AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದಲ್ಲಿ ಗಣೇಶ್​ ಸಿನಿಮಾ ‘ಗೀತಾ’; ಭಾಷಾಪ್ರೇಮದ ಜೊತೆ ಒಂದು ಪ್ರೇಮಕಥೆ

Zee Kannada: ಜುಲೈ 4ರಂದು ಸಂಜೆ 4.30ಕ್ಕೆ ಜೀ ಕನ್ನಡ ಮತ್ತು ಜೀ ಕನ್ನಡ ಎಚ್​ಡಿಯಲ್ಲಿ ಗಣೇಶ್​ ನಟನೆಯ ‘ಗೀತಾ’ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಆಗಲಿದೆ. ಶಾನ್ವಿ ಶ್ರೀವಾಸ್ತವ, ಪ್ರಯಾಗ ಮಾರ್ಟಿನ್‌ ಹಾಗೂ ಪಾರ್ವತಿ ಅರುಣ್‌ ಈ ಚಿತ್ರದ ನಾಯಕಿಯರು.

ಜೀ ಕನ್ನಡದಲ್ಲಿ ಗಣೇಶ್​ ಸಿನಿಮಾ ‘ಗೀತಾ’; ಭಾಷಾಪ್ರೇಮದ ಜೊತೆ ಒಂದು ಪ್ರೇಮಕಥೆ
ಜೀ ಕನ್ನಡದಲ್ಲಿ ಗಣೇಶ್​ ಸಿನಿಮಾ ‘ಗೀತಾ’
ಮದನ್​ ಕುಮಾರ್​
|

Updated on: Jul 03, 2021 | 8:16 AM

Share

ನಟ ಗಣೇಶ್​ ಅವರಿಗೆ ಜು.2ರಂದು ಜನ್ಮದಿನ. ಕೊವಿಡ್​ ಸಂದರ್ಭವಾದ್ದರಿಂದ ಅವರು ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿಲ್ಲ. ಹಾಗಂತ ಅಭಿಮಾನಿಗಳ ವಲಯದಲ್ಲಿ ಸಂಭ್ರಮಕ್ಕೇನೂ ಕೊರತೆ ಆಗಿಲ್ಲ. ಸೋಶಿಯಲ್​ ಮೀಡಿಯಾ ಮೂಲಕ ಭರ್ಜರಿ ಶುಭಾಶಯಗಳು ಹರಿದುಬಂದವು. ಹೊಸ ಸಿನಿಮಾಗಳ ಪೋಸ್ಟರ್​ಗಳು ರಿಲೀಸ್​ ಆದವು. ಈ ಖುಷಿಯನ್ನು ಇನ್ನಷ್ಟು ಹೆಚ್ಚಿಸುವ ಸಲುವಾಗಿ ಜೀ ಕನ್ನಡ ವಾಹಿನಿಯಲ್ಲಿ ಇದೇ ಭಾನುವಾರ (ಜು.4) ಗಣೇಶ್​ ನಟನೆಯ ‘ಗೀತಾ’ ಸಿನಿಮಾ ಪ್ರಸಾರವಾಗಲಿದೆ.

ಜುಲೈ 4ರಂದು ಸಂಜೆ 4.30ಕ್ಕೆ ಜೀ ಕನ್ನಡ ಮತ್ತು ಜೀ ಕನ್ನಡ ಎಚ್​ಡಿಯಲ್ಲಿ ಗೀತಾ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಆಗಲಿದೆ. ಈ ಚಿತ್ರಕ್ಕೆ ವಿಜಯ ನಾಗೇಂದ್ರ ನಿರ್ದೇಶನ, ಅನೂಪ್‌ ರೂಬೆನ್ಸ್‌ ಸಂಗೀತ ನಿರ್ದೇಶನವಿದೆ. ಈ ಸಿನಿಮಾದಲ್ಲಿ ಗಣೇಶ್​ಗೆ ನಾಯಕಿಯರಾಗಿ ಶಾನ್ವಿ ಶ್ರೀವಾಸ್ತವ, ಪ್ರಯಾಗ ಮಾರ್ಟಿನ್‌ ಹಾಗೂ ಪಾರ್ವತಿ ಅರುಣ್‌ ನಟಿಸಿದ್ದಾರೆ. ಡೈನಾಮಿಕ್‌ ಹೀರೋ ದೇವರಾಜ್‌ ಹಾಗೂ ಸುಧಾರಾಣಿ ಕೂಡ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಗಣೇಶ್​ ಸಿನಿಮಾಗಳ ಪಟ್ಟಿಯಲ್ಲಿ ‘ಗೀತಾ’ ವಿಭಿನ್ನ ಸಿನಿಮಾ. ಯಾಕೆಂದರೆ, ಈ ಚಿತ್ರದಲ್ಲಿ ಕನ್ನಡ ಭಾಷಾಪ್ರೇಮದ ಕಥಾಹಂದರ ಇದೆ. ಗೋಕಾಕ್​ ಚಳುವಳಿಯ ಹಿನ್ನೆಲೆಯಲ್ಲಿ ಒಂದು ನವಿರಾದ ಪ್ರೇಮಕಥೆಯನ್ನು ಹೇಳಲಾಗಿದೆ. ಕನ್ನಡಿಗರಲ್ಲಿ ಮಾತೃಭಾಷೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಈ ಚಿತ್ರ ಮಾಡಲಿದೆ. ಚಿತ್ರದ ಹಲವು ದೃಶ್ಯಗಳು ರೆಟ್ರೋ ಶೈಲಿಯಲ್ಲಿ ಮೂಡಿಬಂದಿರುವುದು ವಿಶೇಷ. ಕೊಲ್ಕತ್ತ, ಬೆಂಗಳೂರು, ಮೈಸೂರು, ಮನಾಲಿ ಮುಂತಾದ ಸ್ಥಳಗಳಲ್ಲಿ ಚಿತ್ರೀಕರಣ ನಡೆದಿದೆ.

‘ಗೀತಾ’ ಸಿನಿಮಾ ತಯಾರಾಗಿದ್ದು ಗಣೇಶ್​ ಅವರ ಹೋಮ್​ ಬ್ಯಾನರ್​ನಲ್ಲಿಯೇ ಎಂಬುದು ಇನ್ನೊಂದು ವಿಶೇಷ. ಈಗ ಅವರ ಜನ್ಮದಿನದ ಆಸುಪಾಸಿನಲ್ಲಿ ಈ ಚಿತ್ರವನ್ನು ಕಣ್ತುಂಬಿಕೊಳ್ಳುವ ಅವಕಾಶವನ್ನು ಜೀ ಕನ್ನಡ ವಾಹಿನಿಯು ಗೋಲ್ಡನ್​ ಸ್ಟಾರ್​ ಅಭಿಮಾನಿಗಳಿಗೆ ಒದಗಿಸುತ್ತಿದೆ. ಪ್ರಸ್ತುತ ಹಲವು ಸಿನಿಮಾಗಳಲ್ಲಿ ಗಣೇಶ್​ ತೊಡಗಿಕೊಂಡಿದ್ದಾರೆ. ‘ಗಾಳಿಪಟ 2’, ‘ಸಖತ್​’, ‘ರಾಯಗಡ’, ‘ತ್ರಿಬಲ್​ ರೈಡಿಂಗ್​’ ಮುಂತಾದ ಚಿತ್ರತಂಡಗಳು ಅವರಿಗೆ ಜನ್ಮದಿನದ ಶುಭ ಕೋರಿವೆ.

ಇದನ್ನೂ ಓದಿ:

ಗೋಲ್ಡನ್ ಸ್ಟಾರ್​ ಗಣೇಶ್​ ಜನ್ಮದಿನ; ‘ಸಖತ್​’, ‘ಗಾಳಿಪಟ 2’ ಚಿತ್ರಗಳಿಂದ ಸಿಕ್ಕ ಗಿಫ್ಟ್​ಗಳೇನು?

ಇಷ್ಟೊಂದು ಸಾವು-ನೋವಿನಲ್ಲಿ ಸಂಭ್ರಮಿಸುವುದು ಸರಿಯಲ್ಲ; ಅಭಿಮಾನಿಗಳಿಗೆ ಗಣೇಶ್​ ವಿಶೇಷ ಮನವಿ

Follow Us
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ