಥವನ್ನು ಪಡೆದುಕೊಂಡಿವೆ. ಅದರಿಂದ ಕೆಲ ಮೆಗಾ ಅಭಿಮಾನಿಗಳು ಬೇಸರಗೊಂಡಿದ್ದಾರೆ ಎಂಬುದು ತಿಳಿದು ಬಂದಿದೆ. ‘ಗೇಮ್ ಚೇಂಜರ್’ ಸಿನಿಮಾಕ್ಕಾಗಿ ರಾಮ್ ಚರಣ್ ತಮ್ಮ ಪೂರ್ತಿ ಸಮಯ ಮತ್ತು ಸಹಕಾರವನ್ನು ನೀಡಿದ್ದಾರೆ. ನಮಗೆ ಮೆಗಾಸ್ಟಾರ್ ಚಿರಂಜೀವಿ ಕುಟುಂಬದ ಜೊತೆಗೆ ವರ್ಷಗಳ ನಂಟಿದೆ. ನಾವು ಚಿರಂಜೀವಿ, ರಾಮ್ ಚರಣ್ ಅಥವಾ ಯಾವುದೇ ಮೆಗಾ ಹೀರೋಗಳ ಬಗ್ಗೆ ಅಗೌರವವಾಗಿ ಮಾತನಾಡುವುದಿಲ್ಲ. ಒಂದೊಮ್ಮೆ ನನ್ನ ಮಾತಿನಿಂದ ಯಾರಿಗಾದರು ನೋವಾಗಿದ್ದರೆ ಕ್ಷಮೆ ಇರಲಿ’ ಎಂದಿದ್ದಾರೆ.

ಇದನ್ನೂ ಓದಿ:ನೀನು ಸೋತೆ, ಅಲ್ಲು ಅರ್ಜುನ್ ಗೆದ್ದ: ಸ್ಟಾರ್ ಹೀರೋಗೆ ನೇರವಾಗಿ ಹೇಳಿದ ದಿಲ್ ರಾಜು

ಇನ್ನು ನಿರ್ಮಾಪಕ ದಿಲ್ ರಾಜು, ತಮ್ಮ ನಿರ್ಮಾಣದ ‘ತಮ್ಮುಡು’ ಸಿನಿಮಾ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿ, ‘ರಾಮ್ ಚರಣ್ ಅವರಿಗೆ ಒಂದು ಹಿಟ್ ಸಿನಿಮಾ ಕೊಡಲಿಲ್ಲ ಎಂಬ ಬೇಸರ ನನಗೆ ಇದೆ. ನಾವು ಖಂಡಿತ ರಾಮ್ ಚರಣ್ ಜೊತೆಗೆ ಒಂದು ಸೂಪರ್ ಹಿಟ್ ಸಿನಿಮಾ ಕೊಡುತ್ತೇವೆ. ಆ ಬಗ್ಗೆ ಚರ್ಚೆಗಳು ಈಗಾಗಲೇ ಜಾರಿಯಲ್ಲಿದೆ. ಖಂಡಿತ ನಾವು ರಾಮ್ ಚರಣ್ ಅವರಿಗೆ ಹಿಟ್ ಸಿನಿಮಾ ಕೊಡುತ್ತೇವೆ’ ಎಂದಿದ್ದಾರೆ.

‘ಗೇಮ್ ಚೇಂಜರ್’ ಸಿನಿಮಾವನ್ನು ದಿಲ್ ರಾಜು ಮತ್ತು ಸಿರೀಶ್ ನಿರ್ಮಾಣ ಮಾಡಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಆ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇತ್ತು, ಪವನ್ ಕಲ್ಯಾಣ್, ಸಿನಿಮಾದ ಪ್ರಚಾರಕ್ಕೆ ಆಗಮಿಸಿದ್ದರು. ಆದರೆ ಸಿನಿಮಾ ಫ್ಲಾಪ್ ಆಯ್ತು. ನಿರ್ಮಾಪಕರು ಪರೋಕ್ಷವಾಗಿ ರಾಮ್ ಚರಣ್ ವಿರುದ್ಧ ಮಾತನಾಡಲು ಆರಂಭಿಸಿದರು. ಈಗ ಅಭಿಮಾನಿಗಳು ತಿರುಗಿ ಬಿದ್ದಿದ್ದರಿಂದ ಕ್ಷಮೆ ಕೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:34 pm, Wed, 2 July 25

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ