AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Genelia Deshmukh: ಮತ್ತೆ ಕಂಬ್ಯಾಕ್​ ಮಾಡೋಕೆ ಜೆನಿಲಿಯಾ ರೆಡಿ; ಪತಿ ರಿತೇಶ್​​​ ಏನಂದ್ರು?

Genelia D'Souza: ಜೆನಿಲಿಯಾ ಎರಡು ಮಕ್ಕಳ ತಾಯಿ ಆದರೂ ಅವರು ಫಿಟ್​ನೆಸ್​ ಕಳೆದುಕೊಂಡಿಲ್ಲ. ನಿತ್ಯ ಜಿಮ್​ ಮಾಡುತ್ತಾರೆ. ಈ ಮೂಲಕ ತಮ್ಮ ಫಿಟ್​ನೆಸ್​ ಕಾಯ್ದುಕೊಂಡಿದ್ದಾರೆ.

Genelia Deshmukh: ಮತ್ತೆ ಕಂಬ್ಯಾಕ್​ ಮಾಡೋಕೆ ಜೆನಿಲಿಯಾ ರೆಡಿ; ಪತಿ ರಿತೇಶ್​​​ ಏನಂದ್ರು?
ಪತಿ ರಿತೇಶ್​ ಜತೆ ಜೆನೆಲಿಯಾ
ರಾಜೇಶ್ ದುಗ್ಗುಮನೆ
| Edited By: |

Updated on:May 07, 2021 | 9:22 AM

Share

ನಟಿ ಜೆನಿಲಿಯಾ ಡಿಸೋಜಾ 2012ರಲ್ಲಿ ಬಾಲಿವುಡ್​ ನಟ ರಿತೇಶ್​​ ದೇಶಮುಖ್​ ಅವರನ್ನು ಮದುವೆ ಆಗಿದ್ದರು. ಅದಾದ ನಂತರ ಅವರು ಕೆಲವೇ ಕೆಲವು ಚಿತ್ರಗಳಲ್ಲಿ ಅತಿಥಿ ಪಾತ್ರ ಮಾಡಿದ್ದು ಬಿಟ್ಟರೆ ಮತ್ತಾವುದೇ ಚಿತ್ರಗಳಲ್ಲಿ ಜೆನಿಲಿಯಾ ಬಣ್ಣ ಹಚ್ಚಿಲ್ಲ. ಈಗ ಅವರು ಕಂಬ್ಯಾಕ್​ ಮಾಡೋಕೆ ರೆಡಿ ಆಗಿದ್ದಾರೆ! ಈ ವಿಚಾರ ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ.

ಜೆನಿಲಿಯಾ ಮದುವೆ ಆಗಿ ಸುಮಾರು 9 ವರ್ಷ ಕಳೆದಿದೆ. ಜೆನಿಲಿಯಾ ಹಾಗೂ ರಿತೇಶ್​ ಜೋಡಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಜೆನಿಲಿಯಾ ಹಾಗೂ ರಿತೇಶ್​ ಸಾಕಷ್ಟು ​ ವಿಡಿಯೋಗಳನ್ನು ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಿದೆ. ಈಗ ಅವರು ಸಿನಿಮಾ ಕ್ಷೇತ್ರದಲ್ಲಿ ಸೆಕೆಂಡ್​ ಇನ್ನಿಂಗ್ಸ್​ ಪ್ರಾರಂಭಿಸೋಕೆ ರೆಡಿ ಆಗಿದ್ದಾರೆ.

ಜೆನಿಲಿಯಾ ಚಿತ್ರರಂಗಕ್ಕೆ ಮರಳಬೇಕು ಎನ್ನುವ ಹಂಬಲವನ್ನು ಪತಿ ರಿತೇಶ್​ ಬಳಿ ವ್ಯಕ್ತಪಡಿಸಿದ್ದಳು. ಇದಕ್ಕೆ ರಿತೇಶ್​ ಕೂಡ ಒಕೆ ಎಂದಿದ್ದಾರೆ. ಹೀಗಾಗಿ ಉತ್ತಮ ಕಥೆ ಸಿಕ್ಕರೆ ಅವರು ಮತ್ತೆ ನಟನೆಗೆ ಕಂಬ್ಯಾಕ್​ ಮಾಡಲಿದ್ದಾರೆ.

ನಟಿ ಜೆನಿಲಿಯಾ ಹಿಂದಿ ಮಾತ್ರವಲ್ಲ ದಕ್ಷಿಣ ಭಾರತದಲ್ಲೂ ನಟಿಸಿದ್ದಾರೆ. ತೆಲುಗು ಚಿತ್ರರಂಗ ಅವರ ಸಿನೆಮಾ ಕೆರಿಯರ್​ಗೆ ದೊಡ್ಡ ಬ್ರೇಕ್​ ನೀಡಿತ್ತು. ಹೀಗಾಗಿ, ಈಗ ಅವರು ಹಿಂದಿ ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಕಂಬ್ಯಾಕ್​ ಮಾಡುತ್ತಾರೋ ಅಥವಾ ತೆಲುಗು ಚಿತ್ರರಂಗದ ಮೂಲಕವೋ ಎನ್ನುವುದನ್ನು ಕಾದು ನೋಡಬೇಕಿದೆ.

ಜೆನಿಲಿಯಾ ಎರಡು ಮಕ್ಕಳ ತಾಯಿ ಆದರೂ ಅವರು ಫಿಟ್​ನೆಸ್​ ಕಳೆದುಕೊಂಡಿಲ್ಲ. ನಿತ್ಯ ಜಿಮ್​ ಮಾಡುತ್ತಾರೆ. ಈ ಮೂಲಕ ತಮ್ಮ ಫಿಟ್​ನೆಸ್​ ಕಾಯ್ದುಕೊಂಡಿದ್ದಾರೆ. ಹೀಗಾಗಿ, ಅವರು ಚಿತ್ರರಂಗಕ್ಕೆ ಮರಳೋಕೆ ಸಾಕಷ್ಟು ಉತ್ಸುಕರಾಗಿದ್ದಾರಂತೆ.

ಇದನ್ನೂ ಓದಿ: ನಟ ಕಿಚ್ಚ ಸುದೀಪ್ ಮನೆಯಲ್ಲಿ ಭೋಜನ ಸವಿದ ಬಾಲಿವುಡ್ ಕ್ಯೂಟ್ ಕಪಲ್

Published On - 7:44 pm, Thu, 6 May 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ