AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಏರಿಕೆ ಮಧ್ಯೆಯೇ ಅಕ್ಷಯ್​ ಕುಮಾರ್​ ಮಾಡಿದ್ರು ಅತಿ ದೊಡ್ಡ ಸಹಾಯ; ಗೌತಮ್​ ಗಂಭೀರ್​ ಮೆಚ್ಚುಗೆ

ಗೌತಮ್​ ಗಂಭೀರ್​ ಅವರ ಫೌಂಡೇಷನ್​ಗೆ ನಟ ಅಕ್ಷಯ್​ ಕುಮಾರ್​ ಒಂದು ಕೋಟಿ ರೂಪಾಯಿ ನೀಡಿದ್ದಾರೆ. ಈ ಹಣವನ್ನು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವಂತೆ ಅಕ್ಷಯ್​ ಕೋರಿದ್ದಾರೆ.

ಕೊರೊನಾ ಏರಿಕೆ ಮಧ್ಯೆಯೇ ಅಕ್ಷಯ್​ ಕುಮಾರ್​ ಮಾಡಿದ್ರು ಅತಿ ದೊಡ್ಡ ಸಹಾಯ; ಗೌತಮ್​ ಗಂಭೀರ್​ ಮೆಚ್ಚುಗೆ
ಅಕ್ಷಯ್​ ಕುಮಾರ್-ಗೌತಮ್ ಗಂಭೀರ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 25, 2021 | 4:09 PM

Share

ದೇಶದಲ್ಲಿ ಕೊರೊನಾ ಮಿತಿಮೀರಿ ಏರಿಕೆ ಕಾಣುತ್ತಿದೆ. ಇದರ ನಿಯಂತ್ರಣಕ್ಕೆ ಸರ್ಕಾರಗಳು ಸಾಕಷ್ಟು ಪ್ರಯತ್ನ ಪಡುತ್ತಿವೆ. ಇನ್ನು ಅನೇಕ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಿಲಿಂಡರ್​ಗಳ ಕೊರತೆ ಎದ್ದು ಕಾಣುತ್ತಿದೆ. ಈ ಮಧ್ಯೆ ನಟ ಅಕ್ಷಯ್​ ಕುಮಾರ್​ ಬಹುದೊಡ್ಡ ಸಹಾಯ ಮಾಡಿದ್ದಾರೆ. ಇದಕ್ಕೆ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್​ ಗಂಭೀರ್​ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಟ ಅಕ್ಷಯ್​ ಕುಮಾರ್​ ಗೌತಮ್​ ಗಂಭೀರ್​ ಅವರ ಫೌಂಡೇಷನ್​ಗೆ ಒಂದು ಕೋಟಿ ರೂಪಾಯಿ ಹಣವನ್ನು ನೀಡಿದ್ದಾರೆ. ಈ ಹಣವನ್ನು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವಂತೆ ಅಕ್ಷಯ್​ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಗೌತಮ್​ ಗಂಭೀರ್​, ಪ್ರತಿ ಸಹಾಯವೂ ಭರವಸೆ ಮೂಡಿಸುತ್ತದೆ. ಆಹಾರ, ಔಷಧ ಹಾಗೂ ಆಮ್ಲಜನಕ ಪೂರೈಕೆಗೆ ಜಿಜಿಎಫ್​ಗೆ ಒಂದು ಕೋಟಿ ರೂ. ದಾನ ಮಾಡಿದ್ದಕ್ಕೆ ಧನ್ಯವಾದಗಳು. ದೇವರು ಒಳ್ಳೆಯದು ಮಾಡಲಿ ಎಂದಿದ್ದಾರೆ.

ಇದಕ್ಕೆ ಉತ್ತರಿಸಿರುವ ಅಕ್ಷಯ್​ ಕುಮಾರ್​, ಇದು ತುಂಬಾನೇ ಕಷ್ಟದ ಸಮಯ. ನಾನು ಸಹಾಯ ಮಾಡುತ್ತಿರುವುದಕ್ಕೆ ಖುಷಿ ಇದೆ. ಈ ಸಂಕಷ್ಟ ಆದಷ್ಟು ಬೇಗ ಕೊನೆಯಾಗಲಿ ಎಂದು ಆಶಿಸೋಣ ಎಂದಿದ್ದಾರೆ.

ಇತ್ತೀಚೆಗೆ ನಟ ಅಕ್ಷಯ್​ ಕುಮಾರ್ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿರುವ ವಿಚಾರ ಖಚಿತವಾಗಿತ್ತು. ಇದನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಜತೆಗೆ ಅವರು ಕ್ವಾರಂಟೈನ್​ ಆಗಿದ್ದರು. ನಂತರ ಅಕ್ಷಯ್​ ಏಕಾಏಕಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನಗಳ ನಂತರ ಅವರು ಕೊರಾನಾದಿಂದ ಅವರು ಗುಣಮುಖರಾಗಿದ್ದರು.

ರಾಷ್ಟ್ರ ರಾಜಧಾನಿಯ ಹಲವು ಆಸ್ಪತ್ರೆಗಳು ವೈದ್ಯಕೀಯ ಆಮ್ಲಜನಕ ಅಭಾವದಿಂದ ಕಂಗೆಟ್ಟಿವೆ. ಈಗಾಗಲೇ ಎರಡು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಟ್ಟಿದ್ದಾರೆ. ಈ ಮಧ್ಯೆ ಕೆಲವು ಆಸ್ಪತ್ರೆಗಳು ಹೈಕೋರ್ಟ್ ಮೆಟ್ಟಿಲೇರಿದ್ದು, ತಮ್ಮ ಸಮಸ್ಯೆಗಳಿಗೆ ಪರಿಹಾರ ಕೊಡುವಂತೆ ಮನವಿ ಮಾಡಿದ್ದಾರೆ. ಅದರ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್, ಆಮ್ಲಜನಕ ಪೂರೈಕೆಗೆ ಅಡ್ಡಿಯಾಗುತ್ತಿರುವವರನ್ನು ನೇಣಿಗೇರಿಸುತ್ತೇವೆ ಎಂದು ಖಡಕ್​ ವಾರ್ನಿಂಗ್ ಮಾಡಿದೆ. ಈಗ ಅಕ್ಷಯ್​ ಕೊಟ್ಟಿರುವ ಒಂದು ಕೋಟಿ ರೂಪಾಯಿ ಸಹಾಯದಿಂದ ದೆಹಲಿಯ ಒಂದಷ್ಟು ಜನರಿಗೆ ಸಹಾಯವಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: IPL 2021: ರೋಹಿತ್, ವಿರಾಟ್, ಡಿವಿಲಿಯರ್ಸ್ ಆಟವನ್ನು ನೋಡಿ ಸಂಜು ಸ್ಯಾಮ್ಸನ್ ಕಲಿಯಬೇಕಿದ್ದು ಸಾಕಷ್ಟಿದೆ; ಗೌತಮ್ ಗಂಭೀರ್

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?