AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳದಿಂದ ಬೇಸತ್ತ ನಟಿ; ಪ್ಯಾನಿಕ್ ಅಟ್ಯಾಕ್​​ನಿಂದ ಕಂಗಾಲು

ನಟಿ ಗಾಯತ್ರಿ ಗುಪ್ತಾ ತೀವ್ರ ಮಾನಸಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸಾಯಿ ಪಲ್ಲವಿ ಸ್ನೇಹಿತೆಯಾಗಿ ಗುರುತಿಸಿಕೊಂಡ ಇವರು, ಇತ್ತೀಚೆಗೆ ವಿಡಿಯೋ ಹಂಚಿಕೊಂಡು, ಪ್ಯಾನಿಕ್ ಅಟ್ಯಾಕ್ ಹಾಗೂ ಆತ್ಮಹತ್ಯೆಯ ಆಲೋಚನೆಗಳಿಂದ ಬಳಲುತ್ತಿರುವುದಾಗಿ ಆತಂಕ ವ್ಯಕ್ತಪಡಿಸಿದ್ದಾರೆ. ಹಿಂದೆ ಎದುರಿಸಿದ ಲೈಂಗಿಕ ಕಿರುಕುಳವೇ ಇದಕ್ಕೆ ಕಾರಣವೆಂದು ಹೇಳಿದ್ದು, ಚಿಕಿತ್ಸೆ ಪಡೆಯಲು ಪ್ರಯತ್ನಿಸುತ್ತಿದ್ದರೂ ಪ್ರಯೋಜನವಾಗಿಲ್ಲ ಎಂದಿದ್ದಾರೆ. ತಕ್ಷಣದ ಸಹಾಯಕ್ಕಾಗಿ ಅವರು ಮೊರೆ ಇಟ್ಟಿದ್ದಾರೆ.

ಲೈಂಗಿಕ ಕಿರುಕುಳದಿಂದ ಬೇಸತ್ತ ನಟಿ; ಪ್ಯಾನಿಕ್ ಅಟ್ಯಾಕ್​​ನಿಂದ ಕಂಗಾಲು
ಗಾಯತ್ರಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 23, 2026 | 7:45 AM

Share

ನಿರ್ದೇಶಕ ಶೇಖರ್ ಕಮ್ಮುಲ ಅವರ ‘ಫಿದಾ’ ಚಿತ್ರದಲ್ಲಿ ಸಾಯಿ ಪಲ್ಲವಿ (Sai Palavi) ಸ್ನೇಹಿತೆಯಾಗಿ ನಟಿಸುವ ಮೂಲಕ ಗಾಯತ್ರಿ ಗುಪ್ತಾ ಗುರುತಿಸಿಕೊಂಡರು. ಇದರೊಂದಿಗೆ ‘ಕೊಬ್ಬರ್ ಮಟ್ಟಾ’, ‘ಐಸ್ ಕ್ರೀಮ್’, ‘ಅಮರ್ ಅಕ್ಬರ್ ಆಂಟನಿ’, ‘ಬುರ್ರಕಥಾ’ ಮತ್ತು ‘ಸೀತಾ ಆನ್ ದಿ ರೋಡ್’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಸಿನಿಮಾಗಳಲ್ಲದೆ ತಮ್ಮ ದಿಟ್ಟ ಹೇಳಿಕೆ ಮತ್ತು ನಿರ್ಮಾಪಕರಿಂದ ಎದುರಿಸಿದ ಲೈಂಗಿಕ ಕಿರುಕುಳದ ಕುರಿತಾದ ಸಂವೇದನಾಶೀಲ ಹೇಳಿಕೆಗಳಿಂದಲೂ ಅವರು ಸದಾ ಸುದ್ದಿಯಲ್ಲಿದ್ದಾರೆ. ಈಗ ಅವರು ಸಂಕಷ್ಟದಲ್ಲಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದ ಗಾಯತ್ರಿ, ತಾವು ತೀವ್ರ ಪ್ಯಾನಿಕ್ ಅಟ್ಯಾಕ್ ಮತ್ತು ಆತ್ಮಹತ್ಯೆಯ ಆಲೋಚನೆಗಳಿಂದ ಬಳಲುತ್ತಿರುವುದಾಗಿ ಆತಂಕ ವ್ಯಕ್ತಪಡಿಸಿದ್ದರು. ಲೈಂಗಿಕ ದೌರ್ಜನ್ಯದಿಂದಾಗಿ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದು, ಜೀವನದಲ್ಲಿ ಏನು ನಡೆಯುತ್ತಿದೆ ಎಂದು ಅರ್ಥವಾಗುತ್ತಿಲ್ಲ ಎಂದಿದ್ದಾರೆ. ಚಿಕಿತ್ಸೆ ಪಡೆಯಲು ಪ್ರಯತ್ನಿಸುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅವರು ಅಳಲು ತೋಡಿಕೊಂಡಿದ್ದರು.

ಸಹಾಯಕ್ಕಾಗಿ ‘ವಾಯ್ಸ್ ಆಫ್ ವುಮೆನ್’ ಸಂಸ್ಥೆಯನ್ನು ಸಂಪರ್ಕಿಸಿದರೂ ಸ್ಪಂದನೆ ಸಿಗಲಿಲ್ಲ ಎಂದು ಗಾಯತ್ರಿ ಹೇಳಿದ್ದಾರೆ. ಸಾಯುವ ಆಲೋಚನೆಯಿಂದ ಹೊರಬರಲು ತಮಗೆ ಯಾರಾದರೂ ಬೆಂಬಲ ನೀಡುವವರ ಅಗತ್ಯವಿದೆ ಎಂದಿರುವ ಅವರು, ಈ ಪರಿಸ್ಥಿತಿಯಿಂದ ಹೊರಬರಲು ತಮಗೆ ವಕೀಲರ ಸಹಾಯ ಬೇಕೇ ಅಥವಾ ಚಿಕಿತ್ಸಕರ ಅಗತ್ಯವಿದೆಯೇ ಎಂಬ ಗೊಂದಲದಲ್ಲಿದ್ದಾರೆ.

ಇದನ್ನೂ ಓದಿ: ಧನುಷ್ ಮುಂದಿನ ಚಿತ್ರದಲ್ಲಿ ಸಾಯಿ ಪಲ್ಲವಿ ಪೊಲೀಸ್ ಅಧಿಕಾರಿ? ವೈರಲ್ ಆಗ್ತಿದೆ ‘ಡಿ55’ ಅಪ್‌ಡೇಟ್

‘ಸರಿಯಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ತಕ್ಷಣದ ಸಹಾಯದ ಅಗತ್ಯವಿದೆ’ ಎಂದು ಅವರು ವಿಡಿಯೋದಲ್ಲಿ ತಿಳಿಸಿದ್ದಾರೆ. ‘ನಟಿಸುವವರೆಲ್ಲರೂ ಕೇವಲ ನಾಟಕ ಆಡುತ್ತಾರೆ, ಆದರೆ ವಾಸ್ತವದಲ್ಲಿ ಯಾರೂ ಕಾಳಜಿ ವಹಿಸುವುದಿಲ್ಲ’ ಎಂದು ಬೇಸರ ಹೊರಹಾಕಿದ್ದಾರೆ. ಸದ್ಯ, ಈ ವಿಡಿಯೋವನ್ನು ಪೋಸ್ಟ್ ಮಾಡಿದ ಕೆಲವೇ ಸಮಯದ ನಂತರ ಗಾಯತ್ರಿ ಅದನ್ನು ಡಿಲೀಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು