AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಜನ್ಮ ದಿನ: ಗಂಧದಗುಡಿ ಹೊಸ ಪೋಸ್ಟರ್​ ರಿಲೀಸ್​

ಪುನೀತ್​ ರಾಜಕುಮಾರ್​ ಅವರ ಕನಸಿನ ಸಾಕ್ಷ್ಯ ಚಿತ್ರ  ಗಂಧದಗುಡಿಯ ಹೊಸ ಪೋಸ್ಟರ್​ ಬಿಡುಗಡೆಯಾಗಿದೆ. ಪುನೀತ್​ ರಾಜಕುಮಾರ್​ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಪಿಆರ್​ಕೆ ಪ್ರೊಡಕ್ಷನ್​ ಹೊಸ ಪೋಸ್ಟರ್​ ರಿಲೀಸ್​ ಮಾಡಿದೆ.

ಪುನೀತ್​ ಜನ್ಮ ದಿನ: ಗಂಧದಗುಡಿ ಹೊಸ ಪೋಸ್ಟರ್​ ರಿಲೀಸ್​
ಗಂಧದಗುಡಿ ಪೋಸ್ಟರ್​
TV9 Web
| Edited By: |

Updated on:Mar 17, 2022 | 12:50 PM

Share

ಪುನೀತ್​ ರಾಜಕುಮಾರ್ (Puneeth Rajkumar) ​ ಅವರ ಕನಸಿನ ಸಾಕ್ಷ್ಯ ಚಿತ್ರ  ಗಂಧದಗುಡಿಯ (Gandhada Gudi) ಹೊಸ ಪೋಸ್ಟರ್​ ಬಿಡುಗಡೆಯಾಗಿದೆ. ಪುನೀತ್​ ರಾಜಕುಮಾರ್​ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಪಿಆರ್​ಕೆ ಪ್ರೊಡಕ್ಷನ್​ (PRK Production) ಹೊಸ ಪೋಸ್ಟರ್​ ರಿಲೀಸ್​ ಮಾಡಿದೆ. ಪುನೀತ್​ ಕರ್ನಾಟಕದ ಅರಣ್ಯ ಮತ್ತು ವನ್ಯಜೀವಿಗಳ ಕುರಿತು ಡಾಕ್ಯುಮೆಂಟರಿ ಸಿದ್ಧಪಡಿಸಿದ್ದರು. ಅದಕ್ಕೆ ‘ಗಂಧದ ಗುಡಿ’ ಎಂದು ಶೀರ್ಷಿಕೆ ಇಟ್ಟಿದ್ದರು. ಡಿಸೆಂಬರ್​ನಲ್ಲಿ ಗಂಧದಗುಡಿಯ ಟೈಟಲ್​ ಟೀಸರ್​ ಬಿಡುಗಡೆಯಾಗಿತ್ತು. ಕರುನಾಡಿನ ಪ್ರಕೃತಿ ಸೌಂದರ್ಯವನ್ನು ಮನಮೋಹಕವಾಗಿ ಸೆರೆ ಹಿಡಿದಿರುವ ಈ ಡಾಕ್ಯುಮೆಂಟರಿ ಇದೇ ವರ್ಷ ಥಿಯೇಟರ್​ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ನವೆಂಬರ್​ 1 ಕನ್ನಡ ರಾಜ್ಯೋತ್ಸವದಂದು ಆ ಟೀಸರ್ ರಿಲೀಸ್​ ಮಾಡಬೇಕು ಎಂದು ಪುನೀತ್​ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಈ ಕಾರಣಕ್ಕೆ ಆ ಟೀಸರ್​ ರಿಲೀಸ್​ ಆಗಿರಲಿಲ್ಲ. ಡಿ. 6ರಂದು ಟೀಸರ್​​ ಬಿಡುಗಡೆ ಮಾಡಲಾಗಿತ್ತು.

ಜೇಮ್ಸ್​ ರಿಲೀಸ್​  ಇನ್ನು ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್​ ಇಂದು ಬಿಡುಗಡೆಯಾಗಿದೆ. ಅಭಿಮಾನಿಗಳ ಆರಾಧ್ಯದೈವ ಪುನೀತ್​ ನಟನೆ ಕಂಡು ನೋಡುಗರು ಪುಳಕಿತರಾಗಿದ್ದಾರೆ. ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಚಿತ್ರ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮರೆಯಾದ ನೆಚ್ಚಿನ ನಟನನ್ನು ಮತ್ತೆ ತೆರೆಯ ಮೇಲೆ ನೋಡಿ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ.  ಗೆಳೆತನದ ಕಥೆ ಹೇಳುವ ಪವರ್​ಫುಲ್​ ಶೋ ನೋಡಿ ಅಭಿಮಾನಿಗಳು ಮತ್ತೊಮ್ಮೆ ಕರ್ನಾಟಕದ ರಾಜರತ್ನನನ್ನು ಕಣ್ತುಂಬಿಕೊಂಡಿದ್ದಾರೆ.

ಇದನ್ನೂ ಓದಿ:

Puneeth Rajkumar: ಪುನೀತ್ ಜತೆಗೆ ಹುಟ್ಟುಹಬ್ಬ ಆಚರಿಸುತ್ತಿದ್ದ ಕ್ಷಣಗಳನ್ನು ನೆನೆದ ಶಿವಣ್ಣ

Published On - 12:47 pm, Thu, 17 March 22

Follow Us
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!