AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಲ್ಲಿ ಗೀತಾಗೆ ಲವ್​ ಆಗಿದ್ದು ಯಾರ ಮೇಲೆ? ಮನೆ ಬಿಟ್ಟು ಹೋಗುವಾಗ ಕಿಚ್ಚನ ಎದುರು ರಟ್ಟಾಯ್ತು ಗುಟ್ಟು

ಮೂರನೇ ವಾರದ ನಾಮಿನೇಷನ್​ ಪಟ್ಟಿಯಲ್ಲಿ ಶಮಂತ್​ ಬ್ರೋ ಗೌಡ, ನಿಧಿ ಸುಬ್ಬಯ್ಯ, ಗೀತಾ ಭಾರತಿ ಭಟ್​, ರಘು ಗೌಡ, ಅರವಿಂದ್ ಕೆ.ಪಿ., ವಿಶ್ವನಾಥ್​, ದಿವ್ಯಾ ಉರುಡುಗ, ದಿವ್ಯಾ ಸುರೇಶ್, ಪ್ರಶಾಂತ್​ ಸಂಬರಗಿ ಇದ್ದರು. 9 ಸ್ಪರ್ಧಿಗಳ ಪೈಕಿ ಗೀತಾ ಕಡಿಮೆ ಮತ ಪಡೆದಿದ್ದರಿಂದ ಮನೆಯಿಂದ ಹೊರ ಬಂದರು.

ಬಿಗ್​ ಬಾಸ್​ನಲ್ಲಿ ಗೀತಾಗೆ ಲವ್​ ಆಗಿದ್ದು ಯಾರ ಮೇಲೆ? ಮನೆ ಬಿಟ್ಟು ಹೋಗುವಾಗ ಕಿಚ್ಚನ ಎದುರು ರಟ್ಟಾಯ್ತು ಗುಟ್ಟು
ಗೀತಾ
ರಾಜೇಶ್ ದುಗ್ಗುಮನೆ
|

Updated on: Mar 22, 2021 | 4:14 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಭಾನುವಾರ (ಮಾರ್ಚ್​​21)‘ಬ್ರಹ್ಮಗಂಟು’ ಧಾರಾವಾಹಿ ನಟಿ ಗೀತಾ ಭಾರತಿ ಭಟ್ ಅವರು ಮನೆಯಿಂದ ಹೊರ ಬಿದ್ದಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಅವರು ಪ್ರೀತಿ-ಪ್ರೇಮದ ವಿಚಾರದಲ್ಲಿ ದೂರವೇ ಉಳಿದಿದ್ದರು. ಎಂದಿಗೂ ಯಾರ ಮೇಲೂ ಪ್ರೀತಿ ಆಗಿದೆ ಎಂದು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿಲ್ಲ. ಆದರೆ, ಈಗ ಅಚ್ಚರಿ ಎಂಬಂತೆ ಕಿಚ್ಚನ ಎದುರು ಪ್ರೀತಿ ವಿಚಾರ ಬಿಚ್ಚಿಟ್ಟಿದ್ದಾರೆ. ಮೂರನೇ ವಾರದ ನಾಮಿನೇಷನ್​ ಪಟ್ಟಿಯಲ್ಲಿ ಶಮಂತ್​ ಬ್ರೋ ಗೌಡ, ನಿಧಿ ಸುಬ್ಬಯ್ಯ, ಗೀತಾ ಭಾರತಿ ಭಟ್​, ರಘು ಗೌಡ, ಅರವಿಂದ್ ಕೆ.ಪಿ., ವಿಶ್ವನಾಥ್​, ದಿವ್ಯಾ ಉರುಡುಗ, ದಿವ್ಯಾ ಸುರೇಶ್, ಪ್ರಶಾಂತ್​ ಸಂಬರಗಿ ಇದ್ದರು. 9 ಸ್ಪರ್ಧಿಗಳ ಪೈಕಿ ಗೀತಾ ಕಡಿಮೆ ಮತ ಪಡೆದಿದ್ದರಿಂದ ಮನೆಯಿಂದ ಹೊರ ಬಂದರು.

ಮುಂದಿನ ವಾರ ಶಮಂತ್​ ಬ್ರೋ ಗೌಡ ಔಟ್​ ಆಗುತ್ತಾರೆ ಮತ್ತು ಫಿನಾಲೆಯಲ್ಲಿ ಮಂಜು ಪಾವಗಡ ವಿನ್​ ಆಗುತ್ತಾರೆ ಎಂದು ಗೀತಾ ಕಿಚ್ಚ ಸುದೀಪ್​ ಎದುರು ಭವಿಷ್ಯ ನುಡಿದರು. ಇದೇ ವೇಳೆ ಅವರು ತಮ್ಮ ಪ್ರೀತಿ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ನನಗೆ ಬಿಗ್​ ಬಾಸ್​ ಮನೆಯಲ್ಲಿ ಪ್ರೀತಿ ಅಂತ ಆಗಿದ್ದು ಅದು ಬಿಗ್​ ಬಾಸ್​ ಧ್ವನಿ ಮೇಲೆ. ಅದನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಅವರ ಈ ಹೇಳಿಕೆ ಅಚ್ಚರಿ ಮೂಡಿಸಿದೆ.

ಟಾಸ್ಕ್​ ವಿಚಾರದಲ್ಲಿ ಗೀತಾ ಆಗಾಗ ಹಿನ್ನಡೆ ಅನುಭವಿಸುತ್ತಿದ್ದರು. ಅಲ್ಲದೆ, ಮೊಸಳೆ ಕಣ್ಣೀರು ಹಾಕುತ್ತಾರೆ ಎಂಬ ಆರೋಪ ಕೂಡ ಅವರ ಮೇಲಿತ್ತು. ಚಿಕ್ಕ ಚಿಕ್ಕ ವಿಚಾರಗಳಿಗೂ ಗೀತಾ ಎಮೋಷನಲ್ ಆಗುತ್ತಾರೆ. ಕ್ಷಣಾರ್ಧದಲ್ಲೇ ಕಣ್ಣೀರು ಸುರಿಸುತ್ತಾರೆ. ಒಂದು ರೀತಿಯಲ್ಲಿ ಭಾವನಾತ್ಮಕವಾಗಿ ಎಲ್ಲರನ್ನೂ ಮೋಸಗೊಳಿಸಲು ಅವರು ಪ್ರಯತ್ನಿಸುತ್ತಾರೆ ಎನ್ನಲಾಗುತ್ತಿತ್ತು. ಮನೆಯೊಳಗಿನ ಯಾರಿಗೂ ಅವರ ಈ ಬುದ್ಧಿ ಹಿಡಿಸಲಿಲ್ಲ. ಅಲ್ಲದೆ, ಟಾಸ್ಕ್​ ವಿಚಾರದಲ್ಲಿಯೂ ಅವರು ಹಿಂದೆ ಬೀಳುತ್ತಿದ್ದರು. ಜನರನ್ನು ಎಂಟರ್​ಟೇನ್​ ಮಾಡುವುದರಲ್ಲಿ ಗೀತಾ ಹಿನ್ನಡೆ ಸಾಧಿಸಿದರು. ಹೀಗಾಗಿ, ಅವರು ಮನೆಯಿಂದ ಹೊರ ಬಿದ್ದಿದ್ದಾರೆ. ಸದ್ಯ 14 ಸ್ಪರ್ಧಿಗಳ ನಡುವೆ ಬಿಗ್​ ಬಾಸ್​ ಹಣಾಹಣಿ ಮುಂದುವರಿದಿದೆ.

ಇದನ್ನೂ ಓದಿ: Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ