AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈ ಯೂಟ್ಯೂಬರ್ ಜೊತೆ ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ?

ಖಲೀದ್ ಮೊದಲ ಪತ್ನಿ ಸಲಾಮಾ ಮೊಹ್ಮದ್ ವಿಚ್ಛೇದನದ ವಿಚಾರ ರಿವೀಲ್ ಮಾಡಿದ್ದಾರೆ. ಈ ವರ್ಷ ಫೆಬ್ರವರಿ 14ರಂದು ಇಬ್ಬರೂ ಬೇರೆ ಆಗಿದ್ದಾಗಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದೆಲ್ಲವೂ ಖಲೀದ್ ಅವರ ಎರಡನೇ ಮದುವೆ ಬಗ್ಗೆ ಚರ್ಚೆ ಹುಟ್ಟುಹಾಕುವಂತೆ ಮಾಡಿದೆ.

ದುಬೈ ಯೂಟ್ಯೂಬರ್ ಜೊತೆ ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ?
ದುಬೈ ಯೂಟ್ಯೂಬರ್ ಜೊತೆ ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ?
TV9 Web
| Edited By: |

Updated on:Jul 02, 2024 | 7:04 AM

Share

ಸೆಲೆಬ್ರಿಟಿಗಳ ನಿಶ್ಚಿತಾರ್ಥ, ಮದುವೆ, ಪ್ರೇಮಕಥೆಗಳ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡುತ್ತವೆ. ‘ಗಂಗೆ ಬಾರೆ ತುಂಗೆ ಬಾರೆ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದ ಸುನೈನಾ ಅವರು ದುಬೈ ಮೂಲದ ಯೂಟ್ಯೂಬರ್, ಸೋಶಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್ ಖಲೀದ್ ಅಲ್ ಅಮೇರಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸೋಮವಾರ (ಜುಲೈ 1) ಈ ನಿಶ್ಚಿತಾರ್ಥ ನೆರವೇರಿದೆ ಎನ್ನಲಾಗುತ್ತಿದೆ.

ಜೂನ್ 5ರಂದು ಸುನೈನಾ ಪೋಸ್ಟ್ ಒಂದನ್ನು ಮಾಡಿದ್ದರು. ಅವರು ಪುರುಷನೊಬ್ಬನ ಕೈ ಹಿಡಿದಿದ್ದಾರೆ. ಈ ಫೋಟೋಗೆ ಬೀಗದ ಚಿತ್ರದ ಎಮೋಜಿ ಹಾಕಿದ್ದರು. ಈ ಮೂಲಕ ತಾವು ಎಂಗೇಜ್ ಎಂದು ಪರೋಕ್ಷವಾಗಿ ಹೇಳಿದ್ದರು. ಈ ಫೋಟೋನ ಖಲೀದ್ ಅವರು ಲೈಕ್ ಮಾಡಿದ್ದಾರೆ. ಈಗ ಖಲೀದ್ ಅಲ್ ಅಮೇರಿ ಕೂಡ ಇದೇ ರೀತಿಯ ಫೋಟೋ ಹಾಕಿದ್ದಾರೆ.  ಈ ಮೂಲಕ ಇಬ್ಬರ ಎಂಗೇಜ್​ಮೆಂಟ್ ಸುದ್ದಿ ಹರಿದಾಡಿದೆ.

ಖಲೀದ್ ಅವರ ಮೊದಲ ಪತ್ನಿ ಸಲಾಮಾ ಮೊಹ್ಮದ್ ಜುಲೈ 1ರಂದು ವಿಚ್ಛೇದನದ ವಿಚಾರ ರಿವೀಲ್ ಮಾಡಿದ್ದಾರೆ. ಈ ವರ್ಷ ಫೆಬ್ರವರಿ 14ರಂದು ಇಬ್ಬರೂ ಬೇರೆ ಆಗಿದ್ದಾಗಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದೆಲ್ಲವೂ ಖಲೀದ್ ಅವರ ಎರಡನೇ ಮದುವೆ ಬಗ್ಗೆ ಚರ್ಚೆ ಹುಟ್ಟುಹಾಕುವಂತೆ ಮಾಡಿದೆ.

ಖಲೀದ್ ಅಲ್ ಅಮೇರಿ ಅವರು ಸ್ಟ್ಯಾನ್​ಫೋರ್ಡ್ ವಿಶ್ವ ವಿದ್ಯಾಲಯದಲ್ಲಿ ಪದವಿ ಪಡೆದಿದ್ದಾರೆ. ಖಲೀದ್ ಹಾಗೂ ಸಲಾಮಾ ಇಬ್ಬರೂ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಖಲೀದ್​ಗೆ 31 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ.

ಇದನ್ನೂ ಓದಿ: ಗಂಡನ ಮಾಜಿ ಪತ್ನಿಯ ಪುತ್ರಿ ಸಮೈರಾಗೆ ಪ್ರೀತಿಯ ಬರ್ತ್​ಡೇ ವಿಶ್​ ಮಾಡಿದ ನಟಿ ದಿಯಾ ಮಿರ್ಜಾ

ಸುನೈನಾ ಅವರು 2005ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಕುಮಾರ್ vs ಕುಮಾರಿ’ ಅವರ ನಟನೆಯ ಮೊದಲ ಸಿನಿಮಾ. 2008ರಲ್ಲಿ ರಿಲೀಸ್ ಆದ ಕನ್ನಡದ ‘ಗಂಗೆ ಬಾರೆ ತುಂಗೆ ಬಾರೆ’ ಚಿತ್ರದಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಬಿಡುಗಡೆ ಆದ ಕ್ರೈಮ್ ಥ್ರಿಲ್ಲರ್ ಸೀರಿಸ್ ‘ಇನ್​ಸ್ಪೆಕ್ಟರ್ ರಿಷಿ’ಯಲ್ಲಿ ಅವರು ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:02 am, Tue, 2 July 24

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್