AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಲ್ಲಿ ಗೀತಾಗೆ ಲವ್​ ಆಗಿದ್ದು ಯಾರ ಮೇಲೆ? ಮನೆ ಬಿಟ್ಟು ಹೋಗುವಾಗ ಕಿಚ್ಚನ ಎದುರು ರಟ್ಟಾಯ್ತು ಗುಟ್ಟು

ಮೂರನೇ ವಾರದ ನಾಮಿನೇಷನ್​ ಪಟ್ಟಿಯಲ್ಲಿ ಶಮಂತ್​ ಬ್ರೋ ಗೌಡ, ನಿಧಿ ಸುಬ್ಬಯ್ಯ, ಗೀತಾ ಭಾರತಿ ಭಟ್​, ರಘು ಗೌಡ, ಅರವಿಂದ್ ಕೆ.ಪಿ., ವಿಶ್ವನಾಥ್​, ದಿವ್ಯಾ ಉರುಡುಗ, ದಿವ್ಯಾ ಸುರೇಶ್, ಪ್ರಶಾಂತ್​ ಸಂಬರಗಿ ಇದ್ದರು. 9 ಸ್ಪರ್ಧಿಗಳ ಪೈಕಿ ಗೀತಾ ಕಡಿಮೆ ಮತ ಪಡೆದಿದ್ದರಿಂದ ಮನೆಯಿಂದ ಹೊರ ಬಂದರು.

ಬಿಗ್​ ಬಾಸ್​ನಲ್ಲಿ ಗೀತಾಗೆ ಲವ್​ ಆಗಿದ್ದು ಯಾರ ಮೇಲೆ? ಮನೆ ಬಿಟ್ಟು ಹೋಗುವಾಗ ಕಿಚ್ಚನ ಎದುರು ರಟ್ಟಾಯ್ತು ಗುಟ್ಟು
ಗೀತಾ
ರಾಜೇಶ್ ದುಗ್ಗುಮನೆ
|

Updated on: Mar 22, 2021 | 4:14 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಭಾನುವಾರ (ಮಾರ್ಚ್​​21)‘ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್ ಅವರು ಮನೆಯಿಂದ ಹೊರ ಬಿದ್ದಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಅವರು ಪ್ರೀತಿ-ಪ್ರೇಮದ ವಿಚಾರದಲ್ಲಿ ದೂರವೇ ಉಳಿದಿದ್ದರು. ಎಂದಿಗೂ ಯಾರ ಮೇಲೂ ಪ್ರೀತಿ ಆಗಿದೆ ಎಂದು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿಲ್ಲ. ಆದರೆ, ಈಗ ಅಚ್ಚರಿ ಎಂಬಂತೆ ಕಿಚ್ಚನ ಎದುರು ಪ್ರೀತಿ ವಿಚಾರ ಬಿಚ್ಚಿಟ್ಟಿದ್ದಾರೆ. ಮೂರನೇ ವಾರದ ನಾಮಿನೇಷನ್​ ಪಟ್ಟಿಯಲ್ಲಿ ಶಮಂತ್​ ಬ್ರೋ ಗೌಡ, ನಿಧಿ ಸುಬ್ಬಯ್ಯ, ಗೀತಾ ಭಾರತಿ ಭಟ್​, ರಘು ಗೌಡ, ಅರವಿಂದ್ ಕೆ.ಪಿ., ವಿಶ್ವನಾಥ್​, ದಿವ್ಯಾ ಉರುಡುಗ, ದಿವ್ಯಾ ಸುರೇಶ್, ಪ್ರಶಾಂತ್​ ಸಂಬರಗಿ ಇದ್ದರು. 9 ಸ್ಪರ್ಧಿಗಳ ಪೈಕಿ ಗೀತಾ ಕಡಿಮೆ ಮತ ಪಡೆದಿದ್ದರಿಂದ ಮನೆಯಿಂದ ಹೊರ ಬಂದರು.

ಮುಂದಿನ ವಾರ ಶಮಂತ್​ ಬ್ರೋ ಗೌಡ ಔಟ್​ ಆಗುತ್ತಾರೆ ಮತ್ತು ಫಿನಾಲೆಯಲ್ಲಿ ಮಂಜು ಪಾವಗಡ ವಿನ್​ ಆಗುತ್ತಾರೆ ಎಂದು ಗೀತಾ ಕಿಚ್ಚ ಸುದೀಪ್​ ಎದುರು ಭವಿಷ್ಯ ನುಡಿದರು. ಇದೇ ವೇಳೆ ಅವರು ತಮ್ಮ ಪ್ರೀತಿ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ನನಗೆ ಬಿಗ್​ ಬಾಸ್​ ಮನೆಯಲ್ಲಿ ಪ್ರೀತಿ ಅಂತ ಆಗಿದ್ದು ಅದು ಬಿಗ್​ ಬಾಸ್​ ಧ್ವನಿ ಮೇಲೆ. ಅದನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಅವರ ಈ ಹೇಳಿಕೆ ಅಚ್ಚರಿ ಮೂಡಿಸಿದೆ.

ಟಾಸ್ಕ್​ ವಿಚಾರದಲ್ಲಿ ಗೀತಾ ಆಗಾಗ ಹಿನ್ನಡೆ ಅನುಭವಿಸುತ್ತಿದ್ದರು. ಅಲ್ಲದೆ, ಮೊಸಳೆ ಕಣ್ಣೀರು ಹಾಕುತ್ತಾರೆ ಎಂಬ ಆರೋಪ ಕೂಡ ಅವರ ಮೇಲಿತ್ತು. ಚಿಕ್ಕ ಚಿಕ್ಕ ವಿಚಾರಗಳಿಗೂ ಗೀತಾ ಎಮೋಷನಲ್ ಆಗುತ್ತಾರೆ. ಕ್ಷಣಾರ್ಧದಲ್ಲೇ ಕಣ್ಣೀರು ಸುರಿಸುತ್ತಾರೆ. ಒಂದು ರೀತಿಯಲ್ಲಿ ಭಾವನಾತ್ಮಕವಾಗಿ ಎಲ್ಲರನ್ನೂ ಮೋಸಗೊಳಿಸಲು ಅವರು ಪ್ರಯತ್ನಿಸುತ್ತಾರೆ ಎನ್ನಲಾಗುತ್ತಿತ್ತು. ಮನೆಯೊಳಗಿನ ಯಾರಿಗೂ ಅವರ ಈ ಬುದ್ಧಿ ಹಿಡಿಸಲಿಲ್ಲ. ಅಲ್ಲದೆ, ಟಾಸ್ಕ್​ ವಿಚಾರದಲ್ಲಿಯೂ ಅವರು ಹಿಂದೆ ಬೀಳುತ್ತಿದ್ದರು. ಜನರನ್ನು ಎಂಟರ್​ಟೇನ್​ ಮಾಡುವುದರಲ್ಲಿ ಗೀತಾ ಹಿನ್ನಡೆ ಸಾಧಿಸಿದರು. ಹೀಗಾಗಿ, ಅವರು ಮನೆಯಿಂದ ಹೊರ ಬಿದ್ದಿದ್ದಾರೆ. ಸದ್ಯ 14 ಸ್ಪರ್ಧಿಗಳ ನಡುವೆ ಬಿಗ್​ ಬಾಸ್​ ಹಣಾಹಣಿ ಮುಂದುವರಿದಿದೆ.

ಇದನ್ನೂ ಓದಿ: Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್