AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಜನ್ಮ ದಿನ: ಗಂಧದಗುಡಿ ಹೊಸ ಪೋಸ್ಟರ್​ ರಿಲೀಸ್​

ಪುನೀತ್​ ರಾಜಕುಮಾರ್​ ಅವರ ಕನಸಿನ ಸಾಕ್ಷ್ಯ ಚಿತ್ರ  ಗಂಧದಗುಡಿಯ ಹೊಸ ಪೋಸ್ಟರ್​ ಬಿಡುಗಡೆಯಾಗಿದೆ. ಪುನೀತ್​ ರಾಜಕುಮಾರ್​ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಪಿಆರ್​ಕೆ ಪ್ರೊಡಕ್ಷನ್​ ಹೊಸ ಪೋಸ್ಟರ್​ ರಿಲೀಸ್​ ಮಾಡಿದೆ.

ಪುನೀತ್​ ಜನ್ಮ ದಿನ: ಗಂಧದಗುಡಿ ಹೊಸ ಪೋಸ್ಟರ್​ ರಿಲೀಸ್​
ಗಂಧದಗುಡಿ ಪೋಸ್ಟರ್​
TV9 Web
| Edited By: |

Updated on:Mar 17, 2022 | 12:50 PM

Share

ಪುನೀತ್​ ರಾಜಕುಮಾರ್ (Puneeth Rajkumar) ​ ಅವರ ಕನಸಿನ ಸಾಕ್ಷ್ಯ ಚಿತ್ರ  ಗಂಧದಗುಡಿಯ (Gandhada Gudi) ಹೊಸ ಪೋಸ್ಟರ್​ ಬಿಡುಗಡೆಯಾಗಿದೆ. ಪುನೀತ್​ ರಾಜಕುಮಾರ್​ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಪಿಆರ್​ಕೆ ಪ್ರೊಡಕ್ಷನ್​ (PRK Production) ಹೊಸ ಪೋಸ್ಟರ್​ ರಿಲೀಸ್​ ಮಾಡಿದೆ. ಪುನೀತ್​ ಕರ್ನಾಟಕದ ಅರಣ್ಯ ಮತ್ತು ವನ್ಯಜೀವಿಗಳ ಕುರಿತು ಡಾಕ್ಯುಮೆಂಟರಿ ಸಿದ್ಧಪಡಿಸಿದ್ದರು. ಅದಕ್ಕೆ ‘ಗಂಧದ ಗುಡಿ’ ಎಂದು ಶೀರ್ಷಿಕೆ ಇಟ್ಟಿದ್ದರು. ಡಿಸೆಂಬರ್​ನಲ್ಲಿ ಗಂಧದಗುಡಿಯ ಟೈಟಲ್​ ಟೀಸರ್​ ಬಿಡುಗಡೆಯಾಗಿತ್ತು. ಕರುನಾಡಿನ ಪ್ರಕೃತಿ ಸೌಂದರ್ಯವನ್ನು ಮನಮೋಹಕವಾಗಿ ಸೆರೆ ಹಿಡಿದಿರುವ ಈ ಡಾಕ್ಯುಮೆಂಟರಿ ಇದೇ ವರ್ಷ ಥಿಯೇಟರ್​ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ನವೆಂಬರ್​ 1 ಕನ್ನಡ ರಾಜ್ಯೋತ್ಸವದಂದು ಆ ಟೀಸರ್ ರಿಲೀಸ್​ ಮಾಡಬೇಕು ಎಂದು ಪುನೀತ್​ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಈ ಕಾರಣಕ್ಕೆ ಆ ಟೀಸರ್​ ರಿಲೀಸ್​ ಆಗಿರಲಿಲ್ಲ. ಡಿ. 6ರಂದು ಟೀಸರ್​​ ಬಿಡುಗಡೆ ಮಾಡಲಾಗಿತ್ತು.

ಜೇಮ್ಸ್​ ರಿಲೀಸ್​  ಇನ್ನು ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್​ ಇಂದು ಬಿಡುಗಡೆಯಾಗಿದೆ. ಅಭಿಮಾನಿಗಳ ಆರಾಧ್ಯದೈವ ಪುನೀತ್​ ನಟನೆ ಕಂಡು ನೋಡುಗರು ಪುಳಕಿತರಾಗಿದ್ದಾರೆ. ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಚಿತ್ರ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮರೆಯಾದ ನೆಚ್ಚಿನ ನಟನನ್ನು ಮತ್ತೆ ತೆರೆಯ ಮೇಲೆ ನೋಡಿ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ.  ಗೆಳೆತನದ ಕಥೆ ಹೇಳುವ ಪವರ್​ಫುಲ್​ ಶೋ ನೋಡಿ ಅಭಿಮಾನಿಗಳು ಮತ್ತೊಮ್ಮೆ ಕರ್ನಾಟಕದ ರಾಜರತ್ನನನ್ನು ಕಣ್ತುಂಬಿಕೊಂಡಿದ್ದಾರೆ.

ಇದನ್ನೂ ಓದಿ:

Puneeth Rajkumar: ಪುನೀತ್ ಜತೆಗೆ ಹುಟ್ಟುಹಬ್ಬ ಆಚರಿಸುತ್ತಿದ್ದ ಕ್ಷಣಗಳನ್ನು ನೆನೆದ ಶಿವಣ್ಣ

Published On - 12:47 pm, Thu, 17 March 22

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು