AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳದಿಂದ ಬೇಸತ್ತ ನಟಿ; ಪ್ಯಾನಿಕ್ ಅಟ್ಯಾಕ್​​ನಿಂದ ಕಂಗಾಲು

ನಟಿ ಗಾಯತ್ರಿ ಗುಪ್ತಾ ತೀವ್ರ ಮಾನಸಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸಾಯಿ ಪಲ್ಲವಿ ಸ್ನೇಹಿತೆಯಾಗಿ ಗುರುತಿಸಿಕೊಂಡ ಇವರು, ಇತ್ತೀಚೆಗೆ ವಿಡಿಯೋ ಹಂಚಿಕೊಂಡು, ಪ್ಯಾನಿಕ್ ಅಟ್ಯಾಕ್ ಹಾಗೂ ಆತ್ಮಹತ್ಯೆಯ ಆಲೋಚನೆಗಳಿಂದ ಬಳಲುತ್ತಿರುವುದಾಗಿ ಆತಂಕ ವ್ಯಕ್ತಪಡಿಸಿದ್ದಾರೆ. ಹಿಂದೆ ಎದುರಿಸಿದ ಲೈಂಗಿಕ ಕಿರುಕುಳವೇ ಇದಕ್ಕೆ ಕಾರಣವೆಂದು ಹೇಳಿದ್ದು, ಚಿಕಿತ್ಸೆ ಪಡೆಯಲು ಪ್ರಯತ್ನಿಸುತ್ತಿದ್ದರೂ ಪ್ರಯೋಜನವಾಗಿಲ್ಲ ಎಂದಿದ್ದಾರೆ. ತಕ್ಷಣದ ಸಹಾಯಕ್ಕಾಗಿ ಅವರು ಮೊರೆ ಇಟ್ಟಿದ್ದಾರೆ.

ಲೈಂಗಿಕ ಕಿರುಕುಳದಿಂದ ಬೇಸತ್ತ ನಟಿ; ಪ್ಯಾನಿಕ್ ಅಟ್ಯಾಕ್​​ನಿಂದ ಕಂಗಾಲು
ಗಾಯತ್ರಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 23, 2026 | 7:45 AM

Share

ನಿರ್ದೇಶಕ ಶೇಖರ್ ಕಮ್ಮುಲ ಅವರ ‘ಫಿದಾ’ ಚಿತ್ರದಲ್ಲಿ ಸಾಯಿ ಪಲ್ಲವಿ (Sai Palavi) ಸ್ನೇಹಿತೆಯಾಗಿ ನಟಿಸುವ ಮೂಲಕ ಗಾಯತ್ರಿ ಗುಪ್ತಾ ಗುರುತಿಸಿಕೊಂಡರು. ಇದರೊಂದಿಗೆ ‘ಕೊಬ್ಬರ್ ಮಟ್ಟಾ’, ‘ಐಸ್ ಕ್ರೀಮ್’, ‘ಅಮರ್ ಅಕ್ಬರ್ ಆಂಟನಿ’, ‘ಬುರ್ರಕಥಾ’ ಮತ್ತು ‘ಸೀತಾ ಆನ್ ದಿ ರೋಡ್’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಸಿನಿಮಾಗಳಲ್ಲದೆ ತಮ್ಮ ದಿಟ್ಟ ಹೇಳಿಕೆ ಮತ್ತು ನಿರ್ಮಾಪಕರಿಂದ ಎದುರಿಸಿದ ಲೈಂಗಿಕ ಕಿರುಕುಳದ ಕುರಿತಾದ ಸಂವೇದನಾಶೀಲ ಹೇಳಿಕೆಗಳಿಂದಲೂ ಅವರು ಸದಾ ಸುದ್ದಿಯಲ್ಲಿದ್ದಾರೆ. ಈಗ ಅವರು ಸಂಕಷ್ಟದಲ್ಲಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದ ಗಾಯತ್ರಿ, ತಾವು ತೀವ್ರ ಪ್ಯಾನಿಕ್ ಅಟ್ಯಾಕ್ ಮತ್ತು ಆತ್ಮಹತ್ಯೆಯ ಆಲೋಚನೆಗಳಿಂದ ಬಳಲುತ್ತಿರುವುದಾಗಿ ಆತಂಕ ವ್ಯಕ್ತಪಡಿಸಿದ್ದರು. ಲೈಂಗಿಕ ದೌರ್ಜನ್ಯದಿಂದಾಗಿ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದು, ಜೀವನದಲ್ಲಿ ಏನು ನಡೆಯುತ್ತಿದೆ ಎಂದು ಅರ್ಥವಾಗುತ್ತಿಲ್ಲ ಎಂದಿದ್ದಾರೆ. ಚಿಕಿತ್ಸೆ ಪಡೆಯಲು ಪ್ರಯತ್ನಿಸುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅವರು ಅಳಲು ತೋಡಿಕೊಂಡಿದ್ದರು.

ಸಹಾಯಕ್ಕಾಗಿ ‘ವಾಯ್ಸ್ ಆಫ್ ವುಮೆನ್’ ಸಂಸ್ಥೆಯನ್ನು ಸಂಪರ್ಕಿಸಿದರೂ ಸ್ಪಂದನೆ ಸಿಗಲಿಲ್ಲ ಎಂದು ಗಾಯತ್ರಿ ಹೇಳಿದ್ದಾರೆ. ಸಾಯುವ ಆಲೋಚನೆಯಿಂದ ಹೊರಬರಲು ತಮಗೆ ಯಾರಾದರೂ ಬೆಂಬಲ ನೀಡುವವರ ಅಗತ್ಯವಿದೆ ಎಂದಿರುವ ಅವರು, ಈ ಪರಿಸ್ಥಿತಿಯಿಂದ ಹೊರಬರಲು ತಮಗೆ ವಕೀಲರ ಸಹಾಯ ಬೇಕೇ ಅಥವಾ ಚಿಕಿತ್ಸಕರ ಅಗತ್ಯವಿದೆಯೇ ಎಂಬ ಗೊಂದಲದಲ್ಲಿದ್ದಾರೆ.

ಇದನ್ನೂ ಓದಿ: ಧನುಷ್ ಮುಂದಿನ ಚಿತ್ರದಲ್ಲಿ ಸಾಯಿ ಪಲ್ಲವಿ ಪೊಲೀಸ್ ಅಧಿಕಾರಿ? ವೈರಲ್ ಆಗ್ತಿದೆ ‘ಡಿ55’ ಅಪ್‌ಡೇಟ್

‘ಸರಿಯಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ತಕ್ಷಣದ ಸಹಾಯದ ಅಗತ್ಯವಿದೆ’ ಎಂದು ಅವರು ವಿಡಿಯೋದಲ್ಲಿ ತಿಳಿಸಿದ್ದಾರೆ. ‘ನಟಿಸುವವರೆಲ್ಲರೂ ಕೇವಲ ನಾಟಕ ಆಡುತ್ತಾರೆ, ಆದರೆ ವಾಸ್ತವದಲ್ಲಿ ಯಾರೂ ಕಾಳಜಿ ವಹಿಸುವುದಿಲ್ಲ’ ಎಂದು ಬೇಸರ ಹೊರಹಾಕಿದ್ದಾರೆ. ಸದ್ಯ, ಈ ವಿಡಿಯೋವನ್ನು ಪೋಸ್ಟ್ ಮಾಡಿದ ಕೆಲವೇ ಸಮಯದ ನಂತರ ಗಾಯತ್ರಿ ಅದನ್ನು ಡಿಲೀಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್