AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ್ ಹೊಸ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಶೀರ್ಷಿಕೆ ಫೈನಲ್; ಬರ್ತ್​ಡೇಗೂ ಮೊದಲು ಸ್ಪೆಷಲ್ ಗಿಫ್ಟ್

ಗಣೇಶ್ ಅವರ ಮುಂದಿನ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂದು ಟೈಟಲ್ ಕೊಡಲಾಗಿದೆ. ಇದು ಗಣೇಶ್ ಹೀರೋ ಆಗಿ ನಟಿಸುತ್ತಿರುವ 41ನೇ ಚಿತ್ರ ಅನ್ನೋದು ವಿಶೇಷ.

ಗಣೇಶ್ ಹೊಸ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಶೀರ್ಷಿಕೆ ಫೈನಲ್; ಬರ್ತ್​ಡೇಗೂ ಮೊದಲು ಸ್ಪೆಷಲ್ ಗಿಫ್ಟ್
ಗಣೇಶ್-ಮಾಳವಿಕಾ
ರಾಜೇಶ್ ದುಗ್ಗುಮನೆ
|

Updated on:Jul 01, 2023 | 2:16 PM

Share

ನಟ ಗೋಲ್ಡನ್ ಸ್ಟಾರ್ ಗಣೇಶ್ (Ganesh) ಅವರು ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಜುಲೈ 2ರಂದು ಅವರ ಜನ್ಮದಿನ. ಅವರ ಬರ್ತ್​ಡೇಗೂ ಮೊದಲು ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್​ ಪೋಸ್ಟರ್ ರಿಲೀಸ್ ಆಗಿದೆ. ‘ಕೃಷ್ಣಂ ಪ್ರಣಯ ಸಖಿ’ (Krishnam Pranaya Sakhi Movie) ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಬರ್ತ್​ಡೇ ಸಂದರ್ಭದಲ್ಲಿ ವಿಶೇಷ ಗಿಫ್ಟ್ ಸಿಕ್ಕಿರೋದು ಫ್ಯಾನ್ಸ್ ಖುಷಿ ಹೆಚ್ಚಿಸಿದೆ.

ಗಣೇಶ್ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಈಗಾಗಲೇ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ಮುಂದಿನ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂದು ಟೈಟಲ್ ಕೊಡಲಾಗಿದೆ. ಇದು ಗಣೇಶ್ ಹೀರೋ ಆಗಿ ನಟಿಸುತ್ತಿರುವ 41ನೇ ಚಿತ್ರ ಅನ್ನೋದು ವಿಶೇಷ.

ಕನ್ನಡದಲ್ಲಿ ಹಲವು ಜನಪ್ರಿಯ ಚಿತ್ರಗಳನ್ನು ಶ್ರೀನಿವಾಸರಾಜು ನಿರ್ದೇಶಿಸಿದ್ದಾರೆ. ಅವರು ಈಗ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ. ಗಣೇಶ್ ಸಿನಿಮಾಗಳು ಫ್ಯಾಮಿಲಿ ಎಂಟರ್​​ಟೇನ್​ಮೆಂಟ್ ಅಂಶ ಹೊಂದಿರುತ್ತದೆ. ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ಕೂಡ ಇದೇ ರೀತಿಯ ಅಂಶಗಳನ್ನು ಹೊಂದಿರಲಿದೆ. ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಶೂಟಿಂಗ್ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ರಾಜಸ್ಥಾನ, ಮೈಸೂರು ಹಾಗೂ ಯುರೋಪ್​ನಲ್ಲಿ ಶೂಟಿಂಗ್ ಮಾಡಲು ಪ್ಲಾನ್ ನಡೆಸಲಾಗಿದೆ.

ಇದನ್ನೂ ಓದಿ: ಕಪಿಲ್ ಶರ್ಮಾ ಭೇಟಿ ಮಾಡಿದ ಗಣೇಶ್; ಜನಪ್ರಿಯ ಶೋಗೆ ಗೋಲ್ಡನ್ ಸ್ಟಾರ್ ಅತಿಥಿ

ತ್ರಿಶೂಲ್ ಎಂಟರ್​ಟೇನ್ಮೆಂಟ್ ಲಾಂಛನದ ಅಡಿಯಲ್ಲಿ ಪ್ರಶಾಂತ್ ಜಿ. ರುದ್ರಪ್ಪ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ 3ನೇ ಸಿನಿಮಾ. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು. ಗಣೇಶ್​​ಗೆ ನಾಯಕಿಯಾಗಿ ಮಾಳವಿಕಾ ನಾಯರ್ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶಿವಧ್ವಜ್ ಶೆಟ್ಟಿ, ಶ್ರೀನಿವಾಸಮೂರ್ತಿ, ಬೆನಕ ಗಿರಿ ಮೊದಲಾದವರು ‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:11 pm, Sat, 1 July 23

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ