AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಜನ್ಮ ದಿನ: ಗಂಧದಗುಡಿ ಹೊಸ ಪೋಸ್ಟರ್​ ರಿಲೀಸ್​

ಪುನೀತ್​ ರಾಜಕುಮಾರ್​ ಅವರ ಕನಸಿನ ಸಾಕ್ಷ್ಯ ಚಿತ್ರ  ಗಂಧದಗುಡಿಯ ಹೊಸ ಪೋಸ್ಟರ್​ ಬಿಡುಗಡೆಯಾಗಿದೆ. ಪುನೀತ್​ ರಾಜಕುಮಾರ್​ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಪಿಆರ್​ಕೆ ಪ್ರೊಡಕ್ಷನ್​ ಹೊಸ ಪೋಸ್ಟರ್​ ರಿಲೀಸ್​ ಮಾಡಿದೆ.

ಪುನೀತ್​ ಜನ್ಮ ದಿನ: ಗಂಧದಗುಡಿ ಹೊಸ ಪೋಸ್ಟರ್​ ರಿಲೀಸ್​
ಗಂಧದಗುಡಿ ಪೋಸ್ಟರ್​
TV9 Web
| Edited By: |

Updated on:Mar 17, 2022 | 12:50 PM

Share

ಪುನೀತ್​ ರಾಜಕುಮಾರ್ (Puneeth Rajkumar) ​ ಅವರ ಕನಸಿನ ಸಾಕ್ಷ್ಯ ಚಿತ್ರ  ಗಂಧದಗುಡಿಯ (Gandhada Gudi) ಹೊಸ ಪೋಸ್ಟರ್​ ಬಿಡುಗಡೆಯಾಗಿದೆ. ಪುನೀತ್​ ರಾಜಕುಮಾರ್​ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಪಿಆರ್​ಕೆ ಪ್ರೊಡಕ್ಷನ್​ (PRK Production) ಹೊಸ ಪೋಸ್ಟರ್​ ರಿಲೀಸ್​ ಮಾಡಿದೆ. ಪುನೀತ್​ ಕರ್ನಾಟಕದ ಅರಣ್ಯ ಮತ್ತು ವನ್ಯಜೀವಿಗಳ ಕುರಿತು ಡಾಕ್ಯುಮೆಂಟರಿ ಸಿದ್ಧಪಡಿಸಿದ್ದರು. ಅದಕ್ಕೆ ‘ಗಂಧದ ಗುಡಿ’ ಎಂದು ಶೀರ್ಷಿಕೆ ಇಟ್ಟಿದ್ದರು. ಡಿಸೆಂಬರ್​ನಲ್ಲಿ ಗಂಧದಗುಡಿಯ ಟೈಟಲ್​ ಟೀಸರ್​ ಬಿಡುಗಡೆಯಾಗಿತ್ತು. ಕರುನಾಡಿನ ಪ್ರಕೃತಿ ಸೌಂದರ್ಯವನ್ನು ಮನಮೋಹಕವಾಗಿ ಸೆರೆ ಹಿಡಿದಿರುವ ಈ ಡಾಕ್ಯುಮೆಂಟರಿ ಇದೇ ವರ್ಷ ಥಿಯೇಟರ್​ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ನವೆಂಬರ್​ 1 ಕನ್ನಡ ರಾಜ್ಯೋತ್ಸವದಂದು ಆ ಟೀಸರ್ ರಿಲೀಸ್​ ಮಾಡಬೇಕು ಎಂದು ಪುನೀತ್​ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಈ ಕಾರಣಕ್ಕೆ ಆ ಟೀಸರ್​ ರಿಲೀಸ್​ ಆಗಿರಲಿಲ್ಲ. ಡಿ. 6ರಂದು ಟೀಸರ್​​ ಬಿಡುಗಡೆ ಮಾಡಲಾಗಿತ್ತು.

ಜೇಮ್ಸ್​ ರಿಲೀಸ್​  ಇನ್ನು ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್​ ಇಂದು ಬಿಡುಗಡೆಯಾಗಿದೆ. ಅಭಿಮಾನಿಗಳ ಆರಾಧ್ಯದೈವ ಪುನೀತ್​ ನಟನೆ ಕಂಡು ನೋಡುಗರು ಪುಳಕಿತರಾಗಿದ್ದಾರೆ. ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಚಿತ್ರ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮರೆಯಾದ ನೆಚ್ಚಿನ ನಟನನ್ನು ಮತ್ತೆ ತೆರೆಯ ಮೇಲೆ ನೋಡಿ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ.  ಗೆಳೆತನದ ಕಥೆ ಹೇಳುವ ಪವರ್​ಫುಲ್​ ಶೋ ನೋಡಿ ಅಭಿಮಾನಿಗಳು ಮತ್ತೊಮ್ಮೆ ಕರ್ನಾಟಕದ ರಾಜರತ್ನನನ್ನು ಕಣ್ತುಂಬಿಕೊಂಡಿದ್ದಾರೆ.

ಇದನ್ನೂ ಓದಿ:

Puneeth Rajkumar: ಪುನೀತ್ ಜತೆಗೆ ಹುಟ್ಟುಹಬ್ಬ ಆಚರಿಸುತ್ತಿದ್ದ ಕ್ಷಣಗಳನ್ನು ನೆನೆದ ಶಿವಣ್ಣ

Published On - 12:47 pm, Thu, 17 March 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?