AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈ ಯೂಟ್ಯೂಬರ್ ಜೊತೆ ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ?

ಖಲೀದ್ ಮೊದಲ ಪತ್ನಿ ಸಲಾಮಾ ಮೊಹ್ಮದ್ ವಿಚ್ಛೇದನದ ವಿಚಾರ ರಿವೀಲ್ ಮಾಡಿದ್ದಾರೆ. ಈ ವರ್ಷ ಫೆಬ್ರವರಿ 14ರಂದು ಇಬ್ಬರೂ ಬೇರೆ ಆಗಿದ್ದಾಗಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದೆಲ್ಲವೂ ಖಲೀದ್ ಅವರ ಎರಡನೇ ಮದುವೆ ಬಗ್ಗೆ ಚರ್ಚೆ ಹುಟ್ಟುಹಾಕುವಂತೆ ಮಾಡಿದೆ.

ದುಬೈ ಯೂಟ್ಯೂಬರ್ ಜೊತೆ ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ?
ದುಬೈ ಯೂಟ್ಯೂಬರ್ ಜೊತೆ ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ?
TV9 Web
| Edited By: |

Updated on:Jul 02, 2024 | 7:04 AM

Share

ಸೆಲೆಬ್ರಿಟಿಗಳ ನಿಶ್ಚಿತಾರ್ಥ, ಮದುವೆ, ಪ್ರೇಮಕಥೆಗಳ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡುತ್ತವೆ. ‘ಗಂಗೆ ಬಾರೆ ತುಂಗೆ ಬಾರೆ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದ ಸುನೈನಾ ಅವರು ದುಬೈ ಮೂಲದ ಯೂಟ್ಯೂಬರ್, ಸೋಶಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್ ಖಲೀದ್ ಅಲ್ ಅಮೇರಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸೋಮವಾರ (ಜುಲೈ 1) ಈ ನಿಶ್ಚಿತಾರ್ಥ ನೆರವೇರಿದೆ ಎನ್ನಲಾಗುತ್ತಿದೆ.

ಜೂನ್ 5ರಂದು ಸುನೈನಾ ಪೋಸ್ಟ್ ಒಂದನ್ನು ಮಾಡಿದ್ದರು. ಅವರು ಪುರುಷನೊಬ್ಬನ ಕೈ ಹಿಡಿದಿದ್ದಾರೆ. ಈ ಫೋಟೋಗೆ ಬೀಗದ ಚಿತ್ರದ ಎಮೋಜಿ ಹಾಕಿದ್ದರು. ಈ ಮೂಲಕ ತಾವು ಎಂಗೇಜ್ ಎಂದು ಪರೋಕ್ಷವಾಗಿ ಹೇಳಿದ್ದರು. ಈ ಫೋಟೋನ ಖಲೀದ್ ಅವರು ಲೈಕ್ ಮಾಡಿದ್ದಾರೆ. ಈಗ ಖಲೀದ್ ಅಲ್ ಅಮೇರಿ ಕೂಡ ಇದೇ ರೀತಿಯ ಫೋಟೋ ಹಾಕಿದ್ದಾರೆ.  ಈ ಮೂಲಕ ಇಬ್ಬರ ಎಂಗೇಜ್​ಮೆಂಟ್ ಸುದ್ದಿ ಹರಿದಾಡಿದೆ.

ಖಲೀದ್ ಅವರ ಮೊದಲ ಪತ್ನಿ ಸಲಾಮಾ ಮೊಹ್ಮದ್ ಜುಲೈ 1ರಂದು ವಿಚ್ಛೇದನದ ವಿಚಾರ ರಿವೀಲ್ ಮಾಡಿದ್ದಾರೆ. ಈ ವರ್ಷ ಫೆಬ್ರವರಿ 14ರಂದು ಇಬ್ಬರೂ ಬೇರೆ ಆಗಿದ್ದಾಗಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದೆಲ್ಲವೂ ಖಲೀದ್ ಅವರ ಎರಡನೇ ಮದುವೆ ಬಗ್ಗೆ ಚರ್ಚೆ ಹುಟ್ಟುಹಾಕುವಂತೆ ಮಾಡಿದೆ.

ಖಲೀದ್ ಅಲ್ ಅಮೇರಿ ಅವರು ಸ್ಟ್ಯಾನ್​ಫೋರ್ಡ್ ವಿಶ್ವ ವಿದ್ಯಾಲಯದಲ್ಲಿ ಪದವಿ ಪಡೆದಿದ್ದಾರೆ. ಖಲೀದ್ ಹಾಗೂ ಸಲಾಮಾ ಇಬ್ಬರೂ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಖಲೀದ್​ಗೆ 31 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ.

ಇದನ್ನೂ ಓದಿ: ಗಂಡನ ಮಾಜಿ ಪತ್ನಿಯ ಪುತ್ರಿ ಸಮೈರಾಗೆ ಪ್ರೀತಿಯ ಬರ್ತ್​ಡೇ ವಿಶ್​ ಮಾಡಿದ ನಟಿ ದಿಯಾ ಮಿರ್ಜಾ

ಸುನೈನಾ ಅವರು 2005ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಕುಮಾರ್ vs ಕುಮಾರಿ’ ಅವರ ನಟನೆಯ ಮೊದಲ ಸಿನಿಮಾ. 2008ರಲ್ಲಿ ರಿಲೀಸ್ ಆದ ಕನ್ನಡದ ‘ಗಂಗೆ ಬಾರೆ ತುಂಗೆ ಬಾರೆ’ ಚಿತ್ರದಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಬಿಡುಗಡೆ ಆದ ಕ್ರೈಮ್ ಥ್ರಿಲ್ಲರ್ ಸೀರಿಸ್ ‘ಇನ್​ಸ್ಪೆಕ್ಟರ್ ರಿಷಿ’ಯಲ್ಲಿ ಅವರು ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:02 am, Tue, 2 July 24

Follow Us
Web contact
Web contact

TV9 Kannada

Read More
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಮೂರಿನ್ ಕಟ್ಟೆ ಧ್ವಂಸವನ್ನು ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ
ಮೂರಿನ್ ಕಟ್ಟೆ ಧ್ವಂಸವನ್ನು ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ