AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ್ ಹೊಸ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಶೀರ್ಷಿಕೆ ಫೈನಲ್; ಬರ್ತ್​ಡೇಗೂ ಮೊದಲು ಸ್ಪೆಷಲ್ ಗಿಫ್ಟ್

ಗಣೇಶ್ ಅವರ ಮುಂದಿನ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂದು ಟೈಟಲ್ ಕೊಡಲಾಗಿದೆ. ಇದು ಗಣೇಶ್ ಹೀರೋ ಆಗಿ ನಟಿಸುತ್ತಿರುವ 41ನೇ ಚಿತ್ರ ಅನ್ನೋದು ವಿಶೇಷ.

ಗಣೇಶ್ ಹೊಸ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಶೀರ್ಷಿಕೆ ಫೈನಲ್; ಬರ್ತ್​ಡೇಗೂ ಮೊದಲು ಸ್ಪೆಷಲ್ ಗಿಫ್ಟ್
ಗಣೇಶ್-ಮಾಳವಿಕಾ
ರಾಜೇಶ್ ದುಗ್ಗುಮನೆ
|

Updated on:Jul 01, 2023 | 2:16 PM

Share

ನಟ ಗೋಲ್ಡನ್ ಸ್ಟಾರ್ ಗಣೇಶ್ (Ganesh) ಅವರು ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಜುಲೈ 2ರಂದು ಅವರ ಜನ್ಮದಿನ. ಅವರ ಬರ್ತ್​ಡೇಗೂ ಮೊದಲು ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್​ ಪೋಸ್ಟರ್ ರಿಲೀಸ್ ಆಗಿದೆ. ‘ಕೃಷ್ಣಂ ಪ್ರಣಯ ಸಖಿ’ (Krishnam Pranaya Sakhi Movie) ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಬರ್ತ್​ಡೇ ಸಂದರ್ಭದಲ್ಲಿ ವಿಶೇಷ ಗಿಫ್ಟ್ ಸಿಕ್ಕಿರೋದು ಫ್ಯಾನ್ಸ್ ಖುಷಿ ಹೆಚ್ಚಿಸಿದೆ.

ಗಣೇಶ್ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಈಗಾಗಲೇ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ಮುಂದಿನ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂದು ಟೈಟಲ್ ಕೊಡಲಾಗಿದೆ. ಇದು ಗಣೇಶ್ ಹೀರೋ ಆಗಿ ನಟಿಸುತ್ತಿರುವ 41ನೇ ಚಿತ್ರ ಅನ್ನೋದು ವಿಶೇಷ.

ಕನ್ನಡದಲ್ಲಿ ಹಲವು ಜನಪ್ರಿಯ ಚಿತ್ರಗಳನ್ನು ಶ್ರೀನಿವಾಸರಾಜು ನಿರ್ದೇಶಿಸಿದ್ದಾರೆ. ಅವರು ಈಗ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ. ಗಣೇಶ್ ಸಿನಿಮಾಗಳು ಫ್ಯಾಮಿಲಿ ಎಂಟರ್​​ಟೇನ್​ಮೆಂಟ್ ಅಂಶ ಹೊಂದಿರುತ್ತದೆ. ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ಕೂಡ ಇದೇ ರೀತಿಯ ಅಂಶಗಳನ್ನು ಹೊಂದಿರಲಿದೆ. ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಶೂಟಿಂಗ್ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ರಾಜಸ್ಥಾನ, ಮೈಸೂರು ಹಾಗೂ ಯುರೋಪ್​ನಲ್ಲಿ ಶೂಟಿಂಗ್ ಮಾಡಲು ಪ್ಲಾನ್ ನಡೆಸಲಾಗಿದೆ.

ಇದನ್ನೂ ಓದಿ: ಕಪಿಲ್ ಶರ್ಮಾ ಭೇಟಿ ಮಾಡಿದ ಗಣೇಶ್; ಜನಪ್ರಿಯ ಶೋಗೆ ಗೋಲ್ಡನ್ ಸ್ಟಾರ್ ಅತಿಥಿ

ತ್ರಿಶೂಲ್ ಎಂಟರ್​ಟೇನ್ಮೆಂಟ್ ಲಾಂಛನದ ಅಡಿಯಲ್ಲಿ ಪ್ರಶಾಂತ್ ಜಿ. ರುದ್ರಪ್ಪ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ 3ನೇ ಸಿನಿಮಾ. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು. ಗಣೇಶ್​​ಗೆ ನಾಯಕಿಯಾಗಿ ಮಾಳವಿಕಾ ನಾಯರ್ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶಿವಧ್ವಜ್ ಶೆಟ್ಟಿ, ಶ್ರೀನಿವಾಸಮೂರ್ತಿ, ಬೆನಕ ಗಿರಿ ಮೊದಲಾದವರು ‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:11 pm, Sat, 1 July 23

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ