AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಚಿತ್ರದಲ್ಲಿ ನಟಿ ಸಮಂತಾಗೆ ಐಟಂ ಡ್ಯಾನ್ಸ್​ ಹೇಳಿಕೊಡಲು ಬಂದ​ ಗಣೇಶ್​ ಆಚಾರ್ಯ

Samantha: ಸಮಂತಾಗೆ ಡ್ಯಾನ್ಸ್​ ಹೇಳಿಕೊಡಲು ಗಣೇಶ್​ ಆಚಾರ್ಯ ಅವರು ಹೈದರಾಬಾದ್​ಗೆ ಬಂದಿದ್ದು, ಈಗಾಗಲೇ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಶೂಟಿಂಗ್ ಆರಂಭಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಈ ಹಾಡಿಗಾಗಿ ಸಮಂತಾ ದೊಡ್ಡ ಸಂಭಾವನೆ ಪಡೆಯುತ್ತಿದ್ದಾರೆ.

‘ಪುಷ್ಪ’ ಚಿತ್ರದಲ್ಲಿ ನಟಿ ಸಮಂತಾಗೆ ಐಟಂ ಡ್ಯಾನ್ಸ್​ ಹೇಳಿಕೊಡಲು ಬಂದ​ ಗಣೇಶ್​ ಆಚಾರ್ಯ
ಸಮಂತಾ, ಗಣೇಶ್ ಆಚಾರ್ಯ
TV9 Web
| Edited By: |

Updated on: Nov 30, 2021 | 9:37 AM

Share

ಅಲ್ಲು ಅರ್ಜುನ್​ (Allu Arjun) ನಟನೆಯ ‘ಪುಷ್ಪ’ (Pushpa Movie) ಸಿನಿಮಾದಲ್ಲಿ ನಟಿ ಸಮಂತಾ (Samantha) ಅವರು ಒಂದು ಐಟಂ ಡ್ಯಾನ್ಸ್​ ಮಾಡಲು ಒಪ್ಪಿಕೊಂಡಿದ್ದಾರೆ. ಈಗಾಗಲೇ ಅವರು ಶೂಟಿಂಗ್​ ಕೂಡ ಶುರು ಮಾಡಿದ್ದಾರೆ. ಈ ನಡುವೆ ಒಂದು ಸ್ಪೆಷಲ್​​ ನ್ಯೂಸ್​ ಕೇಳಿಬಂದಿದೆ. ಸಮಂತಾ ಹೆಜ್ಜೆ ಹಾಕಲಿರುವ ಐಟಂ ಸಾಂಗ್​ಗೆ ನೃತ್ಯ ನಿರ್ದೇಶನ ಮಾಡಲು ಬಾಲಿವುಡ್​ನ ಖ್ಯಾತ ಕೋರಿಯೋಗ್ರಾಫರ್​ ಗಣೇಶ್​ ಆಚಾರ್ಯ ಅವರನ್ನು ಕರೆತರಲಾಗಿದೆ. ಗಣೇಶ್​ ಆಚಾರ್ಯ (Ganesh Acharya) ಅವರು ಹೈದರಾಬಾದ್​ಗೆ ಬಂದಿದ್ದು, ಈಗಾಗಲೇ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಶೂಟಿಂಗ್ ಆರಂಭಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಆ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ನಿರ್ದೇಶಕ ಸುಕುಮಾರ್​ ಅವರು ಈ ಐಟಂ ಸಾಂಗ್​ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ (Rashmika Mandanna) ನಾಯಕಿ.

ಸಮಂತಾ ಅವರು ವಿಚ್ಛೇದನ ಪಡೆದ ಬಳಿಕ ಮತ್ತೆ ಸಿನಿಮಾ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿರುವ ಅವರು ಸಿನಿಮಾಗಳ ಆಯ್ಕೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ಐಟಂ ಸಾಂಗ್​ನಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಸಂಭಾವನೆ ವಿಚಾರದ ಬಗ್ಗೆ ಚಿತ್ರತಂಡದಿಂದಾಗಲೀ ಸಮಂತಾ ಕಡೆಯಿಂದಾಗಿ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಅವರು ಪಡೆಯುತ್ತಾರೆ ಎನ್ನಲಾದ ಸಂಭಾವನೆ ಮೊತ್ತ ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ. ಈ ಐಟಂ ಸಾಂಗ್​ನಲ್ಲಿ ನಟಿಸಲು ಸಮಂತಾ ಬರೋಬ್ಬರಿ 1.5 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಸುದ್ದಿ ಹರಡಿದೆ.

ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಚಿತ್ರಕ್ಕೆ ಖ್ಯಾತ ನಿರ್ದೇಶಕ ಸುಕುಮಾರ್​ ಅವರು ನಿರ್ದೇಶನ ಮಾಡಿದ್ದಾರೆ. ಅವರ ಬಹುತೇಕ ಸಿನಿಮಾಗಳಲ್ಲಿ ಒಂದು ಐಟಂ ಸಾಂಗ್​ ಇರುತ್ತದೆ. ಅದೇ ರೀತಿ ‘ಪುಷ್ಪ’ ಸಿನಿಮಾದಲ್ಲೂ ಒಂದು ಭರ್ಜರಿ ಐಟಂ ಸಾಂಗ್​ ಇಟ್ಟಿದ್ದಾರಂತೆ. ಈ ಹಾಡಿನಲ್ಲಿ ನರ್ತಿಸಲು ಈ ಮೊದಲು ಪೂಜಾ ಹೆಗ್ಡೆ ಮತ್ತು ಸನ್ನಿ ಲಿಯೋನ್​ ಅವರಿಗೆ ಆಫರ್​ ನೀಡಲಾಗಿತ್ತು. ಆದರೆ ಆ ನಟಿಯರು ಒಪ್ಪಿಕೊಂಡಿಲ್ಲ. ಅಂತಿಮವಾಗಿ ಸಮಂತಾ ಅವರು ಒಪ್ಪಿಕೊಂಡರು.

ಇದನ್ನೂ ಓದಿ:

ಗಂಡು-ಹೆಣ್ಣು ಇಬ್ಬರ ಜತೆಗೂ ಲೈಂಗಿಕ ಆಸಕ್ತಿ ಇರುವ ಮಹಿಳೆ ಪಾತ್ರದಲ್ಲಿ ಸಮಂತಾ; ಮತ್ತೆ ವಿವಾದಕ್ಕೆ ನಾಂದಿ?

ಮಾಜಿ ಪತಿ ಬರ್ತ್​ಡೇ ಕಾರಣಕ್ಕೆ ಟೀಕೆ ಎದುರಿಸಿ, ಮರುದಿನವೇ ನಾಯಿ ಜನ್ಮದಿನ ಆಚರಿಸಿದ ಸಮಂತಾ

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?