ದುಬೈ ಯೂಟ್ಯೂಬರ್ ಜೊತೆ ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ?

ಖಲೀದ್ ಮೊದಲ ಪತ್ನಿ ಸಲಾಮಾ ಮೊಹ್ಮದ್ ವಿಚ್ಛೇದನದ ವಿಚಾರ ರಿವೀಲ್ ಮಾಡಿದ್ದಾರೆ. ಈ ವರ್ಷ ಫೆಬ್ರವರಿ 14ರಂದು ಇಬ್ಬರೂ ಬೇರೆ ಆಗಿದ್ದಾಗಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದೆಲ್ಲವೂ ಖಲೀದ್ ಅವರ ಎರಡನೇ ಮದುವೆ ಬಗ್ಗೆ ಚರ್ಚೆ ಹುಟ್ಟುಹಾಕುವಂತೆ ಮಾಡಿದೆ.

ದುಬೈ ಯೂಟ್ಯೂಬರ್ ಜೊತೆ ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ?
ದುಬೈ ಯೂಟ್ಯೂಬರ್ ಜೊತೆ ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ?
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 02, 2024 | 7:04 AM

ಸೆಲೆಬ್ರಿಟಿಗಳ ನಿಶ್ಚಿತಾರ್ಥ, ಮದುವೆ, ಪ್ರೇಮಕಥೆಗಳ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡುತ್ತವೆ. ‘ಗಂಗೆ ಬಾರೆ ತುಂಗೆ ಬಾರೆ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದ ಸುನೈನಾ ಅವರು ದುಬೈ ಮೂಲದ ಯೂಟ್ಯೂಬರ್, ಸೋಶಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್ ಖಲೀದ್ ಅಲ್ ಅಮೇರಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸೋಮವಾರ (ಜುಲೈ 1) ಈ ನಿಶ್ಚಿತಾರ್ಥ ನೆರವೇರಿದೆ ಎನ್ನಲಾಗುತ್ತಿದೆ.

ಜೂನ್ 5ರಂದು ಸುನೈನಾ ಪೋಸ್ಟ್ ಒಂದನ್ನು ಮಾಡಿದ್ದರು. ಅವರು ಪುರುಷನೊಬ್ಬನ ಕೈ ಹಿಡಿದಿದ್ದಾರೆ. ಈ ಫೋಟೋಗೆ ಬೀಗದ ಚಿತ್ರದ ಎಮೋಜಿ ಹಾಕಿದ್ದರು. ಈ ಮೂಲಕ ತಾವು ಎಂಗೇಜ್ ಎಂದು ಪರೋಕ್ಷವಾಗಿ ಹೇಳಿದ್ದರು. ಈ ಫೋಟೋನ ಖಲೀದ್ ಅವರು ಲೈಕ್ ಮಾಡಿದ್ದಾರೆ. ಈಗ ಖಲೀದ್ ಅಲ್ ಅಮೇರಿ ಕೂಡ ಇದೇ ರೀತಿಯ ಫೋಟೋ ಹಾಕಿದ್ದಾರೆ.  ಈ ಮೂಲಕ ಇಬ್ಬರ ಎಂಗೇಜ್​ಮೆಂಟ್ ಸುದ್ದಿ ಹರಿದಾಡಿದೆ.

ಖಲೀದ್ ಅವರ ಮೊದಲ ಪತ್ನಿ ಸಲಾಮಾ ಮೊಹ್ಮದ್ ಜುಲೈ 1ರಂದು ವಿಚ್ಛೇದನದ ವಿಚಾರ ರಿವೀಲ್ ಮಾಡಿದ್ದಾರೆ. ಈ ವರ್ಷ ಫೆಬ್ರವರಿ 14ರಂದು ಇಬ್ಬರೂ ಬೇರೆ ಆಗಿದ್ದಾಗಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದೆಲ್ಲವೂ ಖಲೀದ್ ಅವರ ಎರಡನೇ ಮದುವೆ ಬಗ್ಗೆ ಚರ್ಚೆ ಹುಟ್ಟುಹಾಕುವಂತೆ ಮಾಡಿದೆ.

ಖಲೀದ್ ಅಲ್ ಅಮೇರಿ ಅವರು ಸ್ಟ್ಯಾನ್​ಫೋರ್ಡ್ ವಿಶ್ವ ವಿದ್ಯಾಲಯದಲ್ಲಿ ಪದವಿ ಪಡೆದಿದ್ದಾರೆ. ಖಲೀದ್ ಹಾಗೂ ಸಲಾಮಾ ಇಬ್ಬರೂ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಖಲೀದ್​ಗೆ 31 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ.

ಇದನ್ನೂ ಓದಿ: ಗಂಡನ ಮಾಜಿ ಪತ್ನಿಯ ಪುತ್ರಿ ಸಮೈರಾಗೆ ಪ್ರೀತಿಯ ಬರ್ತ್​ಡೇ ವಿಶ್​ ಮಾಡಿದ ನಟಿ ದಿಯಾ ಮಿರ್ಜಾ

ಸುನೈನಾ ಅವರು 2005ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಕುಮಾರ್ vs ಕುಮಾರಿ’ ಅವರ ನಟನೆಯ ಮೊದಲ ಸಿನಿಮಾ. 2008ರಲ್ಲಿ ರಿಲೀಸ್ ಆದ ಕನ್ನಡದ ‘ಗಂಗೆ ಬಾರೆ ತುಂಗೆ ಬಾರೆ’ ಚಿತ್ರದಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಬಿಡುಗಡೆ ಆದ ಕ್ರೈಮ್ ಥ್ರಿಲ್ಲರ್ ಸೀರಿಸ್ ‘ಇನ್​ಸ್ಪೆಕ್ಟರ್ ರಿಷಿ’ಯಲ್ಲಿ ಅವರು ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:02 am, Tue, 2 July 24

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ