AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Genelia Deshmukh: ಮತ್ತೆ ಕಂಬ್ಯಾಕ್​ ಮಾಡೋಕೆ ಜೆನಿಲಿಯಾ ರೆಡಿ; ಪತಿ ರಿತೇಶ್​​​ ಏನಂದ್ರು?

Genelia D'Souza: ಜೆನಿಲಿಯಾ ಎರಡು ಮಕ್ಕಳ ತಾಯಿ ಆದರೂ ಅವರು ಫಿಟ್​ನೆಸ್​ ಕಳೆದುಕೊಂಡಿಲ್ಲ. ನಿತ್ಯ ಜಿಮ್​ ಮಾಡುತ್ತಾರೆ. ಈ ಮೂಲಕ ತಮ್ಮ ಫಿಟ್​ನೆಸ್​ ಕಾಯ್ದುಕೊಂಡಿದ್ದಾರೆ.

Genelia Deshmukh: ಮತ್ತೆ ಕಂಬ್ಯಾಕ್​ ಮಾಡೋಕೆ ಜೆನಿಲಿಯಾ ರೆಡಿ; ಪತಿ ರಿತೇಶ್​​​ ಏನಂದ್ರು?
ಪತಿ ರಿತೇಶ್​ ಜತೆ ಜೆನೆಲಿಯಾ
ರಾಜೇಶ್ ದುಗ್ಗುಮನೆ
| Edited By: |

Updated on:May 07, 2021 | 9:22 AM

Share

ನಟಿ ಜೆನಿಲಿಯಾ ಡಿಸೋಜಾ 2012ರಲ್ಲಿ ಬಾಲಿವುಡ್​ ನಟ ರಿತೇಶ್​​ ದೇಶಮುಖ್​ ಅವರನ್ನು ಮದುವೆ ಆಗಿದ್ದರು. ಅದಾದ ನಂತರ ಅವರು ಕೆಲವೇ ಕೆಲವು ಚಿತ್ರಗಳಲ್ಲಿ ಅತಿಥಿ ಪಾತ್ರ ಮಾಡಿದ್ದು ಬಿಟ್ಟರೆ ಮತ್ತಾವುದೇ ಚಿತ್ರಗಳಲ್ಲಿ ಜೆನಿಲಿಯಾ ಬಣ್ಣ ಹಚ್ಚಿಲ್ಲ. ಈಗ ಅವರು ಕಂಬ್ಯಾಕ್​ ಮಾಡೋಕೆ ರೆಡಿ ಆಗಿದ್ದಾರೆ! ಈ ವಿಚಾರ ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ.

ಜೆನಿಲಿಯಾ ಮದುವೆ ಆಗಿ ಸುಮಾರು 9 ವರ್ಷ ಕಳೆದಿದೆ. ಜೆನಿಲಿಯಾ ಹಾಗೂ ರಿತೇಶ್​ ಜೋಡಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಜೆನಿಲಿಯಾ ಹಾಗೂ ರಿತೇಶ್​ ಸಾಕಷ್ಟು ​ ವಿಡಿಯೋಗಳನ್ನು ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಿದೆ. ಈಗ ಅವರು ಸಿನಿಮಾ ಕ್ಷೇತ್ರದಲ್ಲಿ ಸೆಕೆಂಡ್​ ಇನ್ನಿಂಗ್ಸ್​ ಪ್ರಾರಂಭಿಸೋಕೆ ರೆಡಿ ಆಗಿದ್ದಾರೆ.

ಜೆನಿಲಿಯಾ ಚಿತ್ರರಂಗಕ್ಕೆ ಮರಳಬೇಕು ಎನ್ನುವ ಹಂಬಲವನ್ನು ಪತಿ ರಿತೇಶ್​ ಬಳಿ ವ್ಯಕ್ತಪಡಿಸಿದ್ದಳು. ಇದಕ್ಕೆ ರಿತೇಶ್​ ಕೂಡ ಒಕೆ ಎಂದಿದ್ದಾರೆ. ಹೀಗಾಗಿ ಉತ್ತಮ ಕಥೆ ಸಿಕ್ಕರೆ ಅವರು ಮತ್ತೆ ನಟನೆಗೆ ಕಂಬ್ಯಾಕ್​ ಮಾಡಲಿದ್ದಾರೆ.

ನಟಿ ಜೆನಿಲಿಯಾ ಹಿಂದಿ ಮಾತ್ರವಲ್ಲ ದಕ್ಷಿಣ ಭಾರತದಲ್ಲೂ ನಟಿಸಿದ್ದಾರೆ. ತೆಲುಗು ಚಿತ್ರರಂಗ ಅವರ ಸಿನೆಮಾ ಕೆರಿಯರ್​ಗೆ ದೊಡ್ಡ ಬ್ರೇಕ್​ ನೀಡಿತ್ತು. ಹೀಗಾಗಿ, ಈಗ ಅವರು ಹಿಂದಿ ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಕಂಬ್ಯಾಕ್​ ಮಾಡುತ್ತಾರೋ ಅಥವಾ ತೆಲುಗು ಚಿತ್ರರಂಗದ ಮೂಲಕವೋ ಎನ್ನುವುದನ್ನು ಕಾದು ನೋಡಬೇಕಿದೆ.

ಜೆನಿಲಿಯಾ ಎರಡು ಮಕ್ಕಳ ತಾಯಿ ಆದರೂ ಅವರು ಫಿಟ್​ನೆಸ್​ ಕಳೆದುಕೊಂಡಿಲ್ಲ. ನಿತ್ಯ ಜಿಮ್​ ಮಾಡುತ್ತಾರೆ. ಈ ಮೂಲಕ ತಮ್ಮ ಫಿಟ್​ನೆಸ್​ ಕಾಯ್ದುಕೊಂಡಿದ್ದಾರೆ. ಹೀಗಾಗಿ, ಅವರು ಚಿತ್ರರಂಗಕ್ಕೆ ಮರಳೋಕೆ ಸಾಕಷ್ಟು ಉತ್ಸುಕರಾಗಿದ್ದಾರಂತೆ.

ಇದನ್ನೂ ಓದಿ: ನಟ ಕಿಚ್ಚ ಸುದೀಪ್ ಮನೆಯಲ್ಲಿ ಭೋಜನ ಸವಿದ ಬಾಲಿವುಡ್ ಕ್ಯೂಟ್ ಕಪಲ್

Published On - 7:44 pm, Thu, 6 May 21

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ