AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಲ್ಲಿ ಗೀತಾಗೆ ಲವ್​ ಆಗಿದ್ದು ಯಾರ ಮೇಲೆ? ಮನೆ ಬಿಟ್ಟು ಹೋಗುವಾಗ ಕಿಚ್ಚನ ಎದುರು ರಟ್ಟಾಯ್ತು ಗುಟ್ಟು

ಮೂರನೇ ವಾರದ ನಾಮಿನೇಷನ್​ ಪಟ್ಟಿಯಲ್ಲಿ ಶಮಂತ್​ ಬ್ರೋ ಗೌಡ, ನಿಧಿ ಸುಬ್ಬಯ್ಯ, ಗೀತಾ ಭಾರತಿ ಭಟ್​, ರಘು ಗೌಡ, ಅರವಿಂದ್ ಕೆ.ಪಿ., ವಿಶ್ವನಾಥ್​, ದಿವ್ಯಾ ಉರುಡುಗ, ದಿವ್ಯಾ ಸುರೇಶ್, ಪ್ರಶಾಂತ್​ ಸಂಬರಗಿ ಇದ್ದರು. 9 ಸ್ಪರ್ಧಿಗಳ ಪೈಕಿ ಗೀತಾ ಕಡಿಮೆ ಮತ ಪಡೆದಿದ್ದರಿಂದ ಮನೆಯಿಂದ ಹೊರ ಬಂದರು.

ಬಿಗ್​ ಬಾಸ್​ನಲ್ಲಿ ಗೀತಾಗೆ ಲವ್​ ಆಗಿದ್ದು ಯಾರ ಮೇಲೆ? ಮನೆ ಬಿಟ್ಟು ಹೋಗುವಾಗ ಕಿಚ್ಚನ ಎದುರು ರಟ್ಟಾಯ್ತು ಗುಟ್ಟು
ಗೀತಾ
Follow us
ರಾಜೇಶ್ ದುಗ್ಗುಮನೆ
|

Updated on: Mar 22, 2021 | 4:14 PM

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಭಾನುವಾರ (ಮಾರ್ಚ್​​21)‘ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್ ಅವರು ಮನೆಯಿಂದ ಹೊರ ಬಿದ್ದಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಅವರು ಪ್ರೀತಿ-ಪ್ರೇಮದ ವಿಚಾರದಲ್ಲಿ ದೂರವೇ ಉಳಿದಿದ್ದರು. ಎಂದಿಗೂ ಯಾರ ಮೇಲೂ ಪ್ರೀತಿ ಆಗಿದೆ ಎಂದು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿಲ್ಲ. ಆದರೆ, ಈಗ ಅಚ್ಚರಿ ಎಂಬಂತೆ ಕಿಚ್ಚನ ಎದುರು ಪ್ರೀತಿ ವಿಚಾರ ಬಿಚ್ಚಿಟ್ಟಿದ್ದಾರೆ. ಮೂರನೇ ವಾರದ ನಾಮಿನೇಷನ್​ ಪಟ್ಟಿಯಲ್ಲಿ ಶಮಂತ್​ ಬ್ರೋ ಗೌಡ, ನಿಧಿ ಸುಬ್ಬಯ್ಯ, ಗೀತಾ ಭಾರತಿ ಭಟ್​, ರಘು ಗೌಡ, ಅರವಿಂದ್ ಕೆ.ಪಿ., ವಿಶ್ವನಾಥ್​, ದಿವ್ಯಾ ಉರುಡುಗ, ದಿವ್ಯಾ ಸುರೇಶ್, ಪ್ರಶಾಂತ್​ ಸಂಬರಗಿ ಇದ್ದರು. 9 ಸ್ಪರ್ಧಿಗಳ ಪೈಕಿ ಗೀತಾ ಕಡಿಮೆ ಮತ ಪಡೆದಿದ್ದರಿಂದ ಮನೆಯಿಂದ ಹೊರ ಬಂದರು.

ಮುಂದಿನ ವಾರ ಶಮಂತ್​ ಬ್ರೋ ಗೌಡ ಔಟ್​ ಆಗುತ್ತಾರೆ ಮತ್ತು ಫಿನಾಲೆಯಲ್ಲಿ ಮಂಜು ಪಾವಗಡ ವಿನ್​ ಆಗುತ್ತಾರೆ ಎಂದು ಗೀತಾ ಕಿಚ್ಚ ಸುದೀಪ್​ ಎದುರು ಭವಿಷ್ಯ ನುಡಿದರು. ಇದೇ ವೇಳೆ ಅವರು ತಮ್ಮ ಪ್ರೀತಿ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ನನಗೆ ಬಿಗ್​ ಬಾಸ್​ ಮನೆಯಲ್ಲಿ ಪ್ರೀತಿ ಅಂತ ಆಗಿದ್ದು ಅದು ಬಿಗ್​ ಬಾಸ್​ ಧ್ವನಿ ಮೇಲೆ. ಅದನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಅವರ ಈ ಹೇಳಿಕೆ ಅಚ್ಚರಿ ಮೂಡಿಸಿದೆ.

ಟಾಸ್ಕ್​ ವಿಚಾರದಲ್ಲಿ ಗೀತಾ ಆಗಾಗ ಹಿನ್ನಡೆ ಅನುಭವಿಸುತ್ತಿದ್ದರು. ಅಲ್ಲದೆ, ಮೊಸಳೆ ಕಣ್ಣೀರು ಹಾಕುತ್ತಾರೆ ಎಂಬ ಆರೋಪ ಕೂಡ ಅವರ ಮೇಲಿತ್ತು. ಚಿಕ್ಕ ಚಿಕ್ಕ ವಿಚಾರಗಳಿಗೂ ಗೀತಾ ಎಮೋಷನಲ್ ಆಗುತ್ತಾರೆ. ಕ್ಷಣಾರ್ಧದಲ್ಲೇ ಕಣ್ಣೀರು ಸುರಿಸುತ್ತಾರೆ. ಒಂದು ರೀತಿಯಲ್ಲಿ ಭಾವನಾತ್ಮಕವಾಗಿ ಎಲ್ಲರನ್ನೂ ಮೋಸಗೊಳಿಸಲು ಅವರು ಪ್ರಯತ್ನಿಸುತ್ತಾರೆ ಎನ್ನಲಾಗುತ್ತಿತ್ತು. ಮನೆಯೊಳಗಿನ ಯಾರಿಗೂ ಅವರ ಈ ಬುದ್ಧಿ ಹಿಡಿಸಲಿಲ್ಲ. ಅಲ್ಲದೆ, ಟಾಸ್ಕ್​ ವಿಚಾರದಲ್ಲಿಯೂ ಅವರು ಹಿಂದೆ ಬೀಳುತ್ತಿದ್ದರು. ಜನರನ್ನು ಎಂಟರ್​ಟೇನ್​ ಮಾಡುವುದರಲ್ಲಿ ಗೀತಾ ಹಿನ್ನಡೆ ಸಾಧಿಸಿದರು. ಹೀಗಾಗಿ, ಅವರು ಮನೆಯಿಂದ ಹೊರ ಬಿದ್ದಿದ್ದಾರೆ. ಸದ್ಯ 14 ಸ್ಪರ್ಧಿಗಳ ನಡುವೆ ಬಿಗ್​ ಬಾಸ್​ ಹಣಾಹಣಿ ಮುಂದುವರಿದಿದೆ.

ಇದನ್ನೂ ಓದಿ: Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ

ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ