AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ್ ಹೊಸ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಶೀರ್ಷಿಕೆ ಫೈನಲ್; ಬರ್ತ್​ಡೇಗೂ ಮೊದಲು ಸ್ಪೆಷಲ್ ಗಿಫ್ಟ್

ಗಣೇಶ್ ಅವರ ಮುಂದಿನ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂದು ಟೈಟಲ್ ಕೊಡಲಾಗಿದೆ. ಇದು ಗಣೇಶ್ ಹೀರೋ ಆಗಿ ನಟಿಸುತ್ತಿರುವ 41ನೇ ಚಿತ್ರ ಅನ್ನೋದು ವಿಶೇಷ.

ಗಣೇಶ್ ಹೊಸ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಶೀರ್ಷಿಕೆ ಫೈನಲ್; ಬರ್ತ್​ಡೇಗೂ ಮೊದಲು ಸ್ಪೆಷಲ್ ಗಿಫ್ಟ್
ಗಣೇಶ್-ಮಾಳವಿಕಾ
ರಾಜೇಶ್ ದುಗ್ಗುಮನೆ
|

Updated on:Jul 01, 2023 | 2:16 PM

Share

ನಟ ಗೋಲ್ಡನ್ ಸ್ಟಾರ್ ಗಣೇಶ್ (Ganesh) ಅವರು ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಜುಲೈ 2ರಂದು ಅವರ ಜನ್ಮದಿನ. ಅವರ ಬರ್ತ್​ಡೇಗೂ ಮೊದಲು ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್​ ಪೋಸ್ಟರ್ ರಿಲೀಸ್ ಆಗಿದೆ. ‘ಕೃಷ್ಣಂ ಪ್ರಣಯ ಸಖಿ’ (Krishnam Pranaya Sakhi Movie) ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಬರ್ತ್​ಡೇ ಸಂದರ್ಭದಲ್ಲಿ ವಿಶೇಷ ಗಿಫ್ಟ್ ಸಿಕ್ಕಿರೋದು ಫ್ಯಾನ್ಸ್ ಖುಷಿ ಹೆಚ್ಚಿಸಿದೆ.

ಗಣೇಶ್ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಈಗಾಗಲೇ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ಮುಂದಿನ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂದು ಟೈಟಲ್ ಕೊಡಲಾಗಿದೆ. ಇದು ಗಣೇಶ್ ಹೀರೋ ಆಗಿ ನಟಿಸುತ್ತಿರುವ 41ನೇ ಚಿತ್ರ ಅನ್ನೋದು ವಿಶೇಷ.

ಕನ್ನಡದಲ್ಲಿ ಹಲವು ಜನಪ್ರಿಯ ಚಿತ್ರಗಳನ್ನು ಶ್ರೀನಿವಾಸರಾಜು ನಿರ್ದೇಶಿಸಿದ್ದಾರೆ. ಅವರು ಈಗ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ. ಗಣೇಶ್ ಸಿನಿಮಾಗಳು ಫ್ಯಾಮಿಲಿ ಎಂಟರ್​​ಟೇನ್​ಮೆಂಟ್ ಅಂಶ ಹೊಂದಿರುತ್ತದೆ. ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ಕೂಡ ಇದೇ ರೀತಿಯ ಅಂಶಗಳನ್ನು ಹೊಂದಿರಲಿದೆ. ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಶೂಟಿಂಗ್ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ರಾಜಸ್ಥಾನ, ಮೈಸೂರು ಹಾಗೂ ಯುರೋಪ್​ನಲ್ಲಿ ಶೂಟಿಂಗ್ ಮಾಡಲು ಪ್ಲಾನ್ ನಡೆಸಲಾಗಿದೆ.

ಇದನ್ನೂ ಓದಿ: ಕಪಿಲ್ ಶರ್ಮಾ ಭೇಟಿ ಮಾಡಿದ ಗಣೇಶ್; ಜನಪ್ರಿಯ ಶೋಗೆ ಗೋಲ್ಡನ್ ಸ್ಟಾರ್ ಅತಿಥಿ

ತ್ರಿಶೂಲ್ ಎಂಟರ್​ಟೇನ್ಮೆಂಟ್ ಲಾಂಛನದ ಅಡಿಯಲ್ಲಿ ಪ್ರಶಾಂತ್ ಜಿ. ರುದ್ರಪ್ಪ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ 3ನೇ ಸಿನಿಮಾ. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು. ಗಣೇಶ್​​ಗೆ ನಾಯಕಿಯಾಗಿ ಮಾಳವಿಕಾ ನಾಯರ್ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶಿವಧ್ವಜ್ ಶೆಟ್ಟಿ, ಶ್ರೀನಿವಾಸಮೂರ್ತಿ, ಬೆನಕ ಗಿರಿ ಮೊದಲಾದವರು ‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:11 pm, Sat, 1 July 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ