AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಹಾಡಿನಲ್ಲಿ ಸಖತ್ ರೊಮ್ಯಾಂಟಿಕ್​ ಆಗಿ ಕಾಣಿಸಿಕೊಂಡ ಆಲಿಯಾ ಭಟ್​; ಆದರೂ ಮಿತಿ ತಪ್ಪದ ನಟಿ

ಸಾಮಾನ್ಯವಾಗಿ ಸಂಜಯ್​ ಲೀಲಾ ಬನ್ಸಾಲಿ ಸಿನಿಮಾದಲ್ಲಿ ಹಾಡಿಗೆ ತುಂಬಾನೇ ಪ್ರಾಮುಖ್ಯತೆ ಇರುತ್ತದೆ. ಈ ಮೊದಲು ಅನೇಕ ಬಾರಿ ಇದು ಸಾಬೀತಾಗಿದೆ. ಈ ಬಾರಿ ಅವರ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದ ಹಾಡುಗಳು ಕೂಡ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಳ್ಳುತ್ತಿವೆ.

ಹೊಸ ಹಾಡಿನಲ್ಲಿ ಸಖತ್ ರೊಮ್ಯಾಂಟಿಕ್​ ಆಗಿ ಕಾಣಿಸಿಕೊಂಡ ಆಲಿಯಾ ಭಟ್​; ಆದರೂ ಮಿತಿ ತಪ್ಪದ ನಟಿ
ಆಲಿಯಾ ಭಟ್
TV9 Web
| Edited By: |

Updated on: Feb 15, 2022 | 4:34 PM

Share

ನಟಿ ಆಲಿಯಾ ಭಟ್​ ಅವರು (Alia Bhatt) ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ (Gangubai Kathiawadi) ಬಿಡುಗಡೆಗಾಗಿ ಕಾದಿದ್ದಾರೆ. ಈ ಚಿತ್ರ ಫೆಬ್ರವರಿ 25ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕೂಡ ಸಾಕಷ್ಟು ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿ ವಲಯದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಆಲಿಯಾ ಭಟ್​ ಪಾತ್ರ ಹೇಗಿದೆ ಎಂಬುದು ಟ್ರೇಲರ್ ಮೂಲಕ ಗೊತ್ತಾಗಿದೆ. ಈಗ ಚಿತ್ರತಂಡದಿಂದ ಒಂದೊಂದಾಗಿ ಹಾಡುಗಳನ್ನು ರಿಲೀಸ್​ ಮಾಡಲಾಗುತ್ತಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ‘ಢೋಲಿಡಾ..’ ಹಾಡು ಜನಪ್ರಿಯತೆ ಪಡೆದುಕೊಂಡಿತ್ತು. ಈ ಹಾಡು 3.2 ಕೋಟಿ ಬಾರಿ ವೀಕ್ಷಣೆ ಕಂಡಿದೆ. ಈಗ ಚಿತ್ರತಂಡದಿಂದ ರೊಮ್ಯಾಂಟಿಕ್ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ರಿಲೀಸ್​ ಆದ ಒಂದು ಗಂಟೆ ಒಳಗೆ ಈ ಹಾಡು ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

‘ಗಲ್ಲಿ ಬಾಯ್​’ ಸೇರಿ ಅನೇಕ ಚಿತ್ರಗಳಲ್ಲಿ ಆಲಿಯಾ ಭಟ್​ ಇಂಟಿಮೇಟ್​ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ರಣವೀರ್​ ಸಿಂಗ್ ಜತೆ ಅವರು ತೆರೆಮೇಲೆ ಕಿಸ್ ಕೂಡ ಮಾಡಿದ್ದರು. ಸಿನಿಮಾದ ಕಥೆ ಆ ರೀತಿಯ ದೃಶ್ಯಗಳನ್ನು ಬೇಡಿದರೆ ಆಲಿಯಾ ಇಂಟಿಮೇಟ್​ ದೃಶ್ಯಗಳಲ್ಲಿ ನಟಿಸೋಕೆ ಯೋಚನೆ ಮಾಡುವುದಿಲ್ಲ. ಈ ಬಾರಿ ಆಲಿಯಾ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ವೇಶ್ಯೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಈ ಚಿತ್ರದ ‘ಜಬ್​ ಸಂಯ್ಯಾ..’ ಹಾಡು ರಿಲೀಸ್ ಆಗಿದೆ.

ಈ ಹಾಡಿನಲ್ಲಿ ಆಲಿಯಾ ಭಟ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಎಲ್ಲಿಯೂ ಕಿಸ್ ಮಾಡಿಲ್ಲ. ಕೇವಲ ಕಣ್ಣಿನ ಮೂಲಕ ಎಲ್ಲ ಭಾವನೆಗಳನ್ನು ಹೊರಹಾಕಿದ್ದಾರೆ. ಈ ಹಾಡು ಈಗ ಎಲ್ಲ ಕಡೆಗಳಲ್ಲಿ ಸದ್ದು ಮಾಡುತ್ತಿದೆ. ಈ ಹಾಡಿಗೆ ಸಂಜಯ್​ ಲೀಲಾ ಬನ್ಸಾಲಿ ಸಂಗೀತ ನಿರ್ದೇಶನ ಮಾಡಿದ್ದಾರೆ.

ಸಾಮಾನ್ಯವಾಗಿ ಸಂಜಯ್​ ಲೀಲಾ ಬನ್ಸಾಲಿ ಸಿನಿಮಾದಲ್ಲಿ ಹಾಡಿಗೆ ತುಂಬಾನೇ ಪ್ರಾಮುಖ್ಯತೆ ಇರುತ್ತದೆ. ಈ ಮೊದಲು ಅನೇಕ ಬಾರಿ ಇದು ಸಾಬೀತಾಗಿದೆ. ಈ ಬಾರಿ ಅವರ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದ ಹಾಡುಗಳು ಕೂಡ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಳ್ಳುತ್ತಿವೆ. ಇದರಿಂದ ಸಿನಿಮಾದ ಮೈಲೇಜ್​ ಹೆಚ್ಚುವ ಎಲ್ಲಾ ಸಾಧ್ಯತೆಗಳಿವೆ.

ಅಸಮಾಧಾನ ಹೊರಹಾಕಿದ್ದ ಕಂಗನಾ 

ಕಿಯಾರಾ ಖನ್ನಾ ಎಂಬ ಬಾಲಕಿ ನೋಡೋಕೆ ಆಲಿಯಾ ಭಟ್​ ರೀತಿಯಲ್ಲಿದ್ದಾಳೆ. ಅವಳದ್ದು ಇನ್ನೂ ಚಿಕ್ಕ ವಯಸ್ಸು. ಆಲಿಯಾ ಭಟ್​ ಹಂಚಿಕೊಂಡ ವಿಡಿಯೋ ಒಂದಕ್ಕೆ ರೀಲ್ಸ್ ಮಾಡಿದ್ದಾಳೆ. ಅಷ್ಟೇ ಅಲ್ಲ, ಈ ದೃಶ್ಯದಲ್ಲಿ ಆಲಿಯಾ ಬಾಯಿಗೆ ಬೀಡಿ ಇಟ್ಟಂತೆ ಇವಳು ಕೂಡ ಬಾಯಿಗೆ ಬೀಡಿ ಇಟ್ಟುಕೊಂಡಿದ್ದಾಳೆ. ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ. ಅನೇಕರು ವಿಡಿಯೋಗೆ ಮೆಚ್ಚುಗೆ ಸೂಚಿಸಿದ್ದರು. ಆದರೆ, ಈ ಬಗ್ಗೆ ಕಂಗನಾ ಅಸಮಾಧಾನ ಹೊರಹಾಕಿದ್ದರು.

ಗಂಗೂಬಾಯಿ ವೇಶ್ಯೆ ಆಗಿರುತ್ತಾಳೆ. ನಂತರ ಅವರು ಕಾಮಾಟಿಪುರದ ಡಾನ್​ ಆಗಿ ಬೆಳೆಯುತ್ತಾಳೆ. ಇದೇ ಕಥೆ ಆಧರಿಸಿ ಸಿನಿಮಾ ಮಾಡಲಾಗಿದೆ. ಈ ರೀತಿಯ ಕಥೆಯುಳ್ಳ ಸಿನಿಮಾಗಳ ಡೈಲಾಗ್​ಗಳನ್ನು ಬಾಲಕಿ ಕಿಯಾರಾ ಕಾಪಿ ಮಾಡಿರುವುದಕ್ಕೆ ಕಂಗನಾ ಅಸಮಾಧಾನ ಹೊರಹಾಕಿದ್ದರು.  ‘ಚಿಕ್ಕ ಮಕ್ಕಳು ಬಾಯಲ್ಲಿ ಬೀಡಿ ಇಟ್ಟುಕೊಂಡು, ವೇಶ್ಯೆ ಪಾತ್ರವನ್ನು ಅನುಕರಣೆ ಮಾಡುವುದು ಎಷ್ಟು ಸರಿ? ಇಷ್ಟು ಸಣ್ಣ ವಯಸ್ಸಿಗೆ ಅವಳ ಮನಸ್ಸಿನಲ್ಲಿ ಈ ರೀತಿ ವಿಚಾರ ತುಂಬುವುದು ಸರಿಯೇ? ಹಲವು ಚಿಕ್ಕಮಕ್ಕಳು ಇವರನ್ನೇ ಹಿಂಬಾಲಿಸುತ್ತಿರುತ್ತಾರೆ’ ಎಂದು ಕಂಗನಾ ಆತಂಕ ಹೊರ ಹಾಕಿದ್ದರು. ಈ ಪೋಸ್ಟ್​​ಅನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿಗೆ ಟ್ಯಾಗ್ ಮಾಡಿದ್ದರು.

ಇದನ್ನೂ ಓದಿ: Samantha: ಸಮಂತಾ ಜತೆ ಆ್ಯಕ್ಷನ್ ಚಿತ್ರದಲ್ಲಿ ನಟಿಸಬೇಕು; ಆಲಿಯಾ ಭಟ್​ಗೆ ಹೀಗೊಂದು ಆಸೆ

ಬಾಲಿವುಡ್​ನ​ ಈ ಹೀರೋ ಈಗಲೂ ನನ್ನನ್ನು ಮಗುವಿನಂತೆ ಕಾಣುತ್ತಾರೆ ಎಂದ ಆಲಿಯಾ ಭಟ್​

Follow Us
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?