AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದಲ್ಲಿ ಗಣೇಶ್​ ಸಿನಿಮಾ ‘ಗೀತಾ’; ಭಾಷಾಪ್ರೇಮದ ಜೊತೆ ಒಂದು ಪ್ರೇಮಕಥೆ

Zee Kannada: ಜುಲೈ 4ರಂದು ಸಂಜೆ 4.30ಕ್ಕೆ ಜೀ ಕನ್ನಡ ಮತ್ತು ಜೀ ಕನ್ನಡ ಎಚ್​ಡಿಯಲ್ಲಿ ಗಣೇಶ್​ ನಟನೆಯ ‘ಗೀತಾ’ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಆಗಲಿದೆ. ಶಾನ್ವಿ ಶ್ರೀವಾಸ್ತವ, ಪ್ರಯಾಗ ಮಾರ್ಟಿನ್‌ ಹಾಗೂ ಪಾರ್ವತಿ ಅರುಣ್‌ ಈ ಚಿತ್ರದ ನಾಯಕಿಯರು.

ಜೀ ಕನ್ನಡದಲ್ಲಿ ಗಣೇಶ್​ ಸಿನಿಮಾ ‘ಗೀತಾ’; ಭಾಷಾಪ್ರೇಮದ ಜೊತೆ ಒಂದು ಪ್ರೇಮಕಥೆ
ಜೀ ಕನ್ನಡದಲ್ಲಿ ಗಣೇಶ್​ ಸಿನಿಮಾ ‘ಗೀತಾ’
ಮದನ್​ ಕುಮಾರ್​
|

Updated on: Jul 03, 2021 | 8:16 AM

Share

ನಟ ಗಣೇಶ್​ ಅವರಿಗೆ ಜು.2ರಂದು ಜನ್ಮದಿನ. ಕೊವಿಡ್​ ಸಂದರ್ಭವಾದ್ದರಿಂದ ಅವರು ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿಲ್ಲ. ಹಾಗಂತ ಅಭಿಮಾನಿಗಳ ವಲಯದಲ್ಲಿ ಸಂಭ್ರಮಕ್ಕೇನೂ ಕೊರತೆ ಆಗಿಲ್ಲ. ಸೋಶಿಯಲ್​ ಮೀಡಿಯಾ ಮೂಲಕ ಭರ್ಜರಿ ಶುಭಾಶಯಗಳು ಹರಿದುಬಂದವು. ಹೊಸ ಸಿನಿಮಾಗಳ ಪೋಸ್ಟರ್​ಗಳು ರಿಲೀಸ್​ ಆದವು. ಈ ಖುಷಿಯನ್ನು ಇನ್ನಷ್ಟು ಹೆಚ್ಚಿಸುವ ಸಲುವಾಗಿ ಜೀ ಕನ್ನಡ ವಾಹಿನಿಯಲ್ಲಿ ಇದೇ ಭಾನುವಾರ (ಜು.4) ಗಣೇಶ್​ ನಟನೆಯ ‘ಗೀತಾ’ ಸಿನಿಮಾ ಪ್ರಸಾರವಾಗಲಿದೆ.

ಜುಲೈ 4ರಂದು ಸಂಜೆ 4.30ಕ್ಕೆ ಜೀ ಕನ್ನಡ ಮತ್ತು ಜೀ ಕನ್ನಡ ಎಚ್​ಡಿಯಲ್ಲಿ ಗೀತಾ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಆಗಲಿದೆ. ಈ ಚಿತ್ರಕ್ಕೆ ವಿಜಯ ನಾಗೇಂದ್ರ ನಿರ್ದೇಶನ, ಅನೂಪ್‌ ರೂಬೆನ್ಸ್‌ ಸಂಗೀತ ನಿರ್ದೇಶನವಿದೆ. ಈ ಸಿನಿಮಾದಲ್ಲಿ ಗಣೇಶ್​ಗೆ ನಾಯಕಿಯರಾಗಿ ಶಾನ್ವಿ ಶ್ರೀವಾಸ್ತವ, ಪ್ರಯಾಗ ಮಾರ್ಟಿನ್‌ ಹಾಗೂ ಪಾರ್ವತಿ ಅರುಣ್‌ ನಟಿಸಿದ್ದಾರೆ. ಡೈನಾಮಿಕ್‌ ಹೀರೋ ದೇವರಾಜ್‌ ಹಾಗೂ ಸುಧಾರಾಣಿ ಕೂಡ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಗಣೇಶ್​ ಸಿನಿಮಾಗಳ ಪಟ್ಟಿಯಲ್ಲಿ ‘ಗೀತಾ’ ವಿಭಿನ್ನ ಸಿನಿಮಾ. ಯಾಕೆಂದರೆ, ಈ ಚಿತ್ರದಲ್ಲಿ ಕನ್ನಡ ಭಾಷಾಪ್ರೇಮದ ಕಥಾಹಂದರ ಇದೆ. ಗೋಕಾಕ್​ ಚಳುವಳಿಯ ಹಿನ್ನೆಲೆಯಲ್ಲಿ ಒಂದು ನವಿರಾದ ಪ್ರೇಮಕಥೆಯನ್ನು ಹೇಳಲಾಗಿದೆ. ಕನ್ನಡಿಗರಲ್ಲಿ ಮಾತೃಭಾಷೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಈ ಚಿತ್ರ ಮಾಡಲಿದೆ. ಚಿತ್ರದ ಹಲವು ದೃಶ್ಯಗಳು ರೆಟ್ರೋ ಶೈಲಿಯಲ್ಲಿ ಮೂಡಿಬಂದಿರುವುದು ವಿಶೇಷ. ಕೊಲ್ಕತ್ತ, ಬೆಂಗಳೂರು, ಮೈಸೂರು, ಮನಾಲಿ ಮುಂತಾದ ಸ್ಥಳಗಳಲ್ಲಿ ಚಿತ್ರೀಕರಣ ನಡೆದಿದೆ.

‘ಗೀತಾ’ ಸಿನಿಮಾ ತಯಾರಾಗಿದ್ದು ಗಣೇಶ್​ ಅವರ ಹೋಮ್​ ಬ್ಯಾನರ್​ನಲ್ಲಿಯೇ ಎಂಬುದು ಇನ್ನೊಂದು ವಿಶೇಷ. ಈಗ ಅವರ ಜನ್ಮದಿನದ ಆಸುಪಾಸಿನಲ್ಲಿ ಈ ಚಿತ್ರವನ್ನು ಕಣ್ತುಂಬಿಕೊಳ್ಳುವ ಅವಕಾಶವನ್ನು ಜೀ ಕನ್ನಡ ವಾಹಿನಿಯು ಗೋಲ್ಡನ್​ ಸ್ಟಾರ್​ ಅಭಿಮಾನಿಗಳಿಗೆ ಒದಗಿಸುತ್ತಿದೆ. ಪ್ರಸ್ತುತ ಹಲವು ಸಿನಿಮಾಗಳಲ್ಲಿ ಗಣೇಶ್​ ತೊಡಗಿಕೊಂಡಿದ್ದಾರೆ. ‘ಗಾಳಿಪಟ 2’, ‘ಸಖತ್​’, ‘ರಾಯಗಡ’, ‘ತ್ರಿಬಲ್​ ರೈಡಿಂಗ್​’ ಮುಂತಾದ ಚಿತ್ರತಂಡಗಳು ಅವರಿಗೆ ಜನ್ಮದಿನದ ಶುಭ ಕೋರಿವೆ.

ಇದನ್ನೂ ಓದಿ:

ಗೋಲ್ಡನ್ ಸ್ಟಾರ್​ ಗಣೇಶ್​ ಜನ್ಮದಿನ; ‘ಸಖತ್​’, ‘ಗಾಳಿಪಟ 2’ ಚಿತ್ರಗಳಿಂದ ಸಿಕ್ಕ ಗಿಫ್ಟ್​ಗಳೇನು?

ಇಷ್ಟೊಂದು ಸಾವು-ನೋವಿನಲ್ಲಿ ಸಂಭ್ರಮಿಸುವುದು ಸರಿಯಲ್ಲ; ಅಭಿಮಾನಿಗಳಿಗೆ ಗಣೇಶ್​ ವಿಶೇಷ ಮನವಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ