AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದು ಬೀಗಿದ ಆಲಿಯಾ ನಟನೆಯ ‘ಗಂಗೂಬಾಯಿ..’; ಬಾಕ್ಸ್​ ಆಫೀಸ್​ ಕಲೆಕ್ಷನ್​ನಲ್ಲಿ ಭಾರೀ ಏರಿಕೆ

ಶನಿವಾರ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ 13.32 ಕೋಟಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಗಳಿಕೆ ಮೊದಲ ಎರಡು ದಿನಕ್ಕೆ 23.82 ಕೋಟಿ ರೂಪಾಯಿ ಆಗಿದೆ. ಇಂದು (ಫೆಬ್ರವರಿ 27) ಈ ಚಿತ್ರದ ಕಲೆಕ್ಷನ್​ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ಗೆದ್ದು ಬೀಗಿದ ಆಲಿಯಾ ನಟನೆಯ ‘ಗಂಗೂಬಾಯಿ..’; ಬಾಕ್ಸ್​ ಆಫೀಸ್​ ಕಲೆಕ್ಷನ್​ನಲ್ಲಿ ಭಾರೀ ಏರಿಕೆ
‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ಆಲಿಯಾ ಭಟ್
TV9 Web
| Edited By: |

Updated on:Feb 27, 2022 | 9:19 PM

Share

ಆಲಿಯಾ ಭಟ್ (Alia Bhatt)​ ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ (Gangubai Kathiawadi  Movie) ಗೆದ್ದು ಬೀಗಿದೆ. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾ ಗಳಿಕೆ ವಿಚಾರದಲ್ಲೂ ಹಿಂದೆ ಬಿದ್ದಿಲ್ಲ. ಮೊದಲ ದಿನಕ್ಕೆ ಹೋಲಿಕೆ ಮಾಡಿದರೆ, ಎರಡನೇ ದಿನ ಈ ಸಿನಿಮಾದ ಗಳಿಕೆ ಹೆಚ್ಚಿದೆ. ಈ ಚಿತ್ರದಿಂದ ಆಲಿಯಾ ವೃತ್ತಿ ಜೀವನಕ್ಕೆ ಮತ್ತೊಂದು ಹಿಟ್​ ಸಿಕ್ಕಂತೆ ಆಗಿದೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಶುಕ್ರವಾರ (ಫೆಬ್ರವರಿ 25) ಭಾರತೀಯ ಬಾಕ್ಸ್​ ಆಫೀಸ್​ನಲ್ಲಿ(Gangubai Kathiawadi  Collection)  ಬರೋಬ್ಬರಿ 10 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಶುಕ್ರವಾರವೇ ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರೋಕೆ ಶುರುವಾದವು. ಹೀಗಾಗಿ, ಶನಿವಾರದ (ಫೆಬ್ರವರಿ 26) ಗಳಿಕೆಯಲ್ಲಿ ಏರಿಕೆ ಕಂಡಿದೆ.

ಶನಿವಾರ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ 13.32 ಕೋಟಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾದ ಗಳಿಕೆ ಮೊದಲ ಎರಡು ದಿನಕ್ಕೆ 23.82 ಕೋಟಿ ರೂಪಾಯಿ ಆಗಿದೆ. ಇಂದು (ಫೆಬ್ರವರಿ 27) ಈ ಚಿತ್ರದ ಕಲೆಕ್ಷನ್​ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಇಂದು ಭಾನುವಾರ ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಚಿತ್ರಮಂದಿರದತ್ತ ಬರುತ್ತಾರೆ. ಹೀಗಾಗಿ, ಮೂರು ದಿನದಲ್ಲಿ ಈ ಸಿನಿಮಾ 36-37 ಕೋಟಿ ರೂಪಾಯಿ ಆಗಬಹುದು

ವಿದೇಶದಲ್ಲೂ ಈ ಸಿನಿಮಾ ಕಮಾಲ್​ ಮಾಡುತ್ತಿದೆ. ಆಸ್ಟ್ರೇಲಿಯಾದಲ್ಲಿ ಈ ಸಿನಿಮಾ 1.41 ಕೋಟಿ ರೂಪಾಯಿ ಬಾಚಿಕೊಂಡಿದೆ. ನ್ಯೂಜಿಲೆಂಡ್​ನಲ್ಲಿ 20.87 ಲಕ್ಷ ರೂಪಾಯಿ ಗಳಿಸಿದೆ. ಅಮೆರಿಕದಲ್ಲಿ 2.35 ಕೋಟಿ ಕಮಾಯಿ ಮಾಡಿದೆ. ಈ ಚಿತ್ರ ಒಳ್ಳೆಯ ರೀತಿಯಲ್ಲಿ ಗಳಿಕೆ ಮಾಡುತ್ತಿರುವುದಕ್ಕೆ ಸಿನಿಮಾ ತಂಡ ಖುಷಿ ಪಟ್ಟಿದೆ.

ಆಲಿಯಾಗೆ ಕಂಗನಾ ಮೆಚ್ಚುಗೆ:

ಆಲಿಯಾ ಭಟ್​ ಅವರು ನೆಪೋಟಿಸಂ ಫಲಾಭವಿ ಎಂದು ಕಂಗನಾ ಯಾವಾಗಲೂ ಟೀಕೆ ಮಾಡುತ್ತಾರೆ. ಆ ಕಾರಣಕ್ಕಾಗಿ ಅವರು ಆಲಿಯಾ ನಟನೆಯ ಸಿನಿಮಾಗಳೆಂದರೆ ಮೂಗು ಮುರಿಯುತ್ತಾರೆ. ಆದರೆ ಈ ಬಾರಿ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಗೆ ಜನರಿಂದ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಕಂಗನಾ ಬೆರಗಾಗಿದ್ದಾರೆ. ಹಾಗಾಗಿ ಅವರು ಈ ಚಿತ್ರವನ್ನು ಮನಸಾರೆ ಹೊಗಳಿದ್ದರು. ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದರು.

‘ದಕ್ಷಿಣ ಭಾರತದ ಸಿನಿಮಾಗಳ ದಾಖಲೆಯ ಕಲೆಕ್ಷನ್​ನಿಂದಾಗಿ ಚಿತ್ರಮಂದಿರಗಳಲ್ಲಿ ಮತ್ತೆ ಕಳೆ ಬಂದಿದೆ ಎಂಬುದನ್ನು ಕೇಳಿ ಖುಷಿ ಆಯಿತು. ಸೂಪರ್​ ಸ್ಟಾರ್​ ಡೈರೆಕ್ಟರ್​, ಸ್ಟಾರ್​ ಹೀರೋ ಇರುವ ಒಂದು ಮಹಿಳಾ ಪ್ರಧಾನ ಸಿನಿಮಾದಿಂದ ಹಿಂದಿ ಚಿತ್ರರಂಗ ಕೂಡ ಪುಟ್ಟ ಹೆಜ್ಜೆಗಳನ್ನು ಇಡುತ್ತಿದೆ. ಪುಟ್ಟ ಹೆಜ್ಜೆಗಳೇ ಆಗಿರಬಹುದು, ಆದರೆ ಅವು ಮಹತ್ವವಾದವು. ಕಷ್ಟದ ಪರಿಸ್ಥಿತಿಯಲ್ಲಿ ಇರುವ ಚಿತ್ರಮಂದಿರಗಳಿಗೆ ಈ ಬೆಳವಣಿಗೆ ತುಂಬ ಮುಖ್ಯ. ಗ್ರೇಟ್​! ಇಂಥ ಸಂದರ್ಭದಲ್ಲಿ ಮೂವೀ ಮಾಫಿಯಾದವರು ಒಳ್ಳೆಯ ಕೆಲಸ ಮಾಡ್ತಾರೆ ಅಂಥ ನಾನು ನಿರೀಕ್ಷಿಸಿರಲಿಲ್ಲ. ಅವರು ಒಳ್ಳೆಯದು ಮಾಡಿದಾಗ ನಾನು ಖಂಡಿತಾ ಹೊಗಳುತ್ತೇನೆ. ಇನ್ನೂ ಒಳ್ಳೆಯದನ್ನು ನಿರೀಕ್ಷಿಸುತ್ತೇನೆ’ ಎಂದು ಕಂಗನಾ ರಣಾವತ್​ ಅವರು ಬರೆದುಕೊಂಡಿದ್ದರು.

ಇದನ್ನೂ ಓದಿ: ‘ಬಾಕ್ಸ್​ ಆಫೀಸ್​ನಲ್ಲಿ 200 ಕೋಟಿ ಸುಟ್ಟು ಬೂದಿಯಾಗಲಿದೆ’; ಆಲಿಯಾ ಭಟ್​ ಸಿನಿಮಾ ಬಗ್ಗೆ ಕಂಗನಾ ಟೀಕೆ

ಮುಂದಿನ ವರ್ಷ ಆಲಿಯಾ ಭಟ್ ಜತೆ ಮದುವೆ, ಸುಳಿವು ನೀಡಿದ ರಣಬೀರ್ ಕಪೂರ್

Published On - 9:17 pm, Sun, 27 February 22

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ