AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಏರಿಕೆ ಮಧ್ಯೆಯೇ ಅಕ್ಷಯ್​ ಕುಮಾರ್​ ಮಾಡಿದ್ರು ಅತಿ ದೊಡ್ಡ ಸಹಾಯ; ಗೌತಮ್​ ಗಂಭೀರ್​ ಮೆಚ್ಚುಗೆ

ಗೌತಮ್​ ಗಂಭೀರ್​ ಅವರ ಫೌಂಡೇಷನ್​ಗೆ ನಟ ಅಕ್ಷಯ್​ ಕುಮಾರ್​ ಒಂದು ಕೋಟಿ ರೂಪಾಯಿ ನೀಡಿದ್ದಾರೆ. ಈ ಹಣವನ್ನು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವಂತೆ ಅಕ್ಷಯ್​ ಕೋರಿದ್ದಾರೆ.

ಕೊರೊನಾ ಏರಿಕೆ ಮಧ್ಯೆಯೇ ಅಕ್ಷಯ್​ ಕುಮಾರ್​ ಮಾಡಿದ್ರು ಅತಿ ದೊಡ್ಡ ಸಹಾಯ; ಗೌತಮ್​ ಗಂಭೀರ್​ ಮೆಚ್ಚುಗೆ
ಅಕ್ಷಯ್​ ಕುಮಾರ್-ಗೌತಮ್ ಗಂಭೀರ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 25, 2021 | 4:09 PM

Share

ದೇಶದಲ್ಲಿ ಕೊರೊನಾ ಮಿತಿಮೀರಿ ಏರಿಕೆ ಕಾಣುತ್ತಿದೆ. ಇದರ ನಿಯಂತ್ರಣಕ್ಕೆ ಸರ್ಕಾರಗಳು ಸಾಕಷ್ಟು ಪ್ರಯತ್ನ ಪಡುತ್ತಿವೆ. ಇನ್ನು ಅನೇಕ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಿಲಿಂಡರ್​ಗಳ ಕೊರತೆ ಎದ್ದು ಕಾಣುತ್ತಿದೆ. ಈ ಮಧ್ಯೆ ನಟ ಅಕ್ಷಯ್​ ಕುಮಾರ್​ ಬಹುದೊಡ್ಡ ಸಹಾಯ ಮಾಡಿದ್ದಾರೆ. ಇದಕ್ಕೆ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್​ ಗಂಭೀರ್​ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಟ ಅಕ್ಷಯ್​ ಕುಮಾರ್​ ಗೌತಮ್​ ಗಂಭೀರ್​ ಅವರ ಫೌಂಡೇಷನ್​ಗೆ ಒಂದು ಕೋಟಿ ರೂಪಾಯಿ ಹಣವನ್ನು ನೀಡಿದ್ದಾರೆ. ಈ ಹಣವನ್ನು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವಂತೆ ಅಕ್ಷಯ್​ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಗೌತಮ್​ ಗಂಭೀರ್​, ಪ್ರತಿ ಸಹಾಯವೂ ಭರವಸೆ ಮೂಡಿಸುತ್ತದೆ. ಆಹಾರ, ಔಷಧ ಹಾಗೂ ಆಮ್ಲಜನಕ ಪೂರೈಕೆಗೆ ಜಿಜಿಎಫ್​ಗೆ ಒಂದು ಕೋಟಿ ರೂ. ದಾನ ಮಾಡಿದ್ದಕ್ಕೆ ಧನ್ಯವಾದಗಳು. ದೇವರು ಒಳ್ಳೆಯದು ಮಾಡಲಿ ಎಂದಿದ್ದಾರೆ.

ಇದಕ್ಕೆ ಉತ್ತರಿಸಿರುವ ಅಕ್ಷಯ್​ ಕುಮಾರ್​, ಇದು ತುಂಬಾನೇ ಕಷ್ಟದ ಸಮಯ. ನಾನು ಸಹಾಯ ಮಾಡುತ್ತಿರುವುದಕ್ಕೆ ಖುಷಿ ಇದೆ. ಈ ಸಂಕಷ್ಟ ಆದಷ್ಟು ಬೇಗ ಕೊನೆಯಾಗಲಿ ಎಂದು ಆಶಿಸೋಣ ಎಂದಿದ್ದಾರೆ.

ಇತ್ತೀಚೆಗೆ ನಟ ಅಕ್ಷಯ್​ ಕುಮಾರ್ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿರುವ ವಿಚಾರ ಖಚಿತವಾಗಿತ್ತು. ಇದನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಜತೆಗೆ ಅವರು ಕ್ವಾರಂಟೈನ್​ ಆಗಿದ್ದರು. ನಂತರ ಅಕ್ಷಯ್​ ಏಕಾಏಕಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನಗಳ ನಂತರ ಅವರು ಕೊರಾನಾದಿಂದ ಅವರು ಗುಣಮುಖರಾಗಿದ್ದರು.

ರಾಷ್ಟ್ರ ರಾಜಧಾನಿಯ ಹಲವು ಆಸ್ಪತ್ರೆಗಳು ವೈದ್ಯಕೀಯ ಆಮ್ಲಜನಕ ಅಭಾವದಿಂದ ಕಂಗೆಟ್ಟಿವೆ. ಈಗಾಗಲೇ ಎರಡು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಟ್ಟಿದ್ದಾರೆ. ಈ ಮಧ್ಯೆ ಕೆಲವು ಆಸ್ಪತ್ರೆಗಳು ಹೈಕೋರ್ಟ್ ಮೆಟ್ಟಿಲೇರಿದ್ದು, ತಮ್ಮ ಸಮಸ್ಯೆಗಳಿಗೆ ಪರಿಹಾರ ಕೊಡುವಂತೆ ಮನವಿ ಮಾಡಿದ್ದಾರೆ. ಅದರ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್, ಆಮ್ಲಜನಕ ಪೂರೈಕೆಗೆ ಅಡ್ಡಿಯಾಗುತ್ತಿರುವವರನ್ನು ನೇಣಿಗೇರಿಸುತ್ತೇವೆ ಎಂದು ಖಡಕ್​ ವಾರ್ನಿಂಗ್ ಮಾಡಿದೆ. ಈಗ ಅಕ್ಷಯ್​ ಕೊಟ್ಟಿರುವ ಒಂದು ಕೋಟಿ ರೂಪಾಯಿ ಸಹಾಯದಿಂದ ದೆಹಲಿಯ ಒಂದಷ್ಟು ಜನರಿಗೆ ಸಹಾಯವಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: IPL 2021: ರೋಹಿತ್, ವಿರಾಟ್, ಡಿವಿಲಿಯರ್ಸ್ ಆಟವನ್ನು ನೋಡಿ ಸಂಜು ಸ್ಯಾಮ್ಸನ್ ಕಲಿಯಬೇಕಿದ್ದು ಸಾಕಷ್ಟಿದೆ; ಗೌತಮ್ ಗಂಭೀರ್

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ