AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದು ಬೀಗಿದ ಆಲಿಯಾ ನಟನೆಯ ‘ಗಂಗೂಬಾಯಿ..’; ಬಾಕ್ಸ್​ ಆಫೀಸ್​ ಕಲೆಕ್ಷನ್​ನಲ್ಲಿ ಭಾರೀ ಏರಿಕೆ

ಶನಿವಾರ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ 13.32 ಕೋಟಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಗಳಿಕೆ ಮೊದಲ ಎರಡು ದಿನಕ್ಕೆ 23.82 ಕೋಟಿ ರೂಪಾಯಿ ಆಗಿದೆ. ಇಂದು (ಫೆಬ್ರವರಿ 27) ಈ ಚಿತ್ರದ ಕಲೆಕ್ಷನ್​ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ಗೆದ್ದು ಬೀಗಿದ ಆಲಿಯಾ ನಟನೆಯ ‘ಗಂಗೂಬಾಯಿ..’; ಬಾಕ್ಸ್​ ಆಫೀಸ್​ ಕಲೆಕ್ಷನ್​ನಲ್ಲಿ ಭಾರೀ ಏರಿಕೆ
‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ಆಲಿಯಾ ಭಟ್
TV9 Web
| Edited By: |

Updated on:Feb 27, 2022 | 9:19 PM

Share

ಆಲಿಯಾ ಭಟ್ (Alia Bhatt)​ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ (Gangubai Kathiawadi  Movie) ಗೆದ್ದು ಬೀಗಿದೆ. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾ ಗಳಿಕೆ ವಿಚಾರದಲ್ಲೂ ಹಿಂದೆ ಬಿದ್ದಿಲ್ಲ. ಮೊದಲ ದಿನಕ್ಕೆ ಹೋಲಿಕೆ ಮಾಡಿದರೆ, ಎರಡನೇ ದಿನ ಈ ಸಿನಿಮಾದ ಗಳಿಕೆ ಹೆಚ್ಚಿದೆ. ಈ ಚಿತ್ರದಿಂದ ಆಲಿಯಾ ವೃತ್ತಿ ಜೀವನಕ್ಕೆ ಮತ್ತೊಂದು ಹಿಟ್​ ಸಿಕ್ಕಂತೆ ಆಗಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಶುಕ್ರವಾರ (ಫೆಬ್ರವರಿ 25) ಭಾರತೀಯ ಬಾಕ್ಸ್​ ಆಫೀಸ್​ನಲ್ಲಿ(Gangubai Kathiawadi  Collection)  ಬರೋಬ್ಬರಿ 10 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಶುಕ್ರವಾರವೇ ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರೋಕೆ ಶುರುವಾದವು. ಹೀಗಾಗಿ, ಶನಿವಾರದ (ಫೆಬ್ರವರಿ 26) ಗಳಿಕೆಯಲ್ಲಿ ಏರಿಕೆ ಕಂಡಿದೆ.

ಶನಿವಾರ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ 13.32 ಕೋಟಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಗಳಿಕೆ ಮೊದಲ ಎರಡು ದಿನಕ್ಕೆ 23.82 ಕೋಟಿ ರೂಪಾಯಿ ಆಗಿದೆ. ಇಂದು (ಫೆಬ್ರವರಿ 27) ಈ ಚಿತ್ರದ ಕಲೆಕ್ಷನ್​ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಇಂದು ಭಾನುವಾರ ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಚಿತ್ರಮಂದಿರದತ್ತ ಬರುತ್ತಾರೆ. ಹೀಗಾಗಿ, ಮೂರು ದಿನದಲ್ಲಿ ಈ ಸಿನಿಮಾ 36-37 ಕೋಟಿ ರೂಪಾಯಿ ಆಗಬಹುದು

ವಿದೇಶದಲ್ಲೂ ಈ ಸಿನಿಮಾ ಕಮಾಲ್​ ಮಾಡುತ್ತಿದೆ. ಆಸ್ಟ್ರೇಲಿಯಾದಲ್ಲಿ ಈ ಸಿನಿಮಾ 1.41 ಕೋಟಿ ರೂಪಾಯಿ ಬಾಚಿಕೊಂಡಿದೆ. ನ್ಯೂಜಿಲೆಂಡ್​ನಲ್ಲಿ 20.87 ಲಕ್ಷ ರೂಪಾಯಿ ಗಳಿಸಿದೆ. ಅಮೆರಿಕದಲ್ಲಿ 2.35 ಕೋಟಿ ಕಮಾಯಿ ಮಾಡಿದೆ. ಈ ಚಿತ್ರ ಒಳ್ಳೆಯ ರೀತಿಯಲ್ಲಿ ಗಳಿಕೆ ಮಾಡುತ್ತಿರುವುದಕ್ಕೆ ಸಿನಿಮಾ ತಂಡ ಖುಷಿ ಪಟ್ಟಿದೆ.

ಆಲಿಯಾಗೆ ಕಂಗನಾ ಮೆಚ್ಚುಗೆ:

ಆಲಿಯಾ ಭಟ್​ ಅವರು ನೆಪೋಟಿಸಂ ಫಲಾಭವಿ ಎಂದು ಕಂಗನಾ ಯಾವಾಗಲೂ ಟೀಕೆ ಮಾಡುತ್ತಾರೆ. ಆ ಕಾರಣಕ್ಕಾಗಿ ಅವರು ಆಲಿಯಾ ನಟನೆಯ ಸಿನಿಮಾಗಳೆಂದರೆ ಮೂಗು ಮುರಿಯುತ್ತಾರೆ. ಆದರೆ ಈ ಬಾರಿ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಗೆ ಜನರಿಂದ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಕಂಗನಾ ಬೆರಗಾಗಿದ್ದಾರೆ. ಹಾಗಾಗಿ ಅವರು ಈ ಚಿತ್ರವನ್ನು ಮನಸಾರೆ ಹೊಗಳಿದ್ದರು. ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದರು.

‘ದಕ್ಷಿಣ ಭಾರತದ ಸಿನಿಮಾಗಳ ದಾಖಲೆಯ ಕಲೆಕ್ಷನ್​ನಿಂದಾಗಿ ಚಿತ್ರಮಂದಿರಗಳಲ್ಲಿ ಮತ್ತೆ ಕಳೆ ಬಂದಿದೆ ಎಂಬುದನ್ನು ಕೇಳಿ ಖುಷಿ ಆಯಿತು. ಸೂಪರ್​ ಸ್ಟಾರ್​ ಡೈರೆಕ್ಟರ್​, ಸ್ಟಾರ್​ ಹೀರೋ ಇರುವ ಒಂದು ಮಹಿಳಾ ಪ್ರಧಾನ ಸಿನಿಮಾದಿಂದ ಹಿಂದಿ ಚಿತ್ರರಂಗ ಕೂಡ ಪುಟ್ಟ ಹೆಜ್ಜೆಗಳನ್ನು ಇಡುತ್ತಿದೆ. ಪುಟ್ಟ ಹೆಜ್ಜೆಗಳೇ ಆಗಿರಬಹುದು, ಆದರೆ ಅವು ಮಹತ್ವವಾದವು. ಕಷ್ಟದ ಪರಿಸ್ಥಿತಿಯಲ್ಲಿ ಇರುವ ಚಿತ್ರಮಂದಿರಗಳಿಗೆ ಈ ಬೆಳವಣಿಗೆ ತುಂಬ ಮುಖ್ಯ. ಗ್ರೇಟ್​! ಇಂಥ ಸಂದರ್ಭದಲ್ಲಿ ಮೂವೀ ಮಾಫಿಯಾದವರು ಒಳ್ಳೆಯ ಕೆಲಸ ಮಾಡ್ತಾರೆ ಅಂಥ ನಾನು ನಿರೀಕ್ಷಿಸಿರಲಿಲ್ಲ. ಅವರು ಒಳ್ಳೆಯದು ಮಾಡಿದಾಗ ನಾನು ಖಂಡಿತಾ ಹೊಗಳುತ್ತೇನೆ. ಇನ್ನೂ ಒಳ್ಳೆಯದನ್ನು ನಿರೀಕ್ಷಿಸುತ್ತೇನೆ’ ಎಂದು ಕಂಗನಾ ರಣಾವತ್​ ಅವರು ಬರೆದುಕೊಂಡಿದ್ದರು.

ಇದನ್ನೂ ಓದಿ: ‘ಬಾಕ್ಸ್​ ಆಫೀಸ್​ನಲ್ಲಿ 200 ಕೋಟಿ ಸುಟ್ಟು ಬೂದಿಯಾಗಲಿದೆ’; ಆಲಿಯಾ ಭಟ್​ ಸಿನಿಮಾ ಬಗ್ಗೆ ಕಂಗನಾ ಟೀಕೆ

ಮುಂದಿನ ವರ್ಷ ಆಲಿಯಾ ಭಟ್ ಜತೆ ಮದುವೆ, ಸುಳಿವು ನೀಡಿದ ರಣಬೀರ್ ಕಪೂರ್

Published On - 9:17 pm, Sun, 27 February 22

Follow Us
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?