AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆನಿಲಿಯಾ ಡಿಸೋಜಾ ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದು ಯಾವ ನಟನಿಗಾಗಿ?

ಮೂವೀ ಆರ್ಟಿಸ್ಟ್​ ಅಸೋಸಿಯೇಷನ್ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂಬ ಪ್ರಶ್ನೆಯನ್ನು ಜೆನಿಲಿಯಾ ಡಿಸೋಜಾ ಅವರಿಗೆ ಕೇಳಲಾಯಿತು. ಅದಕ್ಕೆ ಅವರು ಬುದ್ಧಿವಂತಿಕೆಯ ಉತ್ತರ ನೀಡಿದ್ದಾರೆ.

ಜೆನಿಲಿಯಾ ಡಿಸೋಜಾ ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದು ಯಾವ ನಟನಿಗಾಗಿ?
ಜೆನಿಲಿಯಾ ಡಿಸೋಜಾ
TV9 Web
| Edited By: |

Updated on: Oct 10, 2021 | 3:50 PM

Share

ನಟಿ ಜೆನಿಲಿಯಾ ಡಿಸೋಜಾ ಅವರಿಗೆ ಎಲ್ಲ ಭಾಷೆಯಲ್ಲೂ ಅಭಿಮಾನಿಗಳಿದ್ದಾರೆ. ಅವರ ನಟನೆ ಮತ್ತು ಸೌಂದರ್ಯಕ್ಕೆ ಕೋಟ್ಯಂತರ ಫ್ಯಾನ್ಸ್​ ಫಿದಾ ಆಗಿದ್ದಾರೆ. ಸದ್ಯ ಪತಿ ರಿತೇಶ್​ ದೇಶಮುಖ್​ ಜೊತೆಗೆ ಜೆನಿಲಿಯಾ ಹಾಯಾಗಿ ಸಂಸಾರ ಮಾಡಿಕೊಂಡಿದ್ದಾರೆ. ಈ ನಡುವೆ ಅವರು ಮುಂಬೈನಿಂದ ಹೈದರಾಬಾದ್​ಗೆ ಪ್ರಯಾಣ ಬೆಳೆಸಿದ್ದಾರೆ. ತೆಲುಗು ಚಿತ್ರರಂಗದ ಕಲಾವಿದರ ಸಂಘಕ್ಕೆ (ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​) ಚುನಾವಣೆ ನಡೆದಿದೆ. ಈ ಸಂಘದಲ್ಲಿ ಜೆನಿಲಿಯಾ ಕೂಡ ಸದಸ್ಯತ್ವ ಹೊಂದಿದ್ದು, ತಮ್ಮ ಮತ ಚಲಾಯಿಸಲು ಅವರು ಹೈದರಾಬಾದ್​ಗೆ ಬಂದಿಳಿದಿದ್ದಾರೆ. ಬಹುದಿನಗಳ ಬಳಿಕ ಅವರನ್ನು ಕಂಡ ತೆಲುಗು ಫ್ಯಾನ್ಸ್​ ಫುಲ್​ ಖುಷ್​ ಆಗಿದ್ದಾರೆ.

ಮೂವೀ ಆರ್ಟಿಸ್ಟ್​ ಅಸೋಸಿಯೇಷನ್ ಚುನಾವಣೆಯಲ್ಲಿ ಪ್ರಕಾಶ್​ ರಾಜ್​ ಮತ್ತು ವಿಷ್ಣು ಮಂಚು ಅವರು ಮುಖಾಮುಖಿಯಾಗಿ ಸ್ಪರ್ಧಿಸಿದ್ದಾರೆ. ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಇಬ್ಬರೂ ಹಣಾಹಣಿ ನಡೆಸಿದ್ದಾರೆ. ಹಾಗಾದರೆ ಜೆನಿಲಿಯಾ ಅವರು ಇವರಿಬ್ಬರ ಪೈಕಿ ಯಾರಿಗೆ ವೋಟ್​ ಮಾಡಿದ್ದಾರೆ? ಈ ಪ್ರಶ್ನೆ ಎಲ್ಲರ ಮನದಲ್ಲೂ ಕೊರೆಯುತ್ತಿದೆ. ಸದ್ಯಕ್ಕಂತೂ ಟಾಲಿವುಡ್​ನಲ್ಲಿ ಜೆನಿಲಿಯಾ ಸಕ್ರಿಯವಾಗಿಲ್ಲ. ಹಾಗಿದ್ದರೂ ಕೂಡ ಅವರು ಸಮಯ ಮಾಡಿಕೊಂಡು ಮತ ಹಾಕಲು ಬಂದಿದ್ದಾರೆ. ವಿಷ್ಣು ಮಂಚು ಜೊತೆ ಜೆನಿಲಿಯಾ ಅವರು ‘ಧಿ’ ಚಿತ್ರದಲ್ಲಿ ನಟಿಸಿದ್ದರು. ಹಾಗಾಗಿ ವಿಷ್ಣು ಮಂಚುಗೆ ಅವರು ವೋಟ್​ ಹಾಕಿದ್ದಾರೆ ಎಂದು ಅಭಿಮಾನಿಗಳು ಅಂದಾಜಿಸಿದ್ದಾರೆ.

ಈ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂಬ ಪ್ರಶ್ನೆಯನ್ನು ಜೆನಿಲಿಯಾಗೆ ಕೇಳಲಾಯಿತು. ಅದಕ್ಕೆ ಅವರು ಬುದ್ಧಿವಂತಿಕೆಯ ಉತ್ತರ ನೀಡಿದ್ದಾರೆ. ‘ತೆಲುಗು ಚಿತ್ರರಂಗ ನನಗೆ ಆಪ್ತವಾಗಿದೆ. ಇಲ್ಲಿನ ಜನರು ನನಗೆ ಕುಟುಂಬದ ಸದಸ್ಯರಿದ್ದಂತೆ. ಉತ್ತಮ ವ್ಯಕ್ತಿಯೇ ಈ ಚುನಾವಣೆಯಲ್ಲಿ ಗೆಲ್ಲುತ್ತಾರೆ. ಶೀಘ್ರದಲ್ಲೇ ನಾವೆಲ್ಲರೂ ಅಧ್ಯಕ್ಷರ ಸ್ಥಾನದಲ್ಲಿ ಆಕರ್ಷಕ ವ್ಯಕ್ತಿಯನ್ನು ನೋಡುತ್ತೇವೆ’ ಎಂದು ಹೇಳಿದ್ದಾರೆ. ಅವರು ಯಾರ ಬಗ್ಗೆ ಈ ಮಾತು ಹೇಳಿರಬಹುದು ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ.

ಸತ್ಯಂ, ಸೈ, ಹ್ಯಾಪಿ, ಬೊಮ್ಮರಿಲ್ಲು ಸೇರಿದಂತೆ ತೆಲುಗಿನ ಅನೇಕ ಸಿನಿಮಾಗಳಲ್ಲಿ ಜೆನಿಲಿಯಾ ನಟಿಸಿದ್ದಾರೆ. ಕನ್ನಡದ ‘ಸತ್ಯ ಇನ್​ ಲವ್​’ ಚಿತ್ರದಲ್ಲಿ ಶಿವರಾಜ್​ಕುಮಾರ್​ಗೆ ಅವರು ಜೋಡಿ ಆಗಿದ್ದರು. ಹಾಗಾಗಿ ಅವರಿಗೆ ದಕ್ಷಿಣ ಭಾರತದ ಚಿತ್ರರಂಗದ ಬಗ್ಗೆ ಪ್ರೀತಿ ಇದೆ.

ಇದನ್ನೂ ಓದಿ:

ಚುನಾವಣೆಗೆ ನಿಂತ ಪ್ರಕಾಶ್​ ರಾಜ್​; ಮತಗಟ್ಟೆಗೆ ಬಂದು ವೋಟ್​ ಮಾಡಿದ ಪವನ್​ ಕಲ್ಯಾಣ್​, ಚಿರಂಜೀವಿ

ಈ ಅಸಭ್ಯ ಆಂಟಿ ತುಂಬಾನೇ ಓವರ್​ ಆ್ಯಕ್ಟಿಂಗ್​ ಎಂದ ಫ್ಯಾನ್​ಗೆ ಜೆನಿಲಿಯಾ ಡಿಸೋಜಾ ಕೊಟ್ರು ಸೈಲೆಂಟ್​ ಉತ್ತರ

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ