ಕೊರೊನಾ ಏರಿಕೆ ಮಧ್ಯೆಯೇ ಅಕ್ಷಯ್​ ಕುಮಾರ್​ ಮಾಡಿದ್ರು ಅತಿ ದೊಡ್ಡ ಸಹಾಯ; ಗೌತಮ್​ ಗಂಭೀರ್​ ಮೆಚ್ಚುಗೆ

ಗೌತಮ್​ ಗಂಭೀರ್​ ಅವರ ಫೌಂಡೇಷನ್​ಗೆ ನಟ ಅಕ್ಷಯ್​ ಕುಮಾರ್​ ಒಂದು ಕೋಟಿ ರೂಪಾಯಿ ನೀಡಿದ್ದಾರೆ. ಈ ಹಣವನ್ನು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವಂತೆ ಅಕ್ಷಯ್​ ಕೋರಿದ್ದಾರೆ.

ಕೊರೊನಾ ಏರಿಕೆ ಮಧ್ಯೆಯೇ ಅಕ್ಷಯ್​ ಕುಮಾರ್​ ಮಾಡಿದ್ರು ಅತಿ ದೊಡ್ಡ ಸಹಾಯ; ಗೌತಮ್​ ಗಂಭೀರ್​ ಮೆಚ್ಚುಗೆ
ಅಕ್ಷಯ್​ ಕುಮಾರ್-ಗೌತಮ್ ಗಂಭೀರ್​
Edited By:

Updated on: Apr 25, 2021 | 4:09 PM

ದೇಶದಲ್ಲಿ ಕೊರೊನಾ ಮಿತಿಮೀರಿ ಏರಿಕೆ ಕಾಣುತ್ತಿದೆ. ಇದರ ನಿಯಂತ್ರಣಕ್ಕೆ ಸರ್ಕಾರಗಳು ಸಾಕಷ್ಟು ಪ್ರಯತ್ನ ಪಡುತ್ತಿವೆ. ಇನ್ನು ಅನೇಕ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಿಲಿಂಡರ್​ಗಳ ಕೊರತೆ ಎದ್ದು ಕಾಣುತ್ತಿದೆ. ಈ ಮಧ್ಯೆ ನಟ ಅಕ್ಷಯ್​ ಕುಮಾರ್​ ಬಹುದೊಡ್ಡ ಸಹಾಯ ಮಾಡಿದ್ದಾರೆ. ಇದಕ್ಕೆ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್​ ಗಂಭೀರ್​ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಟ ಅಕ್ಷಯ್​ ಕುಮಾರ್​ ಗೌತಮ್​ ಗಂಭೀರ್​ ಅವರ ಫೌಂಡೇಷನ್​ಗೆ ಒಂದು ಕೋಟಿ ರೂಪಾಯಿ ಹಣವನ್ನು ನೀಡಿದ್ದಾರೆ. ಈ ಹಣವನ್ನು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವಂತೆ ಅಕ್ಷಯ್​ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಗೌತಮ್​ ಗಂಭೀರ್​, ಪ್ರತಿ ಸಹಾಯವೂ ಭರವಸೆ ಮೂಡಿಸುತ್ತದೆ. ಆಹಾರ, ಔಷಧ ಹಾಗೂ ಆಮ್ಲಜನಕ ಪೂರೈಕೆಗೆ ಜಿಜಿಎಫ್​ಗೆ ಒಂದು ಕೋಟಿ ರೂ. ದಾನ ಮಾಡಿದ್ದಕ್ಕೆ ಧನ್ಯವಾದಗಳು. ದೇವರು ಒಳ್ಳೆಯದು ಮಾಡಲಿ ಎಂದಿದ್ದಾರೆ.

ಇದಕ್ಕೆ ಉತ್ತರಿಸಿರುವ ಅಕ್ಷಯ್​ ಕುಮಾರ್​, ಇದು ತುಂಬಾನೇ ಕಷ್ಟದ ಸಮಯ. ನಾನು ಸಹಾಯ ಮಾಡುತ್ತಿರುವುದಕ್ಕೆ ಖುಷಿ ಇದೆ. ಈ ಸಂಕಷ್ಟ ಆದಷ್ಟು ಬೇಗ ಕೊನೆಯಾಗಲಿ ಎಂದು ಆಶಿಸೋಣ ಎಂದಿದ್ದಾರೆ.

ಇತ್ತೀಚೆಗೆ ನಟ ಅಕ್ಷಯ್​ ಕುಮಾರ್ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿರುವ ವಿಚಾರ ಖಚಿತವಾಗಿತ್ತು. ಇದನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಜತೆಗೆ ಅವರು ಕ್ವಾರಂಟೈನ್​ ಆಗಿದ್ದರು. ನಂತರ ಅಕ್ಷಯ್​ ಏಕಾಏಕಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನಗಳ ನಂತರ ಅವರು ಕೊರಾನಾದಿಂದ ಅವರು ಗುಣಮುಖರಾಗಿದ್ದರು.

ರಾಷ್ಟ್ರ ರಾಜಧಾನಿಯ ಹಲವು ಆಸ್ಪತ್ರೆಗಳು ವೈದ್ಯಕೀಯ ಆಮ್ಲಜನಕ ಅಭಾವದಿಂದ ಕಂಗೆಟ್ಟಿವೆ. ಈಗಾಗಲೇ ಎರಡು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಟ್ಟಿದ್ದಾರೆ. ಈ ಮಧ್ಯೆ ಕೆಲವು ಆಸ್ಪತ್ರೆಗಳು ಹೈಕೋರ್ಟ್ ಮೆಟ್ಟಿಲೇರಿದ್ದು, ತಮ್ಮ ಸಮಸ್ಯೆಗಳಿಗೆ ಪರಿಹಾರ ಕೊಡುವಂತೆ ಮನವಿ ಮಾಡಿದ್ದಾರೆ. ಅದರ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್, ಆಮ್ಲಜನಕ ಪೂರೈಕೆಗೆ ಅಡ್ಡಿಯಾಗುತ್ತಿರುವವರನ್ನು ನೇಣಿಗೇರಿಸುತ್ತೇವೆ ಎಂದು ಖಡಕ್​ ವಾರ್ನಿಂಗ್ ಮಾಡಿದೆ. ಈಗ ಅಕ್ಷಯ್​ ಕೊಟ್ಟಿರುವ ಒಂದು ಕೋಟಿ ರೂಪಾಯಿ ಸಹಾಯದಿಂದ ದೆಹಲಿಯ ಒಂದಷ್ಟು ಜನರಿಗೆ ಸಹಾಯವಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: IPL 2021: ರೋಹಿತ್, ವಿರಾಟ್, ಡಿವಿಲಿಯರ್ಸ್ ಆಟವನ್ನು ನೋಡಿ ಸಂಜು ಸ್ಯಾಮ್ಸನ್ ಕಲಿಯಬೇಕಿದ್ದು ಸಾಕಷ್ಟಿದೆ; ಗೌತಮ್ ಗಂಭೀರ್

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us